- TV9 Kannada Photo gallery Priyank Kharge inspected the construction of a model toilet from waste materials in a private industry in Doddaballapur Industrial Area
ಬೆಂಗಳೂರು ಗ್ರಾಮಾಂತರ: ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ; ಪರಿಶೀಲಿಸಿದ ಖರ್ಗೆ, ಇಲ್ಲಿದೆ ಪೋಟೋಸ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ. ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
Updated on: Nov 03, 2023 | 10:29 PM

ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭವಾಗಿ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಮಾದರಿ ಶೌಚಾಲಯಗಳನ್ನ ನಿರ್ಮಾಣ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದು, ಮಾದರಿ ಶೌಚಾಲಯಗಳ ಪರಿಶೀಲನೆಯನ್ನ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ.

ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಜೊತೆಗೆ ಸುಲಭವಾಗಿ ನಿರ್ಮಾಣ ಮಾಡಬಹುದಾದ ಇಂತಹ 400 ಶೌಚಾಲಯಗಳನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ತಜ್ಞರ ಜೊತೆ ಆಗಮಿಸಿದ್ದರು.

ಇನ್ನು ಈ ವೇಳೆ ಸಚಿವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಪವನ್ ಕುಮಾರ್, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಸ್ಥಳೀಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.
Read More



