AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಿ ನಿಗಿ ಕೆಂಡ ಕಾರುತ್ತಿರುವ ಮಧ್ಯ ರಾಜ್ಯಪಾಲರ ಜತೆ ಊಟ ಮಾಡಿದ ಡಿಕೆಶಿ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ದೊಡ್ಡ ಬಿರುಗಾಳಿ ಎಬ್ಬಿಸಿದೆ. ಇದು ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ಮಧ್ಯೆ ಹೋರಾಟ ಉಂಟಾಗುವ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಮಧ್ಯೆದ ಮುನಿಸಿಗೆ ಕಾರಣವಾಗಿದೆ. ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೆ ಸಿದ್ದರಾಮಯ್ಯ, ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ನಿಗಿ ನಿಗಿ ಕೆಂಡ ಕಾರುತ್ತಿದ್ದಾರೆ. ಇದರ ಮಧ್ಯ ಡಿಕೆಶಿ ಶಿವಕುಮಾರ್​ ಅವರು ರಾಜ್ಯಪಾಲರ ಜೊತೆಗೆ ಭೋಜನ ಮಾಡಿದ್ದಾರೆ. ಇಬ್ಬರು ಆತ್ಮೀಯವಾಗಿ ಮಾತನಾಡುತ್ತ ಊಟ ಸವಿದ ಫೋಟೋಸ್​ ಇಲ್ಲಿವೆ ನೋಡಿ.

ರಮೇಶ್ ಬಿ. ಜವಳಗೇರಾ
|

Updated on:Aug 28, 2024 | 4:15 PM

Share
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್​ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು, ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.  ಈ ಹಿನ್ನೆಲೆಯಲ್ಲಿ ಸರ್ಕಾರ ವರ್ಸಸ್​ ರಾಜ್ಯಪಾಲ ನಡುವಿನ ಸಂಘರ್ಷ ಜೋರಾಗಿದೆ. ಇದರ ನಡುವೆ ಡಿಕೆ ಶಿವಕುಮಾರ್ ಇಂದು ಇದೇ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್​ ಜೊತೆ ಆತ್ಮೀಯವಾಗಿ ಊಟ ಸವಿದಿದ್ದು, ಇದು ಹಲವರ ಅಚ್ಚರಿಗೆ ಕಾರಣವಾಗಿದೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್​ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು, ಶಾಸಕರು, ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ವರ್ಸಸ್​ ರಾಜ್ಯಪಾಲ ನಡುವಿನ ಸಂಘರ್ಷ ಜೋರಾಗಿದೆ. ಇದರ ನಡುವೆ ಡಿಕೆ ಶಿವಕುಮಾರ್ ಇಂದು ಇದೇ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್​ ಜೊತೆ ಆತ್ಮೀಯವಾಗಿ ಊಟ ಸವಿದಿದ್ದು, ಇದು ಹಲವರ ಅಚ್ಚರಿಗೆ ಕಾರಣವಾಗಿದೆ.

1 / 7
ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್  ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ  ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದಿದೆ. ಈ ಕಾರ್ಯಕ್ರಮದಲ್ಲಿ  ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.

ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದಿದೆ. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.

2 / 7
ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್  ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಮತ್ತು ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಒಟ್ಟಿಗೆ ಕುಳಿತುಕೊಂಡು ಊಟ ಮಾಡಿದ್ದಾರೆ.

ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಮತ್ತು ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಒಟ್ಟಿಗೆ ಕುಳಿತುಕೊಂಡು ಊಟ ಮಾಡಿದ್ದಾರೆ.

3 / 7
ಪ್ರಾಸಿಕ್ಯೂಷನ್​ ವಿಚಾರವಾಗಿ ರಾಜ್ಯಪಾಲರ ವಿರುದ್ಧ  ಡಿಕೆ ಶಿವಕುಮಾರ್ ಸಿಡಿದು ಕೆಂಡವಾಗಿದ್ದಾರೆ. ಆದ್ರೆ, ಕಾರ್ಯಕ್ರಮದಲ್ಲಿ ಇಬ್ಬರು ಆತ್ಮೀಯವಾಗಿ ನಗು ನಗುತ್ತಲೇ ಮಾತನಾಡುತ್ತ ಭೋಜನ ಸವಿದರು.

ಪ್ರಾಸಿಕ್ಯೂಷನ್​ ವಿಚಾರವಾಗಿ ರಾಜ್ಯಪಾಲರ ವಿರುದ್ಧ ಡಿಕೆ ಶಿವಕುಮಾರ್ ಸಿಡಿದು ಕೆಂಡವಾಗಿದ್ದಾರೆ. ಆದ್ರೆ, ಕಾರ್ಯಕ್ರಮದಲ್ಲಿ ಇಬ್ಬರು ಆತ್ಮೀಯವಾಗಿ ನಗು ನಗುತ್ತಲೇ ಮಾತನಾಡುತ್ತ ಭೋಜನ ಸವಿದರು.

4 / 7
ಆಗಸ್ಟ್ 31ರಂದು ರಾಜಭವನ ಚಲೋಗೆ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಹೀಗೆ ರಾಜ್ಯಪಾಲರ ವಿರುದ್ಧ ನಿಗಿ ನಿಗಿ ಕೆಂಡಕಾರುತ್ತಿರುವವರೇ ಪಕ್ಕದಲ್ಲಿ ಕುಳಿತು ಅದು ಹೇಗೆ ಊಟ ಮಾಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ಆಗಸ್ಟ್ 31ರಂದು ರಾಜಭವನ ಚಲೋಗೆ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಹೀಗೆ ರಾಜ್ಯಪಾಲರ ವಿರುದ್ಧ ನಿಗಿ ನಿಗಿ ಕೆಂಡಕಾರುತ್ತಿರುವವರೇ ಪಕ್ಕದಲ್ಲಿ ಕುಳಿತು ಅದು ಹೇಗೆ ಊಟ ಮಾಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

5 / 7
ಹೊರಗೆ ರಾಜ್ಯಪಾಲರ ವಿರುದ್ಧ ಕೆಂಡಕಾರಿರುವ ಡಿಕೆ ಶಿವಕುಮಾರ್ , ಇಂದು ಕಾರ್ಯಕ್ರಮದಲ್ಲಿ ಖುಷಿ ಖುಷಿಯಾಗಿ ರಾಜ್ಯಪಾಲರ ಜೊತೆ ಕೂತು ಊಟ ಮಾಡಿದರು. ಈ ವೇಳೆ ಇಬ್ಬರು ನಗುಮುಗದಲ್ಲೇ ಕುಶಲೋಪರಿ ವಿಚಾರಿಸಿದರು.

ಹೊರಗೆ ರಾಜ್ಯಪಾಲರ ವಿರುದ್ಧ ಕೆಂಡಕಾರಿರುವ ಡಿಕೆ ಶಿವಕುಮಾರ್ , ಇಂದು ಕಾರ್ಯಕ್ರಮದಲ್ಲಿ ಖುಷಿ ಖುಷಿಯಾಗಿ ರಾಜ್ಯಪಾಲರ ಜೊತೆ ಕೂತು ಊಟ ಮಾಡಿದರು. ಈ ವೇಳೆ ಇಬ್ಬರು ನಗುಮುಗದಲ್ಲೇ ಕುಶಲೋಪರಿ ವಿಚಾರಿಸಿದರು.

6 / 7
ಮುಡಾ ಹಗರಣದ ಪ್ರಾಸಿಕ್ಯೂಷನ್​ ಅನುಮತಿ ನೀಡಿರುವ ಮಧ್ಯ ಸರ್ಕಾರದ 11 ಬಿಲ್​ಗಳನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಇದರಿಂದ ಇಡೀ ಸರ್ಕಾರವೇ ರಾಜ್ಯಪಾಲರ ನಡೆಗೆ ತೀವ್ರವಾಗಿ ವಿರೋಧಿಸುತ್ತಿದೆ. ಆದ್ರೆ, ಕಾರ್ಯಕ್ರಮದಲ್ಲಿ ಇವೆಲ್ಲವೂಗಳನ್ನು ಮರೆತು ಡಿಕೆಶಿ, ಥಾವರ್ ಚೆಂದ ಗೆಹ್ಲೋಟ್​ ಖುಷಿ ಖುಷಿಯಲ್ಲಿ ಇರುವುದು ಕಾಣಿಸಿತು.

ಮುಡಾ ಹಗರಣದ ಪ್ರಾಸಿಕ್ಯೂಷನ್​ ಅನುಮತಿ ನೀಡಿರುವ ಮಧ್ಯ ಸರ್ಕಾರದ 11 ಬಿಲ್​ಗಳನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಇದರಿಂದ ಇಡೀ ಸರ್ಕಾರವೇ ರಾಜ್ಯಪಾಲರ ನಡೆಗೆ ತೀವ್ರವಾಗಿ ವಿರೋಧಿಸುತ್ತಿದೆ. ಆದ್ರೆ, ಕಾರ್ಯಕ್ರಮದಲ್ಲಿ ಇವೆಲ್ಲವೂಗಳನ್ನು ಮರೆತು ಡಿಕೆಶಿ, ಥಾವರ್ ಚೆಂದ ಗೆಹ್ಲೋಟ್​ ಖುಷಿ ಖುಷಿಯಲ್ಲಿ ಇರುವುದು ಕಾಣಿಸಿತು.

7 / 7

Published On - 4:09 pm, Wed, 28 August 24

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್