ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ರಾಜ್ಯಾದ್ಯಂತ 225ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಈ ಸಾಕ್ಷ್ಯಚಿತ್ರ ರಿಲೀಸ್ ಆಗುತ್ತಿದೆ.
ಈ ಡಾಕ್ಯುಮೆಂಟರಿಗೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ಸ್ ಮೂಲಕ ಇದು ನಿರ್ಮಾಣ ಆಗಿದೆ. ಕರುನಾಡಿನ ಕಾಡುಗಳನ್ನು ಸಂಚರಿಸಿ ಅಪ್ಪು ಈ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ.
ಗುರುವಾರ (ಅ.27) ರಾತ್ರಿಯೇ ಹಲವು ಕಡೆಗಳಲ್ಲಿ ‘ಗಂಧದ ಗುಡಿ’ ಪ್ರೀಮಿಯರ್ ಶೋ ಆಯೋಜನೆಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ. ಸಾಕಷ್ಟು ಅಭಿಮಾನಿಗಳು ಕೂಡ ವೀಕ್ಷಿಸಲಿದ್ದಾರೆ.
‘ಗಂಧದ ಗುಡಿ’ ಯಶಸ್ವಿ ಆಗಲಿ ಎಂದು ನಿರ್ದೇಶಕ ಅಮೋಘವರ್ಷ ಅವರು ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್ ಇಟ್ಟು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ಕುಟುಂಬದವರು ಸಾಥ್ ನೀಡಿದರು.
ದಾಖಲೆ ಪ್ರಮಾಣದಲ್ಲಿ ‘ಗಂಧದ ಗುಡಿ’ ಶೋ ಆಯೋಜನೆಗೊಂಡಿದೆ. ರಾಜ್ಯಾದ್ಯಂತ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರುತ್ತಿದ್ದಾರೆ. ವಿದೇಶದಲ್ಲೂ ‘ಗಂಧದ ಗುಡಿ’ ತೆರೆಕಾಣುತ್ತಿದೆ.