AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿ ಜಗನ್ನಾಥ ರಥಯಾತ್ರೆಗೂ ಮುನ್ನ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಭೇಟಿಯಾದ ಧರ್ಮೇಂದ್ರ ಪ್ರಧಾನ್, ಅಶ್ವಿನಿ ವೈಷ್ಣವ್

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪುರಿ ಜಗನ್ನಾಥ ರಥಯಾತ್ರೆಗೂ ಮುನ್ನ ಮಂಗಳವಾರ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Ganapathi Sharma
|

Updated on: Jun 20, 2023 | 10:17 PM

Share
Puri Jagannath Rath Yatra Union Minister Ashwini Vaishnaw and Dharmendra Pradhan meet Shankaracharya Swami Nischalananda Saraswati

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಜೂನ್ 19 ರಿಂದ 3 ದಿನಗಳ ಒಡಿಶಾ ಪ್ರವಾಸದಲ್ಲಿದ್ದಾರೆ. ಸೋಮವಾರವೇ ರಥಯಾತ್ರೆಗಾಗಿ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದ್ದ ಅವರು, ಮಂಗಳವಾರದಂದು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

1 / 5
Puri Jagannath Rath Yatra Union Minister Ashwini Vaishnaw and Dharmendra Pradhan meet Shankaracharya Swami Nischalananda Saraswati

ಮಹಾಪ್ರಭು ಜಗನ್ನಾಥರ ರಥಯಾತ್ರೆಯ ಭವ್ಯತೆ ಮನಮೋಹಕವಾಗಿದೆ. ರಥಯಾತ್ರೆಯಲ್ಲಿ ಭಾಗವಹಿಸಲು ಪುರಿಯಲ್ಲಿ ಲಕ್ಷಾಂತರ ಭಕ್ತರು ಸೇರಿಕೊಂಡಿದ್ದಾರೆ. ಮಹಾಪ್ರಭುವಿನ ಪಾದಗಳಿಗೆ ನಮಸ್ಕರಿಸಿದ್ದೇವೆ. ಸರ್ವಶಕ್ತನು ನಮಗೆ ‘ಸನ್ಮಾರ್ಗ’ದ ಹಾದಿಯಲ್ಲಿ ಮಾರ್ಗದರ್ಶನ ನೀಡಲಿ ಮತ್ತು ನಮ್ಮೆಲ್ಲರನ್ನು ಆಶೀರ್ವದಿಸಲಿ. ಜೈ ಜಗನ್ನಾಥ ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ.

2 / 5
Puri Jagannath Rath Yatra Union Minister Ashwini Vaishnaw and Dharmendra Pradhan meet Shankaracharya Swami Nischalananda Saraswati

ಇಂದು ನಾವು ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿದ್ದೇವೆ. ಜಗನ್ನಾಥರ ರಥಯಾತ್ರೆಯಲ್ಲಿ ಪಾಲ್ಗೊಳ್ಳುವುದು ಒಂದು ಸೌಭಾಗ್ಯ. ಇಂದು ಮಹಾಪ್ರಭುವಿನ ಆದೇಶದಂತೆ ನಾವು ರಥಯಾತ್ರೆಗೆ ಬಂದಿದ್ದೇವೆ. ಅದಕ್ಕೂ ಮುನ್ನ ಪೂಜ್ಯ ಶಂಕರಾಚಾರ್ಯದ ದರ್ಶನವನ್ನೂ ಪಡೆದು ಆಶೀರ್ವಾದ ಪಡೆದೆವು ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

3 / 5
Puri Jagannath Rath Yatra Union Minister Ashwini Vaishnaw and Dharmendra Pradhan meet Shankaracharya Swami Nischalananda Saraswati

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಹೆಸರು ವಿಶ್ವದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿದೆ. ಭಾರತದ ಹೆಸರು ಇನ್ನಷ್ಟು ಬೆಳಗಲಿ ಎಂದು ಪ್ರಾರ್ಥಿಸಿದೆವು. ಇದಕ್ಕಾಗಿ ಶಂಕರಾಚಾರ್ಯರ ಆಶೀರ್ವಾದ ಬೇಡಿದೆವು ಎಂದು ಪ್ರಧಾನ್ ಹೇಳಿದ್ದಾರೆ.

4 / 5
Puri Jagannath Rath Yatra Union Minister Ashwini Vaishnaw and Dharmendra Pradhan meet Shankaracharya Swami Nischalananda Saraswati

ಮಹಾಪ್ರಭು ಶ್ರೀ ಜಗನ್ನಾಥ ಜೀ ಅವರ ಜಗತ್ಪ್ರಸಿದ್ಧ ರಥಯಾತ್ರೆ ಪ್ರಾರಂಭವಾಗುತ್ತಿದೆ. ಇದರಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಹರ್ಷವಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಕೂಡ ಟ್ವೀಟ್ ಮಾಡಿದ್ದರು. ಪುರಿಯಲ್ಲಿ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಮಂಗಳವಾರ ಪ್ರಾರಂಭವಾಗಿದ್ದು, ಭಕ್ತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಕೂಡ ಶುಭ ಹಾರೈಸಿದ್ದಾರೆ.

5 / 5
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ