AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋದಿಂದ ‘ಪುಷ್ಪಕ’ ಆರ್​ಎಲ್​ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿಯ ಎಟಿಆರ್​ನಲ್ಲಿ (ಎರೊನೆಟಿಕಲ್ ಟೆಸ್ಟ್ ರೇಂಜ್) ಇಸ್ರೋದ ‘ಪುಷ್ಪಕ’ ಆರ್​ಎಲ್​ವಿ (ಮರು ಬಳಕೆ ಉಡಾವಣ ವಾಹನ) ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಈ ಬಗ್ಗೆ ಇಸ್ರೋ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 22, 2024 | 10:02 AM

Share
ಇಸ್ರೋದಿಂದ ‘ಪುಷ್ಪಕ’ ಆರ್​ಎಲ್​ವಿ (ಮರು ಬಳಕೆ ಉಡಾವಣ ವಾಹನ) ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿಯ ಎಟಿಆರ್​ನಲ್ಲಿ (ಎರೊನೆಟಿಕಲ್ ಟೆಸ್ಟ್ ರೇಂಜ್) ಯಶಸ್ವಿ ಪ್ರಯೋಗ ಮಾಡಲಾಗಿದೆ.

ಇಸ್ರೋದಿಂದ ‘ಪುಷ್ಪಕ’ ಆರ್​ಎಲ್​ವಿ (ಮರು ಬಳಕೆ ಉಡಾವಣ ವಾಹನ) ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿಯ ಎಟಿಆರ್​ನಲ್ಲಿ (ಎರೊನೆಟಿಕಲ್ ಟೆಸ್ಟ್ ರೇಂಜ್) ಯಶಸ್ವಿ ಪ್ರಯೋಗ ಮಾಡಲಾಗಿದೆ.

1 / 6
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ. ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್​ನಲ್ಲಿ (ATR) ನಡೆಸಲಾದ ಸರಣಿಯ ಎರಡನೆಯ RLV LEX-02 ಲ್ಯಾಂಡಿಂಗ್ ಪ್ರಯೋಗ ಇಂದು ಬೆಳಿಗ್ಗೆ 7 ಗಂಟೆಗೆ ನಡೆಸಲಾಗಿದೆ. ಆ ಮೂಲಕ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ತಂತ್ರಜ್ಞಾನದ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ. ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್​ನಲ್ಲಿ (ATR) ನಡೆಸಲಾದ ಸರಣಿಯ ಎರಡನೆಯ RLV LEX-02 ಲ್ಯಾಂಡಿಂಗ್ ಪ್ರಯೋಗ ಇಂದು ಬೆಳಿಗ್ಗೆ 7 ಗಂಟೆಗೆ ನಡೆಸಲಾಗಿದೆ. ಆ ಮೂಲಕ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ತಂತ್ರಜ್ಞಾನದ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.

2 / 6
RLV-LEX-01 ಮಿಷನ್ ಕಳೆದ ವರ್ಷ ಪೂರ್ಣಗೊಂಡ ನಂತರ, RLV-LEX-02ನ ಲ್ಯಾಂಡಿಂಗ್ ಸಾಮರ್ಥ್ಯವನ್ನು ಪರಿಶೀಲಿಸಲಾಯಿತು. ಅದರಂತೆ ಯಶಸ್ವಿಯಾಗಿ ರನ್‌ವೇ ಮೇಲೆ ಇಳಿದಿದೆ. ಪುಷ್ಪಕ್ ಎಂಬ ವಾಹವನ್ನು ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್ ಮೂಲಕ ಮೇಲಕ್ಕೆ ಕೊಂಡೊಯ್ಯಲಾಯಿತು. ಬಳಿಕ 4.5 ಕಿಮೀ ಎತ್ತರದಿಂದ ಅದನ್ನು ಲ್ಯಾಂಡಿಗ್​ಗೆ ಬಿಡಲಾಯಿತು. ಇದು ರನ್‌ವೇಯಲ್ಲಿ ನಿಖರವಾಗಿ ಇಳಿಯಿತು ಮತ್ತು ಬ್ರೇಕ್ ಪ್ಯಾರಾಚೂಟ್, ಲ್ಯಾಂಡಿಂಗ್ ಗೇರ್ ಬ್ರೇಕ್‌ಗಳು ಮತ್ತು ನೋಸ್ ವೀಲ್ ಸ್ಟೀರಿಂಗ್ ಸಿಸ್ಟಮ್ ಅನ್ನು ಬಳಸಿಕೊಂಡು ನಿಲ್ಲಿಸಿತು.

RLV-LEX-01 ಮಿಷನ್ ಕಳೆದ ವರ್ಷ ಪೂರ್ಣಗೊಂಡ ನಂತರ, RLV-LEX-02ನ ಲ್ಯಾಂಡಿಂಗ್ ಸಾಮರ್ಥ್ಯವನ್ನು ಪರಿಶೀಲಿಸಲಾಯಿತು. ಅದರಂತೆ ಯಶಸ್ವಿಯಾಗಿ ರನ್‌ವೇ ಮೇಲೆ ಇಳಿದಿದೆ. ಪುಷ್ಪಕ್ ಎಂಬ ವಾಹವನ್ನು ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್ ಮೂಲಕ ಮೇಲಕ್ಕೆ ಕೊಂಡೊಯ್ಯಲಾಯಿತು. ಬಳಿಕ 4.5 ಕಿಮೀ ಎತ್ತರದಿಂದ ಅದನ್ನು ಲ್ಯಾಂಡಿಗ್​ಗೆ ಬಿಡಲಾಯಿತು. ಇದು ರನ್‌ವೇಯಲ್ಲಿ ನಿಖರವಾಗಿ ಇಳಿಯಿತು ಮತ್ತು ಬ್ರೇಕ್ ಪ್ಯಾರಾಚೂಟ್, ಲ್ಯಾಂಡಿಂಗ್ ಗೇರ್ ಬ್ರೇಕ್‌ಗಳು ಮತ್ತು ನೋಸ್ ವೀಲ್ ಸ್ಟೀರಿಂಗ್ ಸಿಸ್ಟಮ್ ಅನ್ನು ಬಳಸಿಕೊಂಡು ನಿಲ್ಲಿಸಿತು.

3 / 6
ಈ ಎರಡನೇ ಮಿಷನ್‌ನೊಂದಿಗೆ, ನ್ಯಾವಿಗೇಷನ್, ಕಂಟ್ರೋಲ್ ಸಿಸ್ಟಮ್ಸ್, ಲ್ಯಾಂಡಿಂಗ್ ಗೇರ್ ಮತ್ತು ಡಿಸೆಲರೇಶನ್ ಸಿಸ್ಟಮ್‌ಗಳಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಇಸ್ರೋ ಮರು-ಮೌಲ್ಯಮಾಪನ ಮಾಡಿದೆ. ಇದು ಆಸ್ಪೇಸ್ ರಿಟರ್ನ್ ವಾಹನದ ಹೆಚ್ಚಿನ-ವೇಗದ ಸ್ವಾಯತ್ತ ಲ್ಯಾಂಡಿಂಗ್ ಅನ್ನು ನಿರ್ವಹಿಸಲು ಅವಶ್ಯಕವಾಗಿದೆ.

ಈ ಎರಡನೇ ಮಿಷನ್‌ನೊಂದಿಗೆ, ನ್ಯಾವಿಗೇಷನ್, ಕಂಟ್ರೋಲ್ ಸಿಸ್ಟಮ್ಸ್, ಲ್ಯಾಂಡಿಂಗ್ ಗೇರ್ ಮತ್ತು ಡಿಸೆಲರೇಶನ್ ಸಿಸ್ಟಮ್‌ಗಳಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಇಸ್ರೋ ಮರು-ಮೌಲ್ಯಮಾಪನ ಮಾಡಿದೆ. ಇದು ಆಸ್ಪೇಸ್ ರಿಟರ್ನ್ ವಾಹನದ ಹೆಚ್ಚಿನ-ವೇಗದ ಸ್ವಾಯತ್ತ ಲ್ಯಾಂಡಿಂಗ್ ಅನ್ನು ನಿರ್ವಹಿಸಲು ಅವಶ್ಯಕವಾಗಿದೆ.

4 / 6
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ಜೊತೆಗೆ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ಮತ್ತು ISRO ಇನರ್ಷಿಯಲ್ ಸಿಸ್ಟಮ್ಸ್ ಯುನಿಟ್ (llSU) ಮೂಲಕ ಈ ಕಾರ್ಯಾಚರಣೆಯನ್ನು ಸಾಧಿಸಲಾಗಿದೆ. IAF, ADE, ADRDE ಮತ್ತು CEMILAC ಸೇರಿದಂತೆ ವಿವಿಧ ಏಜೆನ್ಸಿಗಳ ಸಹಯೋಗವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದರು.

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) ಜೊತೆಗೆ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ಮತ್ತು ISRO ಇನರ್ಷಿಯಲ್ ಸಿಸ್ಟಮ್ಸ್ ಯುನಿಟ್ (llSU) ಮೂಲಕ ಈ ಕಾರ್ಯಾಚರಣೆಯನ್ನು ಸಾಧಿಸಲಾಗಿದೆ. IAF, ADE, ADRDE ಮತ್ತು CEMILAC ಸೇರಿದಂತೆ ವಿವಿಧ ಏಜೆನ್ಸಿಗಳ ಸಹಯೋಗವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದರು.

5 / 6
ಈ ಯಶಸ್ಸಿನ ಮೂಲಕ, ಎಸ್‌ಆರ್‌ಒ ಟೆನಿನಲ್ ಹಂತದ ಕುಶಲತೆ, ಲ್ಯಾಂಡಿಂಗ್ ಮತ್ತು ಇಂಧನ ನಿರ್ವಹಣೆಯನ್ನು ಸಂಪೂರ್ಣ ಸ್ವಾಯತ್ತ ಕ್ರಮದಲ್ಲಿ ಕರಗತ ಮಾಡಿಕೊಳ್ಳಬಹುದು, ಇದು ಭವಿಷ್ಯದ ಕಕ್ಷೀಯ ಮರುಪ್ರವೇಶ ಕಾರ್ಯಾಚರಣೆಗಳ ಕಡೆಗೆ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಲ್ಯಾಂಡಿಂಗ್ ಎಕ್ಸ್‌ಪೆರಿಮೆನ್‌ನ ನಿರ್ದೇಶಕ ವಿಎಸ್‌ಎಸ್‌ಸಿ ಡಾ ಎಸ್ ಉನ್ನಿಕೃಷ್ಣನ್ ನಾಯರ್ ಹೇಳಿದರು.

ಈ ಯಶಸ್ಸಿನ ಮೂಲಕ, ಎಸ್‌ಆರ್‌ಒ ಟೆನಿನಲ್ ಹಂತದ ಕುಶಲತೆ, ಲ್ಯಾಂಡಿಂಗ್ ಮತ್ತು ಇಂಧನ ನಿರ್ವಹಣೆಯನ್ನು ಸಂಪೂರ್ಣ ಸ್ವಾಯತ್ತ ಕ್ರಮದಲ್ಲಿ ಕರಗತ ಮಾಡಿಕೊಳ್ಳಬಹುದು, ಇದು ಭವಿಷ್ಯದ ಕಕ್ಷೀಯ ಮರುಪ್ರವೇಶ ಕಾರ್ಯಾಚರಣೆಗಳ ಕಡೆಗೆ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಲ್ಯಾಂಡಿಂಗ್ ಎಕ್ಸ್‌ಪೆರಿಮೆನ್‌ನ ನಿರ್ದೇಶಕ ವಿಎಸ್‌ಎಸ್‌ಸಿ ಡಾ ಎಸ್ ಉನ್ನಿಕೃಷ್ಣನ್ ನಾಯರ್ ಹೇಳಿದರು.

6 / 6
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ