AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badminton: ವಿಶ್ವ ಚಾಂಪಿಯನ್‌ಶಿಪ್‌ನಿಂದ ಪಿವಿ ಸಿಂಧು ಔಟ್! ಮೂರನೇ ಸುತ್ತಿಗೆ ಲಕ್ಷ್ಯ ಸೇನ್

World Championship: ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರ್ತಿಯಾಗಿರುವ ಸಿಂಧು ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪದೇ ಇರುವುದು ಇದೇ ಮೊದಲು. 2019ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಸಿಂಧು, ಈ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ.

ಪೃಥ್ವಿಶಂಕರ
|

Updated on: Aug 23, 2023 | 9:34 AM

Share
ಇತ್ತಿಚಿನ ದಿನಗಳಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನ ಎರಡನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ಹೊರಬಿದಿದ್ದಾರೆ.

ಇತ್ತಿಚಿನ ದಿನಗಳಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನ ಎರಡನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ಹೊರಬಿದಿದ್ದಾರೆ.

1 / 7
ವಿಶ್ವ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ ಸಿಂಧು, ಎರಡನೇ ಸುತ್ತಿನಲ್ಲಿ ಜಪಾನ್‌ನ ನಜೋಮಿ ಒಕುಹರಾ ವಿರುದ್ಧ 21-14, 21-14 ನೇರ ಗೇಮ್‌ಗಳಿಂದ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ ಸಿಂಧು, ಎರಡನೇ ಸುತ್ತಿನಲ್ಲಿ ಜಪಾನ್‌ನ ನಜೋಮಿ ಒಕುಹರಾ ವಿರುದ್ಧ 21-14, 21-14 ನೇರ ಗೇಮ್‌ಗಳಿಂದ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

2 / 7
ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರ್ತಿಯಾಗಿರುವ ಸಿಂಧು ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪದೇ ಇರುವುದು ಇದೇ ಮೊದಲು. 2019ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಸಿಂಧು, ಈ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ.

ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರ್ತಿಯಾಗಿರುವ ಸಿಂಧು ಈ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪದೇ ಇರುವುದು ಇದೇ ಮೊದಲು. 2019ರಲ್ಲಿ ಈ ಪ್ರಶಸ್ತಿ ಗೆದ್ದಿದ್ದ ಸಿಂಧು, ಈ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ.

3 / 7
ಸಿಂಧು ಮತ್ತು ಒಕುಹರಾ ಮೂರು ವರ್ಷಗಳ ನಂತರ ಪರಸ್ಪರ ಮುಖಾಮುಖಿಯಾಗಿದ್ದರು. ಒಕುಹರಾ ನಿಧಾನವಾಗಿ ಪ್ರಾರಂಭಿಸಿ ಆ ನಂತರ ವೇಗವನ್ನು ಹೆಚ್ಚಿಸಿದರು. ಮೊದಲ ಗೇಮ್‌ನಲ್ಲಿ ಸ್ಕೋರ್ 6-6 ರಲ್ಲಿ ಸಮನಾಗಿತ್ತು. ಆದರೆ ವಿರಾಮದ ವೇಳಗೆ ಒಕುಹರಾ 11-9 ಮುನ್ನಡೆ ಕಾಯ್ದುಕೊಂಡರು. ವಿರಾಮದ ನಂತರವೂ ಪ್ರಾಬಲ್ಯ ಮೆರೆದ ಒಕುಹರಾ 16-12 ರಿಂದ ಮುನ್ನಡೆ ಸಾಧಿಸಿದರು.

ಸಿಂಧು ಮತ್ತು ಒಕುಹರಾ ಮೂರು ವರ್ಷಗಳ ನಂತರ ಪರಸ್ಪರ ಮುಖಾಮುಖಿಯಾಗಿದ್ದರು. ಒಕುಹರಾ ನಿಧಾನವಾಗಿ ಪ್ರಾರಂಭಿಸಿ ಆ ನಂತರ ವೇಗವನ್ನು ಹೆಚ್ಚಿಸಿದರು. ಮೊದಲ ಗೇಮ್‌ನಲ್ಲಿ ಸ್ಕೋರ್ 6-6 ರಲ್ಲಿ ಸಮನಾಗಿತ್ತು. ಆದರೆ ವಿರಾಮದ ವೇಳಗೆ ಒಕುಹರಾ 11-9 ಮುನ್ನಡೆ ಕಾಯ್ದುಕೊಂಡರು. ವಿರಾಮದ ನಂತರವೂ ಪ್ರಾಬಲ್ಯ ಮೆರೆದ ಒಕುಹರಾ 16-12 ರಿಂದ ಮುನ್ನಡೆ ಸಾಧಿಸಿದರು.

4 / 7
ಹೀಗಾಗಿ ಮೊದಲ ಗೇಮ್‌ ಸೋತ ಸಿಂಧು, ಎರಡನೇ ಗೇಮ್‌ನಲ್ಲಿ ಉತ್ತಮ ಆರಂಭ ಪಡೆದು 9-0 ಮುನ್ನಡೆ ಸಾಧಿಸಿದರು. ಆದರೆ ನಂತರ ಒಕುಹರಾ ಪುನರಾಗಮನ ಮಾಡಿದರು. ಆದರೆ ವಿರಾಮದ ವೇಳೆಗೆ ಸಿಂಧು 11-9 ರ ಮುನ್ನಡೆ ಕಾಯ್ದುಕೊಂಡರು. ವಿರಾಮದ ನಂತರ ಪುನರಾಗಮನ ಮಾಡಿದ ಒಕುಹರಾ ಸಿಂಧು ಮಾಡಿದ ತಪ್ಪುಗಳ ಲಾಭ ಪಡೆದು ಗೇಮ್ ಜೊತೆಗೆ ಪಂದ್ಯವನ್ನೂ ಗೆದ್ದರು.

ಹೀಗಾಗಿ ಮೊದಲ ಗೇಮ್‌ ಸೋತ ಸಿಂಧು, ಎರಡನೇ ಗೇಮ್‌ನಲ್ಲಿ ಉತ್ತಮ ಆರಂಭ ಪಡೆದು 9-0 ಮುನ್ನಡೆ ಸಾಧಿಸಿದರು. ಆದರೆ ನಂತರ ಒಕುಹರಾ ಪುನರಾಗಮನ ಮಾಡಿದರು. ಆದರೆ ವಿರಾಮದ ವೇಳೆಗೆ ಸಿಂಧು 11-9 ರ ಮುನ್ನಡೆ ಕಾಯ್ದುಕೊಂಡರು. ವಿರಾಮದ ನಂತರ ಪುನರಾಗಮನ ಮಾಡಿದ ಒಕುಹರಾ ಸಿಂಧು ಮಾಡಿದ ತಪ್ಪುಗಳ ಲಾಭ ಪಡೆದು ಗೇಮ್ ಜೊತೆಗೆ ಪಂದ್ಯವನ್ನೂ ಗೆದ್ದರು.

5 / 7
ಯುವ ತಾರೆ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿಗೆ ಲಗ್ಗೆ ಇಟ್ಟಿರುವುದು ಭಾರತಕ್ಕೆ ಸಮಾಧಾನದ ಸಂಗತಿಯಾಗಿದೆ. 2021ರ ವಿಶ್ವ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಲಕ್ಷ್ಯ, ಈ ಆವೃತ್ತಿಯ ಎರಡನೇ ಸುತ್ತಿನಲ್ಲಿ ವಿಶ್ವದ 51ನೇ ಶ್ರೇಯಾಂಕದ ಕೊರಿಯಾದ ಜಿಯೋನ್ ಹ್ಯೊಕ್ ಜಿನ್ ಅವರನ್ನು 21-11 21-12 ಸೆಟ್‌ಗಳಿಂದ ಸೋಲಿಸಿದರು.

ಯುವ ತಾರೆ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿಗೆ ಲಗ್ಗೆ ಇಟ್ಟಿರುವುದು ಭಾರತಕ್ಕೆ ಸಮಾಧಾನದ ಸಂಗತಿಯಾಗಿದೆ. 2021ರ ವಿಶ್ವ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಲಕ್ಷ್ಯ, ಈ ಆವೃತ್ತಿಯ ಎರಡನೇ ಸುತ್ತಿನಲ್ಲಿ ವಿಶ್ವದ 51ನೇ ಶ್ರೇಯಾಂಕದ ಕೊರಿಯಾದ ಜಿಯೋನ್ ಹ್ಯೊಕ್ ಜಿನ್ ಅವರನ್ನು 21-11 21-12 ಸೆಟ್‌ಗಳಿಂದ ಸೋಲಿಸಿದರು.

6 / 7
ಈ ಗೆಲುವಿನೊಂದಿಗೆ ಲಕ್ಷ್ಯ ಏಷ್ಯಾ ಟೀಮ್ ಚಾಂಪಿಯನ್‌ಶಿಪ್-2022ರ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಇದೀಗ ಲಕ್ಷ್ಯ ಮುಂದಿನ ಸುತ್ತಿನಲ್ಲಿ ಥಾಯ್ಲೆಂಡ್‌ನ ಕುನ್ಲಾವುಟ್ ವಿಟಿಡ್ಸರ್ನ್ ಅವರನ್ನು ಎದುರಿಸುವ ಸಾಧ್ಯತೆಗಳಿವೆ.

ಈ ಗೆಲುವಿನೊಂದಿಗೆ ಲಕ್ಷ್ಯ ಏಷ್ಯಾ ಟೀಮ್ ಚಾಂಪಿಯನ್‌ಶಿಪ್-2022ರ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಇದೀಗ ಲಕ್ಷ್ಯ ಮುಂದಿನ ಸುತ್ತಿನಲ್ಲಿ ಥಾಯ್ಲೆಂಡ್‌ನ ಕುನ್ಲಾವುಟ್ ವಿಟಿಡ್ಸರ್ನ್ ಅವರನ್ನು ಎದುರಿಸುವ ಸಾಧ್ಯತೆಗಳಿವೆ.

7 / 7
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!