AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಘವೇಂದ್ರ ರಾಜ್​ಕುಮಾರ್​, ಶ್ರುತಿ ನಟನೆಯ ‘13’ ಸಿನಿಮಾ ಈ ವಾರ ಬಿಡುಗಡೆ; ಏನಿದರ ವಿಶೇಷ?

ನಟ ರಾಘವೇಂದ್ರ ರಾಜ್​ಕುಮಾರ್​ ಅವರು ತಮಗೆ ಒಪ್ಪುವಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಅವರು ನಟಿಸಿರುವ ‘13’ ಸಿನಿಮಾ ಈ ವಾರ (ಸೆ.15) ಬಿಡುಗಡೆ ಆಗುತ್ತಿದೆ. ಭಾವೈಕ್ಯತೆಯ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಅಲ್ಲದೇ, 13 ಕೋಟಿ ರೂಪಾಯಿ ದುಡ್ಡಿನ ಸುತ್ತಲೂ ಈ ಚಿತ್ರದ ಕಥೆ ಸಾಗುತ್ತದೆ.

ಮದನ್​ ಕುಮಾರ್​
|

Updated on: Sep 14, 2023 | 2:55 PM

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

1 / 5
‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

2 / 5
ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

3 / 5
‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

4 / 5
ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

5 / 5
Follow us
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು