ರಾಘವೇಂದ್ರ ರಾಜ್​ಕುಮಾರ್​, ಶ್ರುತಿ ನಟನೆಯ ‘13’ ಸಿನಿಮಾ ಈ ವಾರ ಬಿಡುಗಡೆ; ಏನಿದರ ವಿಶೇಷ?

ನಟ ರಾಘವೇಂದ್ರ ರಾಜ್​ಕುಮಾರ್​ ಅವರು ತಮಗೆ ಒಪ್ಪುವಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಅವರು ನಟಿಸಿರುವ ‘13’ ಸಿನಿಮಾ ಈ ವಾರ (ಸೆ.15) ಬಿಡುಗಡೆ ಆಗುತ್ತಿದೆ. ಭಾವೈಕ್ಯತೆಯ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಅಲ್ಲದೇ, 13 ಕೋಟಿ ರೂಪಾಯಿ ದುಡ್ಡಿನ ಸುತ್ತಲೂ ಈ ಚಿತ್ರದ ಕಥೆ ಸಾಗುತ್ತದೆ.

|

Updated on: Sep 14, 2023 | 2:55 PM

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

1 / 5
‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

2 / 5
ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

3 / 5
‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

4 / 5
ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

5 / 5
Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ