AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಘವೇಂದ್ರ ರಾಜ್​ಕುಮಾರ್​, ಶ್ರುತಿ ನಟನೆಯ ‘13’ ಸಿನಿಮಾ ಈ ವಾರ ಬಿಡುಗಡೆ; ಏನಿದರ ವಿಶೇಷ?

ನಟ ರಾಘವೇಂದ್ರ ರಾಜ್​ಕುಮಾರ್​ ಅವರು ತಮಗೆ ಒಪ್ಪುವಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಅವರು ನಟಿಸಿರುವ ‘13’ ಸಿನಿಮಾ ಈ ವಾರ (ಸೆ.15) ಬಿಡುಗಡೆ ಆಗುತ್ತಿದೆ. ಭಾವೈಕ್ಯತೆಯ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಅಲ್ಲದೇ, 13 ಕೋಟಿ ರೂಪಾಯಿ ದುಡ್ಡಿನ ಸುತ್ತಲೂ ಈ ಚಿತ್ರದ ಕಥೆ ಸಾಗುತ್ತದೆ.

ಮದನ್​ ಕುಮಾರ್​
|

Updated on: Sep 14, 2023 | 2:55 PM

Share
ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

1 / 5
‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

2 / 5
ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

3 / 5
‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

4 / 5
ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ