ರಾಘವೇಂದ್ರ ರಾಜ್​ಕುಮಾರ್​, ಶ್ರುತಿ ನಟನೆಯ ‘13’ ಸಿನಿಮಾ ಈ ವಾರ ಬಿಡುಗಡೆ; ಏನಿದರ ವಿಶೇಷ?

ನಟ ರಾಘವೇಂದ್ರ ರಾಜ್​ಕುಮಾರ್​ ಅವರು ತಮಗೆ ಒಪ್ಪುವಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಅವರು ನಟಿಸಿರುವ ‘13’ ಸಿನಿಮಾ ಈ ವಾರ (ಸೆ.15) ಬಿಡುಗಡೆ ಆಗುತ್ತಿದೆ. ಭಾವೈಕ್ಯತೆಯ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಅಲ್ಲದೇ, 13 ಕೋಟಿ ರೂಪಾಯಿ ದುಡ್ಡಿನ ಸುತ್ತಲೂ ಈ ಚಿತ್ರದ ಕಥೆ ಸಾಗುತ್ತದೆ.

|

Updated on: Sep 14, 2023 | 2:55 PM

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

ರಾಘವೇದ್ರ ರಾಜ್‌ಕುಮಾರ್ ಅವರು ‘13’ ಸಿನಿಮಾದಲ್ಲಿ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಎಂಬ ಪಾತ್ರ ಮಾಡಿದ್ದಾರೆ. ಅವರ ಜೊತೆ ಹಿರಿಯ ನಟಿ ಶ್ರುತಿ ಅವರು ಸಾಯಿರಾ ಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಖ್ಯಾತ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದಾರೆ. ಅವರು ‌ಪೊಲೀಸ್ ಅಧಿಕಾರಿಯ ಪಾತ್ರವನ್ನು ಮಾಡಿದ್ದಾರೆ.

1 / 5
‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

‘ಪಲ್ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನರೇಂದ್ರ ಬಾಬು ಅವರ ‘13’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಮಾಜಸೇವಕ ಅನಿಲ್ ಕುಮಾರ್ ಅವರು ಅರ್ಪಿಸುವ ಈ ಸಿನಿಮಾವನ್ನು ‘ಯುವಿ ಪ್ರೊಡಕ್ಷನ್ಸ್’ ಬ್ಯಾನರ್​ ಮೂಲಕ ಮಂಜುನಾಥ್ ಗೌಡ, ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್ ಮತ್ತು ಸಿ. ಕೇಶವಮೂರ್ತಿಅವರು ನಿರ್ಮಿಸಿದ್ದಾರೆ.

2 / 5
ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

ಹಿಂದೂ-ಮುಸ್ಲಿಂ ಎಂಬ ತಾರತಮ್ಯ ಇಲ್ಲದೇ ನಾಯಕ ಮತ್ತು ನಾಯಕಿ ಗಂಡ-ಹೆಂಡತಿ ಆಗಿ ಅನ್ಯೋನ್ಯವಾಗಿ ಬದುಕು ನಡೆಸುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಅವರ ಜೀವನದಲ್ಲಿ ಅನೇಕ ತಿರುವುಗಳು ಎದರಾಗುತ್ತವೆ. ಅದು ಅಂತಿಮವಾಗಿ ಅವರನ್ನು ಯಾವ ಹಂತಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದು ‘13’ ಸಿನಿಮಾದ ಕಥಾಸಾರಾಂಶ.

3 / 5
‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

‘13’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ವೈರಲ್ ಆಗಿದೆ. ಸಿನಿಪ್ರಿಯರಿಗೆ ಇದು ಇಷ್ಟವಾಗಿದೆ. ಸಿನಿಮಾದಲ್ಲಿ ಐಟಂ ಸಾಂಗ್, ಮದ್ಯಪಾನದ ದೃಶ್ಯಗಳು ಇರುವುದರಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಯಾವುದೇ ಕಟ್ಸ್​ ನೀಡಿಲ್ಲ. ಈ ಸಿನಿಮಾಗೆ ಶೋಗನ್‌ಬಾಬು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿವೆ.

4 / 5
ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

ಅಜಯ್ ಮಂಜು ಅವರು ‘13’ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಗಿರೀಶ್ ಕುಮಾರ್ ಅವರ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.ಮದನ್ ಹರಿಣಿ, ಶಶಿಕುಮಾರ್ ಅವರು ಡ್ಯಾನ್ಸ್​ ಕೊರಿಯೋಗ್ರಫಿ ಮಾಡಿದ್ದಾರೆ. ಜಯಸಿಂಹ ಅವರು ಸಂಭಾಷಣೆ ಬರೆದಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ಲೋಕೇಶ್, ವಿನಯ ಸೂರ್ಯ, ದಿಲೀಪ್ ಪೈ ಮುಂತಾದವರು ಅಭಿನಯಿಸಿದ್ದಾರೆ. ಜಾಕ್ ಮಂಜು ಅವರ ‘ಶಾಲಿನಿ ಎಂಟರ್​ಪ್ರೈಸಸ್’ ಮೂಲಕ ಚಿತ್ರ ಬಿಡುಗಡೆ ಆಗುತ್ತಿದೆ.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್