AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ಮುಗಿಸಿದ ‘ಬಿಂಗೊ’; ಇದು ಆರ್.ಕೆ. ಚಂದನ್-ರಾಗಿಣಿ ದ್ವಿವೇದಿ ಜೋಡಿಯ ಸಿನಿಮಾ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಬಿಂಗೊ’ ಸಿನಿಮಾಗೆ ಬೆಂಗಳೂರಿನಲ್ಲೇ ಪೂರ್ತಿ ಶೂಟಿಂಗ್​ ಮಾಡಲಾಗಿದೆ. ಯಶಸ್ವಿಯಾಗಿ ಚಿತ್ರೀಕರಣ ಮುಗಿದಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಟ್ರೇಲರ್​ ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ.

ಮದನ್​ ಕುಮಾರ್​
|

Updated on: Jan 11, 2024 | 5:34 PM

Share
ನಟಿ ರಾಗಿಣಿ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಬಿಂಗೊ’ ಚಿತ್ರ ಕೂಡ ಇದೆ. ಈ ಸಿನಿಮಾಗೆ ಶಂಕರ್ ಕೋನಮಾನಹಳ್ಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ‘ಶಂಭೋ ಶಿವ ಶಂಕರ’ ಚಿತ್ರಕ್ಕೆ ಶಂಕರ್​ ಕೋನಮಾನಹಳ್ಳಿ ನಿರ್ದೇಶನ ಮಾಡಿದ್ದರು.

ನಟಿ ರಾಗಿಣಿ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಬಿಂಗೊ’ ಚಿತ್ರ ಕೂಡ ಇದೆ. ಈ ಸಿನಿಮಾಗೆ ಶಂಕರ್ ಕೋನಮಾನಹಳ್ಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ‘ಶಂಭೋ ಶಿವ ಶಂಕರ’ ಚಿತ್ರಕ್ಕೆ ಶಂಕರ್​ ಕೋನಮಾನಹಳ್ಳಿ ನಿರ್ದೇಶನ ಮಾಡಿದ್ದರು.

1 / 7
‘ಬಿಂಗೊ’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿರುವ ಆರ್.ಕೆ. ಚಂದನ್ ಅವರಿಗೆ ‘ತುಪ್ಪದ ಬೆಡಗಿ’ ರಾಗಿಣಿ ದ್ವಿವೇದಿ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ ಎಂಬ ಸುದ್ದಿಯನ್ನು ಚಿತ್ರತಂಡ ಹಂಚಿಕೊಂಡಿದೆ.

‘ಬಿಂಗೊ’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿರುವ ಆರ್.ಕೆ. ಚಂದನ್ ಅವರಿಗೆ ‘ತುಪ್ಪದ ಬೆಡಗಿ’ ರಾಗಿಣಿ ದ್ವಿವೇದಿ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ ಎಂಬ ಸುದ್ದಿಯನ್ನು ಚಿತ್ರತಂಡ ಹಂಚಿಕೊಂಡಿದೆ.

2 / 7
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಬಿಂಗೊ’ ಸಿನಿಮಾಗೆ ಬೆಂಗಳೂರಿನಲ್ಲೇ ಶೂಟಿಂಗ್​ ಮಾಡಲಾಗಿದೆ. ಯಶಸ್ವಿಯಾಗಿ ಚಿತ್ರೀಕರಣ ಮುಗಿದಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಚಿತ್ರದ ಟೈಟಲ್​ ಡಿಫರೆಂಟ್​ ಆಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಬಿಂಗೊ’ ಸಿನಿಮಾಗೆ ಬೆಂಗಳೂರಿನಲ್ಲೇ ಶೂಟಿಂಗ್​ ಮಾಡಲಾಗಿದೆ. ಯಶಸ್ವಿಯಾಗಿ ಚಿತ್ರೀಕರಣ ಮುಗಿದಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಚಿತ್ರದ ಟೈಟಲ್​ ಡಿಫರೆಂಟ್​ ಆಗಿದೆ.

3 / 7
‘ಆರ್.ಕೆ. ಸ್ಟುಡಿಯೋಸ್’ ಹಾಗೂ ‘ಮುತರಾ ವೆಂಚರ್ಸ್’ ಲಾಂಛನದಲ್ಲಿ ‘ಬಿಂಗೊ’ ಸಿನಿಮಾ ಮೂಡಿಬರುತ್ತಿದೆ. ಲಲಿತಾಸ್ವಾಮಿ ಹಾಗೂ ಆರ್. ಪರಾಂಕುಶ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೇಕಿಂಗ್​ ಸ್ಟಿಲ್ಸ್​ ಲಭ್ಯವಾಗಿವೆ.

‘ಆರ್.ಕೆ. ಸ್ಟುಡಿಯೋಸ್’ ಹಾಗೂ ‘ಮುತರಾ ವೆಂಚರ್ಸ್’ ಲಾಂಛನದಲ್ಲಿ ‘ಬಿಂಗೊ’ ಸಿನಿಮಾ ಮೂಡಿಬರುತ್ತಿದೆ. ಲಲಿತಾಸ್ವಾಮಿ ಹಾಗೂ ಆರ್. ಪರಾಂಕುಶ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೇಕಿಂಗ್​ ಸ್ಟಿಲ್ಸ್​ ಲಭ್ಯವಾಗಿವೆ.

4 / 7
‘ಬಿಂಗೋ’ ಸಿನಿಮಾದ ಪಾತ್ರವರ್ಗದಲ್ಲಿ ಆರ್.ಕೆ. ಚಂದನ್, ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಮುರಳಿ ಪೂರ್ವಿಕ್, ‘ಮಜಾ ಟಾಕೀಸ್’ ಪವನ್, ಶ್ರವಣ್, ಅಪೂರ್ವ ಮುಂತಾದ ಕಲಾವಿದರು ಇದ್ದಾರೆ. ಟ್ರೇಲರ್​ ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ.

‘ಬಿಂಗೋ’ ಸಿನಿಮಾದ ಪಾತ್ರವರ್ಗದಲ್ಲಿ ಆರ್.ಕೆ. ಚಂದನ್, ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಮುರಳಿ ಪೂರ್ವಿಕ್, ‘ಮಜಾ ಟಾಕೀಸ್’ ಪವನ್, ಶ್ರವಣ್, ಅಪೂರ್ವ ಮುಂತಾದ ಕಲಾವಿದರು ಇದ್ದಾರೆ. ಟ್ರೇಲರ್​ ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ.

5 / 7
ಈ ಸಿನಿಮಾಗೆ ಹಿತನ್ ಹಾಸನ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಅವರ ಸಂಗೀತ ಸಂಯೋಜನೆಯಲ್ಲಿ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿವೆ ಎಂದು ‘ಬಿಂಗೊ’ ತಂಡ ಹೇಳಿದೆ. ಶೀಘ್ರದಲ್ಲೇ ಹಾಡುಗಳು ಬಿಡುಗಡೆ ಆಗಲಿವೆ.

ಈ ಸಿನಿಮಾಗೆ ಹಿತನ್ ಹಾಸನ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಅವರ ಸಂಗೀತ ಸಂಯೋಜನೆಯಲ್ಲಿ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿವೆ ಎಂದು ‘ಬಿಂಗೊ’ ತಂಡ ಹೇಳಿದೆ. ಶೀಘ್ರದಲ್ಲೇ ಹಾಡುಗಳು ಬಿಡುಗಡೆ ಆಗಲಿವೆ.

6 / 7
ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣ ‘ಬಿಂಗೊ’ ಸಿನಿಮಾಗೆ ಇದೆ. ಈ ಚಿತ್ರದಲ್ಲಿನ ಆ್ಯಕ್ಷನ್​ ದೃಶ್ಯಗಳಿಗೆ ನರಸಿಂಹ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ವೆಂಕಿ ಅವರು ಸಂಕಲನ ಮಾಡುತ್ತಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣ ‘ಬಿಂಗೊ’ ಸಿನಿಮಾಗೆ ಇದೆ. ಈ ಚಿತ್ರದಲ್ಲಿನ ಆ್ಯಕ್ಷನ್​ ದೃಶ್ಯಗಳಿಗೆ ನರಸಿಂಹ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ವೆಂಕಿ ಅವರು ಸಂಕಲನ ಮಾಡುತ್ತಿದ್ದಾರೆ.

7 / 7
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ