ನಿರ್ಗತಿಕರ ಆಶ್ರಮಕ್ಕೆ ಹೆಗಲಾದ ರಾಯಚೂರಿನ ಪೊಲೀಸ್ ಪಡೆ: ಫೋಟೋಸ್​ ನೋಡಿ

Edited By: ವಿವೇಕ ಬಿರಾದಾರ

Updated on: Mar 25, 2025 | 8:20 AM

ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ವೃದ್ಧಾಶ್ರಮವು ಅನಾಥರು ಮತ್ತು ವಯಸ್ಸಾದವರಿಗೆ ಆಶ್ರಯ ನೀಡುತ್ತದೆ. ವಸತಿ ಸಮಸ್ಯೆಯನ್ನು ಪರಿಹರಿಸಲು ರಾಯಚೂರು ಪೊಲೀಸ್ ಇಲಾಖೆಯು ಹೊಸ ಕಟ್ಟಡವನ್ನು ನಿರ್ಮಿಸಿಕೊಟ್ಟಿದೆ. 20 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಪೊಲೀಸ್ ಸಿಬ್ಬಂದಿ ಈ ಕಾರ್ಯವನ್ನು ಮಾಡಿದ್ದು ಸಮಾಜಕ್ಕೆ ಒಳ್ಳೆಯ ಸಂದೇಶವಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1 / 5
ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹೊರ ಭಾಗದಲ್ಲಿರುವ ಕಾರುಣ್ಯ ವೃದ್ಧಾಶ್ರಮವು ಅನಾಥರು, ವಯೋಸಹಜ ಖಾಯಲೆಯಿಂದ ಬಳಲುತ್ತಿರುವ, ಬುದ್ಧಿಮಾಂದ್ಯರು ಮತ್ತು ಹಿರಿಯ ಜೀವಿಗಳ ಆಶ್ರಯ ತಾಣವಾಗಿದೆ. ಈ ವೃದ್ಧಾಶ್ರಮಕ್ಕೆ ಜಿಲ್ಲೆಯ ಪೊಲೀಸರು ನೆರವಾಗಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹೊರ ಭಾಗದಲ್ಲಿರುವ ಕಾರುಣ್ಯ ವೃದ್ಧಾಶ್ರಮವು ಅನಾಥರು, ವಯೋಸಹಜ ಖಾಯಲೆಯಿಂದ ಬಳಲುತ್ತಿರುವ, ಬುದ್ಧಿಮಾಂದ್ಯರು ಮತ್ತು ಹಿರಿಯ ಜೀವಿಗಳ ಆಶ್ರಯ ತಾಣವಾಗಿದೆ. ಈ ವೃದ್ಧಾಶ್ರಮಕ್ಕೆ ಜಿಲ್ಲೆಯ ಪೊಲೀಸರು ನೆರವಾಗಿದ್ದಾರೆ.

2 / 5
ಪೊಲೀಸರು ಸೂಚಿಸುವ ಭಿಕ್ಷುಕರು, ಅನಾಥರಿಗೆ ಕಾರುಣ್ಯ ಆಶ್ರಮದವರು ಆಶ್ರಯ ನೀಡುತ್ತಾರೆ. ಹೀಗಾಗಿ, ಆಶ್ರಮದಲ್ಲಿ ಹಂತಹಂತವಾಗಿ ನಿರ್ಗತಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಪಡೆ ಆಶ್ರಮಕ್ಕೆ ಹೊಸ ಕಟ್ಟಡ ಕಟ್ಟಿಸಿ ಕೊಟ್ಟಿದೆ.

ಪೊಲೀಸರು ಸೂಚಿಸುವ ಭಿಕ್ಷುಕರು, ಅನಾಥರಿಗೆ ಕಾರುಣ್ಯ ಆಶ್ರಮದವರು ಆಶ್ರಯ ನೀಡುತ್ತಾರೆ. ಹೀಗಾಗಿ, ಆಶ್ರಮದಲ್ಲಿ ಹಂತಹಂತವಾಗಿ ನಿರ್ಗತಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಪಡೆ ಆಶ್ರಮಕ್ಕೆ ಹೊಸ ಕಟ್ಟಡ ಕಟ್ಟಿಸಿ ಕೊಟ್ಟಿದೆ.

3 / 5
ರಾಯಚೂರಿನ 2005 ನೇ ಬ್ಯಾಚ್​​ನ ಸಿವಿಲ್ ಸರ್ವಿಸ್​ನ ಪೊಲೀಸ್ ಸಿಬ್ಬಂದಿ ತಮ್ಮ ವೃತ್ತಿ ಜೀವನ ಆರಂಭವಾಗಿ 20 ವರ್ಷಗಳಾದ ಹಿನ್ನೆಲೆ ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ, ನಿರ್ಗತಿಕರ ಲಾಲನೆ, ಪಾಲನೆ ಮಾಡುತ್ತಿರುವ ಕಾರುಣ್ಯ ಆಶ್ರಮಕ್ಕೆ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ.

ರಾಯಚೂರಿನ 2005 ನೇ ಬ್ಯಾಚ್​​ನ ಸಿವಿಲ್ ಸರ್ವಿಸ್​ನ ಪೊಲೀಸ್ ಸಿಬ್ಬಂದಿ ತಮ್ಮ ವೃತ್ತಿ ಜೀವನ ಆರಂಭವಾಗಿ 20 ವರ್ಷಗಳಾದ ಹಿನ್ನೆಲೆ ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ, ನಿರ್ಗತಿಕರ ಲಾಲನೆ, ಪಾಲನೆ ಮಾಡುತ್ತಿರುವ ಕಾರುಣ್ಯ ಆಶ್ರಮಕ್ಕೆ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ.

4 / 5
ಸುಮಾರು 80ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿವರ್ಷ ಒಂದಲ್ಲ ಒಂದು ರೀತಿ ಕಾರ್ಯಕ್ರಮಗಳನ್ನು ಮಾಡುತ್ತಾ ವಿನೂತ ಸೇವೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮುಗ್ಧ ಜೀವಿಗಳು ಬದಕು ನಡೆಸುತ್ತಿರುವ ಆ ಆಶ್ರಮಕ್ಕೆ ಆಶ್ರಮ ಧಾಮ ಹೆಸರಿನಲ್ಲಿ ಕಟ್ಟಡ ಕಟ್ಟಿಸಿಕೊಟ್ಟಿದ್ದು, ಅದನ್ನು ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಉದ್ಘಾಟಿಸಿ ಶ್ಲಾಘಿಸಿದ್ದಾರೆ..

ಸುಮಾರು 80ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿವರ್ಷ ಒಂದಲ್ಲ ಒಂದು ರೀತಿ ಕಾರ್ಯಕ್ರಮಗಳನ್ನು ಮಾಡುತ್ತಾ ವಿನೂತ ಸೇವೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮುಗ್ಧ ಜೀವಿಗಳು ಬದಕು ನಡೆಸುತ್ತಿರುವ ಆ ಆಶ್ರಮಕ್ಕೆ ಆಶ್ರಮ ಧಾಮ ಹೆಸರಿನಲ್ಲಿ ಕಟ್ಟಡ ಕಟ್ಟಿಸಿಕೊಟ್ಟಿದ್ದು, ಅದನ್ನು ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಉದ್ಘಾಟಿಸಿ ಶ್ಲಾಘಿಸಿದ್ದಾರೆ..

5 / 5
ವಿವಿಧ ಕಾರ್ಯಕ್ರಮಗಳನ್ನು ಮಾಡ್ತಾ ಆಚರಣೆ ಹೆಸರಲ್ಲಿ ಮೋಜು ಮಸ್ತಿ ಮಾಡುವ ಈ ಕಾಲದಲ್ಲಿ ಪೊಲೀಸ್​ ಪಡೆ,  ಬಡವರ ಸೇವೆ ಮಾಡುತ್ತಿರುವ ಈ ಆಶ್ರಮಕ್ಕೆ ಹೆಗಲು ಕೊಟ್ಟಿದ್ದು ಸಾರ್ವಜನಿಕರ ಮೆಚ್ಚುಗೆ ಕಾರಣವಾಗಿದೆ.

ವಿವಿಧ ಕಾರ್ಯಕ್ರಮಗಳನ್ನು ಮಾಡ್ತಾ ಆಚರಣೆ ಹೆಸರಲ್ಲಿ ಮೋಜು ಮಸ್ತಿ ಮಾಡುವ ಈ ಕಾಲದಲ್ಲಿ ಪೊಲೀಸ್​ ಪಡೆ, ಬಡವರ ಸೇವೆ ಮಾಡುತ್ತಿರುವ ಈ ಆಶ್ರಮಕ್ಕೆ ಹೆಗಲು ಕೊಟ್ಟಿದ್ದು ಸಾರ್ವಜನಿಕರ ಮೆಚ್ಚುಗೆ ಕಾರಣವಾಗಿದೆ.

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us