- Kannada News Photo gallery Rain from last one week across Yadgir district: hundreds of acres of crops destroyed, demand for compensation, taja suddi
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
Updated on: Sep 07, 2024 | 4:25 PM

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.
Related Photo Gallery
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!

ಯಾವುದೇ ಕ್ಷಣದಲ್ಲಿ ಕೆಆರ್ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!

ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್

ಪೊಲೀಸ್ ವಾಹನದ ಬಾನೆಟ್ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ

ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ

Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
