- TV9 Kannada Photo gallery Rain from last one week across Yadgir district: hundreds of acres of crops destroyed, demand for compensation, taja suddi
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
Updated on: Sep 07, 2024 | 4:25 PM
Share

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.
1 / 5

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.
2 / 5

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.
3 / 5

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
4 / 5

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.
5 / 5
Related Photo Gallery
ವಿನಯ್ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್ನಲ್ಲಿ ಜೆಡಿಎಸ್ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!



