- TV9 Kannada Photo gallery Rain from last one week across Yadgir district: hundreds of acres of crops destroyed, demand for compensation, taja suddi
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ: ನೂರಾರು ಎಕರೆ ಬೆಳೆ ನಾಶ, ಪರಿಹಾರಕ್ಕೆ ಆಗ್ರಹ
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆರಾಯ ನಿರಂತರವಾಗಿ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿವೆ. ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
Updated on: Sep 07, 2024 | 4:25 PM
Share

ಅಸ್ನಾ ಚಂಡಮಾರುತ ಯಾದಗಿರಿ ಜಿಲ್ಲೆಗೂ ದಾಳಿ ಮಾಡಿದೆ. ತೆಲಂಗಾಣದ ಗಡಿಯನ್ನ ಯಾದಗಿರಿ ಹಂಚಿಕೊಂಡ ಕಾರಣಕ್ಕೆ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಯಡಹಳ್ಳಿ ಕೆರೆ ಕೋಡಿ ಎತ್ತರಿಸಿದ್ದಕ್ಕೆ ಹಿನ್ನೀರಿನಿಂದ ಯಾದಗಿರಿ ತಾಲೂಕಿನ ಯಡಹಳ್ಳಿ ಹಾಗೂ ಹತ್ತಿಕುಣಿ ಗ್ರಾಮದ ನೂರಾರು ಎಕರೆ ಬೆಳೆ ನಾಶ ಜಲಾವೃತವಾಗಿವೆ.

ಎಕರೆಗೆ 20 ರಿಂದ 25 ಸಾವಿರ ರೂ. ಖರ್ಚು ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ ಬೆಳೆ ಸಂಪೂರ್ಣವಾಗಿ ಜಲಾವೃತವಾತಗೊಂಡು ನಾಶವಾಗಿ ಹೋಗಿದ್ದು, ಬೆಳೆ ಕಳೆದುಕೊಂಡ ರೈತರು ಕಂಗಲಾಗಿದ್ದಾರೆ.

ಹತ್ತಿ, ಹೆಸರು, ತೊಗರಿ, ಭತ್ತದ ಬೆಳೆ ಜಲಾವೃತದಿಂದ ರೈತರಿಗೆ ನಷ್ಟ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಇನ್ನು ಮಳೆರಾಯನ ಅಬ್ಬರಕ್ಕೆ ಜಿಲ್ಲೆಯಲ್ಲಿ ನಾನಾ ರೀತಿಯ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ.
Related Photo Gallery
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಈ ರಾಶಿಯವರನ್ನು ದೈಹಿಕ ಹಾಗೂ ಮಾನಸಿಕವಾಗಿ ಗೆಲ್ಲುವುದು ಸುಲಭವಲ್ಲ...
ಒಪ್ಪಂದದಂತೆ ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ; ಸಿಜೆಪಿ ಎಚ್ಚರಿಕೆ
ಗುರು ಪೂರ್ಣಿಮೆಯಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂಜೆ ಏಕೆ ಶ್ರೇಷ್ಠ?
‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ: ನಮಿತ್ ಮಲ್ಹೋತ್ರಾ ಘೋಷಣೆ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ



