ಅನುಶ್ರೀ ಮದುವೆಗೆ ಬಂದ ‘ಬಾವ’; ಇಲ್ಲಿದೆ ವಿವಾಹದ ಸುಂದರ ಫೋಟೋಸ್

Edited By:

Updated on: Sep 05, 2025 | 3:28 PM

ನಟಿ ಅನುಶ್ರೀ ಹಾಗೂ ರೋಷನ್ ವಿವಾಹ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಶಿವರಾಜ್​ಕುಮಾರ್ ಸೇರಿದಂತೆ ಅನೇಕರು ನವ ದಂಪತಿಗೆ ಶುಭ ಹಾರೈಸಿದರು. ಈ ವೇಳೆ ವಿವಾಹಕ್ಕೆ ಬಾವನ ಎಂಟ್ರಿ ಕೂಡ ಆಯಿತು. ಅವರು ಬೇರಾರೂ ಅಲ್ಲ ರಾಜ್ ಬಿ ಶೆಟ್ಟಿ.

1 / 5
ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಮದುವೆಗೆ ‘ಸು ಫ್ರಮ್ ಸೋ’ ನಟ, ನಿರ್ಮಾಪಕ ರಾಜ್ ಬಿ. ಶೆಟ್ಟಿ ಆಗಮಿಸಿದರು. ‘ಅನುಶ್ರೀ ಮದುವೆಗೆ ಬಾವ ಬಂದರು’ ಎಂದು ಅನೇಕರು ಕಮೆಂಟ್ ಮಾಡುತ್ತಾ ಇದ್ದಾರೆ. ವಿವಾಹದ ಫೋಟೋಗಳು ವೈರಲ್ ಆಗಿವೆ.

ಆ್ಯಂಕರ್ ಅನುಶ್ರೀ ಹಾಗೂ ರೋಷನ್ ಮದುವೆಗೆ ‘ಸು ಫ್ರಮ್ ಸೋ’ ನಟ, ನಿರ್ಮಾಪಕ ರಾಜ್ ಬಿ. ಶೆಟ್ಟಿ ಆಗಮಿಸಿದರು. ‘ಅನುಶ್ರೀ ಮದುವೆಗೆ ಬಾವ ಬಂದರು’ ಎಂದು ಅನೇಕರು ಕಮೆಂಟ್ ಮಾಡುತ್ತಾ ಇದ್ದಾರೆ. ವಿವಾಹದ ಫೋಟೋಗಳು ವೈರಲ್ ಆಗಿವೆ.

2 / 5
ಅನುಶ್ರೀ ಹಾಗೂ ರಾಜ್ ಅವರ ಮಧ್ಯೆ ಒಳ್ಳೆಯ ಒಡನಾಟ ಇದೆ. ಇವರು ಆಗಾಗ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಗೆಳತಿ ಮದುವೆಗೆ ರಾಜ್ ಅವರು ಆಗಮಿಸಿ ಶುಭ ಕೋರಿದ್ದಾರೆ. ಅನುಶ್ರೀ ವಿವಾಹದ ಸುಂದರ ಕ್ಷಣಗಳು ವೈರಲ್ ಆಗಿವೆ.

ಅನುಶ್ರೀ ಹಾಗೂ ರಾಜ್ ಅವರ ಮಧ್ಯೆ ಒಳ್ಳೆಯ ಒಡನಾಟ ಇದೆ. ಇವರು ಆಗಾಗ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಗೆಳತಿ ಮದುವೆಗೆ ರಾಜ್ ಅವರು ಆಗಮಿಸಿ ಶುಭ ಕೋರಿದ್ದಾರೆ. ಅನುಶ್ರೀ ವಿವಾಹದ ಸುಂದರ ಕ್ಷಣಗಳು ವೈರಲ್ ಆಗಿವೆ.

3 / 5
ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು. ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು. ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.

4 / 5
ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ತಾವು ಯಾವ ರೀತಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡಿದ್ದರೋ ಅದೇ ರೀತಿಯಲ್ಲಿ ಮದುವೆ ಆಗಿದ್ದಾರೆ ಅನ್ನೋದು ವಿಶೇಷ.

ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ತಾವು ಯಾವ ರೀತಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡಿದ್ದರೋ ಅದೇ ರೀತಿಯಲ್ಲಿ ಮದುವೆ ಆಗಿದ್ದಾರೆ ಅನ್ನೋದು ವಿಶೇಷ.

5 / 5
ಅನುಶ್ರೀ ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಅಭಿಮಾನಿಗಳನ್ನು ಒಳಗೆ ಬಿಟ್ಟಿಲ್ಲ. ಕೇವಲ ಆಪ್ತರಿಗೆ, ಕುಟುಂಬದವರಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.  

ಅನುಶ್ರೀ ಮದುವೆಗೆ ಅಭಿಮಾನಿಗಳಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಅಭಿಮಾನಿಗಳನ್ನು ಒಳಗೆ ಬಿಟ್ಟಿಲ್ಲ. ಕೇವಲ ಆಪ್ತರಿಗೆ, ಕುಟುಂಬದವರಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು.  

Published On - 12:18 pm, Thu, 28 August 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us