Raj B Shetty: ‘ಸಮಾಜವೇ ಜವಾಬ್ದಾರಿ ತೆಗೆದುಕೊಳ್ಳಬೇಕು’; ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಪೋಸ್ಟ್

Edited By:

Updated on: Sep 05, 2025 | 3:27 PM

ಇತ್ತೀಚೆಗೆ ಸುಪ್ರೀಂಕೋರ್ಟ್ ಒಂದು ಆದೇಶ ಹೊರಡಿಸಿತ್ತು. ದೆಹಲಿಯ ಬೀದಿ ನಾಯಿಗಳನ್ನು 8 ವಾರದ ಒಳಗೆ ಹಿಡಿದು ಸ್ಥಳಾಂತರಿಸುವಂತೆ ಆದೇಶ ನೀಡಿದೆ. ಈ ಆದೇಶಕ್ಕೆ ಅನೇಕರು ವಿರೋಧ ಹೊರಹಾಕಿದ್ದಾರೆ. ರಾಜ್ ಬಿ. ಶೆಟ್ಟಿ ಅವರು ತಮ್ಮದೇ ಸ್ಟೈಲ್​ನಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ಶ್ವಾನಗಳ ಮಹತ್ವ ತಿಳಿಸಿದ್ದಾರೆ.

1 / 5
ದೆಹಲಿಯಲ್ಲಿ ನಾಯಿ ಕಡಿತದಿಂದ ರೇಬೀಸ್‌ಗೆ 6 ವರ್ಷದ ಬಾಲಕಿ ಚಾವಿ ಶರ್ಮಾ ನಿಧನ ಹೊಂದಿದ್ದಳು. ಈ ಬೆನ್ನಲ್ಲೇ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 8 ವಾರಗಳೊಳಗೆ ಪ್ರತಿಯೊಂದು ಬೀದಿ ನಾಯಿಯನ್ನು ಒಟ್ಟುಗೂಡಿಸಿ, ಗೊತ್ತುಪಡಿಸಿದ ನಾಯಿಗಳ ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕೆಂದು ನಿರ್ದೇಶಿಸಿದೆ.

ದೆಹಲಿಯಲ್ಲಿ ನಾಯಿ ಕಡಿತದಿಂದ ರೇಬೀಸ್‌ಗೆ 6 ವರ್ಷದ ಬಾಲಕಿ ಚಾವಿ ಶರ್ಮಾ ನಿಧನ ಹೊಂದಿದ್ದಳು. ಈ ಬೆನ್ನಲ್ಲೇ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 8 ವಾರಗಳೊಳಗೆ ಪ್ರತಿಯೊಂದು ಬೀದಿ ನಾಯಿಯನ್ನು ಒಟ್ಟುಗೂಡಿಸಿ, ಗೊತ್ತುಪಡಿಸಿದ ನಾಯಿಗಳ ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕೆಂದು ನಿರ್ದೇಶಿಸಿದೆ.

2 / 5

ಈ ಆದೇಶದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ರಾಜ್ ಅವರು ಪ್ರಾಣಿ ಪ್ರಿಯರು. ಅವರಿಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇದೆ. ಈ ಕಾರಣಕ್ಕೆ ಸುಪ್ರೀಂಕೋರ್ಟ್ ಈ ಆದೇಶವನ್ನು ಸರಿ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.  

3 / 5

‘ಶ್ವಾನಗಳ ಜೊತೆ ಇರುವ ಕೆಲವು ಫೋಟೋಗಳನ್ನು ಹಂಚಿಕೊಂಡಿರುವ ರಾಜ್, ಇವು ನನಗೆ ನೆಮ್ಮದಿ ನೀಡುವ ಜೀವಿಗಳು. ನನಗೆ ಮಾತ್ರವಲ್ಲ ನನ್ನಂತಹ ಅದೆಷ್ಟೋ ಅಸಂಖ್ಯ ಜನರಿಗೆ ಇವು ನೋವನ್ನು ಗುಣಪಡಿಸುವ ಶಕ್ತಿ ಹೊಂದಿವೆ’ ಎಂದು ರಾಜ್ ಬರೆದಿದ್ದಾರೆ.

4 / 5

‘ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಸುಪ್ರೀಂಕೋರ್ಟ್ ಈ ಆದೇಶವನ್ನು ಬದಲಾಯಿಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ರಾಜ್ ಬರೆದುಕೊಂಡಿದ್ದಾರೆ. ಇದರ ಜೊತೆಗೆ ರಾಜ್ ಅವರು ವಿಶೇಷ ಮನವಿ ಒಂದನ್ನು ಇಟ್ಟಿದ್ದಾರೆ.

5 / 5

‘ನಾನು 7 ಬೀದಿ ನಾಯಿಗಳನ್ನು ಸಾಕಿದ್ದೇನೆ. ಸಮಾಜ ಜವಾಬ್ದಾರಿ ತೆಗೆದುಕೊಂಡಾಗ, ಈ ರೀತಿಯ ಕಠಿಣ ಪರಿಹಾರಗಳು ಅಗತ್ಯವಿಲ್ಲ’ ಎಂದಿದ್ದಾರೆ ರಾಜ್. ಈ ಮೂಲಕ ಮೂಕ ಪ್ರಾಣಿಗಳನ್ನು ದತ್ತು ಪಡೆದು ಸಾಕಲು ಕೋರಿದ್ದಾರೆ.

Published On - 10:51 am, Wed, 13 August 25

Loading...
Unable to load recommendations.
Follow Us