AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Friendship Day 2024: ಇಬ್ಬರೂ ಸ್ನೇಹಿತರ ಪರಿಶ್ರಮದ ಫಲವೇ ಭಾರತದ ನಂಬರ್ ಒನ್ ಇಂಡಿಗೋ ಏರ್ ಲೈನ್ಸ್

ಭಾರತದ ವಾಯುಯಾನ ಕ್ಷೇತ್ರವು ವಿಶ್ವವೇ ತಿರುಗಿ ನೋಡುವಂತೆ ಬೆಳೆಯುತ್ತಿದೆ. ಈಗಾಗಲೇ ವಿವಿಧ ವಿಮಾನಯಾನ ಸಂಸ್ಥೆಗಳು ಪ್ರಾರಂಭವಾಗಿದ್ದರೂ ಅದರಲ್ಲಿ ಕೆಲವೇ ಕೆಲವು ಸಂಸ್ಥೆಗಳು ಯಶಸ್ಸಿನ ಉತ್ತುಂಗಕ್ಕೆ ತಲುಪಿದೆ. ಅಂತಹ ಸಂಸ್ಥೆಯಲ್ಲಿ ಇಂಡಿಗೋ ಏರ್‌ಲೈನ್ಸ್‌ ಕೂಡ ಒಂದು. ಇದು ಇಬ್ಬರೂ ಸ್ನೇಹಿತರ ಪರಿಶ್ರಮದಿಂದ ಪ್ರಾರಂಭವಾಗಿ, ಇಂದು ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಹಾಗಾದ್ರೆ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಆ ಇಬ್ಬರೂ ಸ್ನೇಹಿತರು ಯಾರು, ಆರಂಭದ ದಿನಗಳು ಹೇಗಿದ್ದವು ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

ಸಾಯಿನಂದಾ
| Edited By: |

Updated on: Aug 02, 2024 | 5:25 PM

Share
ಕೈಗೆಟಕುವ ದರದಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ವಿಮಾನಯಾನಗಳನ್ನು  ಒದಗಿಸುತ್ತಿರುವ ಭಾರತೀಯ ಸಂಸ್ಥೆಯೇ ಈ ಇಂಡಿಗೋ ಏರ್ ಲೈನ್ಸ್ .  ಇಬ್ಬರೂ ಸ್ನೇಹಿತರು ಕಟ್ಟಿ ಬೆಳೆಸಿದ ಇಂಡಿಗೋ ಸಂಸ್ಥೆಯೂ ಇಂದು ನಂಬರ್ ಒನ್ ಏರ್‌ಲೈನ್ಸ್‌ಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

ಕೈಗೆಟಕುವ ದರದಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ವಿಮಾನಯಾನಗಳನ್ನು ಒದಗಿಸುತ್ತಿರುವ ಭಾರತೀಯ ಸಂಸ್ಥೆಯೇ ಈ ಇಂಡಿಗೋ ಏರ್ ಲೈನ್ಸ್ . ಇಬ್ಬರೂ ಸ್ನೇಹಿತರು ಕಟ್ಟಿ ಬೆಳೆಸಿದ ಇಂಡಿಗೋ ಸಂಸ್ಥೆಯೂ ಇಂದು ನಂಬರ್ ಒನ್ ಏರ್‌ಲೈನ್ಸ್‌ಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

1 / 5
2006ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ, ಸ್ನೇಹಿತರು ಮತ್ತು ಸಹ-ಸಂಸ್ಥಾಪಕರು, ಇಂಡಿಗೋ ಏರ್ಲೈನ್ಸ್ ಸಂಸ್ಥೆಯನ್ನು ಪ್ರಾರಂಭಿಸಿದರು. ಈ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ಎಂಬ ಇಬ್ಬರೂ ಸ್ನೇಹಿತರು ಬೇರೆ ಬೇರೆ ವೃತ್ತಿ ಹಿನ್ನಲೆಯುಳ್ಳವರು. ಹೀಗಾಗಿ ಇಂಡಿಗೋ ಏರ್ ಲೈನ್ಸ್ ಆರಂಭಿಸುವುದಕ್ಕೂ ಮುಂಚೆ ಇಬ್ಬರಲ್ಲಿಯೂ ಸಣ್ಣದೊಂದು ಹಿಂಜರಿಕೆಯಿತ್ತು.

2006ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ, ಸ್ನೇಹಿತರು ಮತ್ತು ಸಹ-ಸಂಸ್ಥಾಪಕರು, ಇಂಡಿಗೋ ಏರ್ಲೈನ್ಸ್ ಸಂಸ್ಥೆಯನ್ನು ಪ್ರಾರಂಭಿಸಿದರು. ಈ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ಎಂಬ ಇಬ್ಬರೂ ಸ್ನೇಹಿತರು ಬೇರೆ ಬೇರೆ ವೃತ್ತಿ ಹಿನ್ನಲೆಯುಳ್ಳವರು. ಹೀಗಾಗಿ ಇಂಡಿಗೋ ಏರ್ ಲೈನ್ಸ್ ಆರಂಭಿಸುವುದಕ್ಕೂ ಮುಂಚೆ ಇಬ್ಬರಲ್ಲಿಯೂ ಸಣ್ಣದೊಂದು ಹಿಂಜರಿಕೆಯಿತ್ತು.

2 / 5
ಗಂಗ್ವಾಲ್ ಅವರಿಗಿದ್ದ ವಾಯುಯಾನ ಪರಿಣತಿ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಸಂಪೂರ್ಣ ಜ್ಞಾನ ಹೊಂದಿದ್ದ ರಾಹುಲ್ ಭಾಟಿಯಾ ಇಬ್ಬರೂ ತಮ್ಮ ಆಲೋಚನೆಯನ್ನು ಒಟ್ಟು ಸೇರಿಸಿ ಈ ಸಂಸ್ಥೆಯನ್ನು ಹುಟ್ಟುಹಾಕಿದರು. ಇದೀಗ ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯೂ ಶ್ರಮಿಸಿದ್ದು ಮಧ್ಯಮ ವರ್ಗದ ಜನರ ವಿಮಾನ ಪ್ರಯಾಣದ ಕನಸನ್ನು ನನಸು ಮಾಡಿದೆ.

ಗಂಗ್ವಾಲ್ ಅವರಿಗಿದ್ದ ವಾಯುಯಾನ ಪರಿಣತಿ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಸಂಪೂರ್ಣ ಜ್ಞಾನ ಹೊಂದಿದ್ದ ರಾಹುಲ್ ಭಾಟಿಯಾ ಇಬ್ಬರೂ ತಮ್ಮ ಆಲೋಚನೆಯನ್ನು ಒಟ್ಟು ಸೇರಿಸಿ ಈ ಸಂಸ್ಥೆಯನ್ನು ಹುಟ್ಟುಹಾಕಿದರು. ಇದೀಗ ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯೂ ಶ್ರಮಿಸಿದ್ದು ಮಧ್ಯಮ ವರ್ಗದ ಜನರ ವಿಮಾನ ಪ್ರಯಾಣದ ಕನಸನ್ನು ನನಸು ಮಾಡಿದೆ.

3 / 5
ಸರಿಸುಮಾರು ಹದಿನೆಂಟು ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯೂ  ಗಂಗ್ವಾಲ್ ಮತ್ತು ಭಾಟಿಯಾರವರ ಆಲೋಚನೆಗಳಿಂದ ಉತ್ತುಂಗಕ್ಕೇರಲು ಸಾಧ್ಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಿದ್ದು, ಇಂದು ಯಾರು ಕೂಡ ಊಹೆ ಮಾಡದ ಮಟ್ಟಿಗೆ ಸಂಸ್ಥೆಯೂ ಬೆಳೆದು ವಿಮಾನಯಾನ ಸೇವೆಗಳನ್ನು ನೀಡುತ್ತಿದೆ.

ಸರಿಸುಮಾರು ಹದಿನೆಂಟು ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯೂ ಗಂಗ್ವಾಲ್ ಮತ್ತು ಭಾಟಿಯಾರವರ ಆಲೋಚನೆಗಳಿಂದ ಉತ್ತುಂಗಕ್ಕೇರಲು ಸಾಧ್ಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಿದ್ದು, ಇಂದು ಯಾರು ಕೂಡ ಊಹೆ ಮಾಡದ ಮಟ್ಟಿಗೆ ಸಂಸ್ಥೆಯೂ ಬೆಳೆದು ವಿಮಾನಯಾನ ಸೇವೆಗಳನ್ನು ನೀಡುತ್ತಿದೆ.

4 / 5
ಕಳೆದ 2020 ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ನಡುವೆ ವಿವಾದವೊಂದು ಉಂಟಾಗಿತ್ತು. ಗಂಗ್ವಾಲ್ ಕಂಪನಿಯ ಆರ್ಟಿಕಲ್ ಆಫ್ ಅಸೋಸಿಯೇಷನ್ ​​ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿದ್ದರು. ಆ ಬಳಿಕ ಗಂಗ್ವಾಲ್ ಅವರು ಫೆಬ್ರವರಿ 2022 ರಲ್ಲಿ ಕಂಪನಿಯ ಮಂಡಳಿಗೆ ರಾಜೀನಾಮೆ ನೀಡಿದ್ದರು. ತದನಂತರದಲ್ಲಿ ರಾಕೇಶ್ ಗಂಗ್ವಾಲ್ ಅವರು USD 450 ಮಿಲಿಯನ್ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು ಎನ್ನಲಾಗಿತ್ತು.

ಕಳೆದ 2020 ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ನಡುವೆ ವಿವಾದವೊಂದು ಉಂಟಾಗಿತ್ತು. ಗಂಗ್ವಾಲ್ ಕಂಪನಿಯ ಆರ್ಟಿಕಲ್ ಆಫ್ ಅಸೋಸಿಯೇಷನ್ ​​ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿದ್ದರು. ಆ ಬಳಿಕ ಗಂಗ್ವಾಲ್ ಅವರು ಫೆಬ್ರವರಿ 2022 ರಲ್ಲಿ ಕಂಪನಿಯ ಮಂಡಳಿಗೆ ರಾಜೀನಾಮೆ ನೀಡಿದ್ದರು. ತದನಂತರದಲ್ಲಿ ರಾಕೇಶ್ ಗಂಗ್ವಾಲ್ ಅವರು USD 450 ಮಿಲಿಯನ್ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು ಎನ್ನಲಾಗಿತ್ತು.

5 / 5
Follow Us
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ