
ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ.

ಇಂದು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಸ್ಥಳದಿಂದ ರಾಮಂದಿರ ನಿರ್ಮಾಣದ ಆವರಣಕ್ಕೆ ಮೆರವಣಿಗೆ ಮೂಲಕ ಸಾಗಿಸಲಾಗಿದೆ. ನಾಳೆ ಗರ್ಭಗುಡಿಯಲ್ಲಿ ಗೊತ್ತುಪಡಿಸಿದ ಆಸನದಲ್ಲಿ ರಾಮಲಲ್ಲಾ ಪ್ರತಿಮೆಯನ್ನು ಸ್ಥಾಪಿಸಲಾಗುತ್ತೆ.

51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ

51 ಇಂಚಿನ ಕಲ್ಲಿನ ವಿಗ್ರಹದಲ್ಲಿ ಶ್ರೀ ರಾಮನ ಬಾಲ್ಯದ ಸ್ವರೂಪ, ಶ್ರೀ ರಾಮನ ಮುಗ್ದತೆ, ತುಂಟತನದ ಜೊತೆಗೆ ಗಾಂಭೀರ್ಯತೆ ಸಹ ಇದೆ.

ವಿಶೇಷ ಅಂದ್ರೆ ಇದುವರೆಗೂ ಪುರಾಣಗಳಲ್ಲಿ, ಕಥೆಗಳಲ್ಲಿ, ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ, ಪುಸ್ತಕದ ಪುಟಗಳಲ್ಲಿ ಎಲ್ಲೂ ಸಹಾ ರಾಮಲಲ್ಲಾನನ್ನು ಯಾರು ನೋಡಿಲ್ಲ. ಇದೀಗ ವಿಗ್ರಹದ ಅಧಿಕೃತ ಫೋಟೋ ಬಹಿರಂಗವಾಗಿದೆ.

ಪುಟ್ಟ ಬಾಲಕ ಧನುರ್ದಾಯಿಯಾಗಿ ಕಾಣಿಸಿಕೊಂಡಿದ್ದು, ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜನವರಿ 22ರಂದು ಅನಾವರಣಗೊಳಿಸಲಿದ್ದಾರೆ.
Published On - 6:21 pm, Wed, 17 January 24