AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಸೇತುವೆ ಕುಸಿದು ಬಿದ್ದು ತಿಂಗಳುಗಳಾದರೂ ಕ್ಯಾರೆ ಎನ್ನದ ಜನಪ್ರತಿನಿಧಿಗಳು; ಉಸಿರು ಬಿಗಿ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಳಿ ಸೇತುವೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಇಲ್ಲದೆ ನದಿಯನ್ನ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

TV9 Web
| Edited By: |

Updated on: Dec 13, 2022 | 11:44 AM

Share
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಳಿ ಸೇತುವೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ
ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಇಲ್ಲದೆ ನದಿಯನ್ನ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಳಿ ಸೇತುವೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಇಲ್ಲದೆ ನದಿಯನ್ನ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

1 / 7
ಕಳೆದ ಎರಡು ತಿಂಗಳ ಹಿಂದೆ ಬಿದ್ದ ರಕ್ಕಸ ಮಳೆಯಿಂದ ಸೇತುವೆ ಕುಸಿದು ಬಿದ್ದಿದ್ದು, ಮಂಚನಬೆಲೆ ಗ್ರಾಮ ಸೇರಿದಂತೆ ಹತ್ತಾರು ಗ್ರಾಮದ ಜನರು ಬದಲಿ ಮಾರ್ಗವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಎರಡು ತಿಂಗಳ ಹಿಂದೆ ಬಿದ್ದ ರಕ್ಕಸ ಮಳೆಯಿಂದ ಸೇತುವೆ ಕುಸಿದು ಬಿದ್ದಿದ್ದು, ಮಂಚನಬೆಲೆ ಗ್ರಾಮ ಸೇರಿದಂತೆ ಹತ್ತಾರು ಗ್ರಾಮದ ಜನರು ಬದಲಿ ಮಾರ್ಗವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

2 / 7
ಇನ್ನು ಕುಸಿದು ಬಿದ್ದಿರುವ ಸೇತುವೆಯ ಮೇಲೆಯೇ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಹೋಗುತ್ತಿದ್ದರೆ, ಮತ್ತೊಂದೆಡೆ ತಾಯಂದಿರು ತಮ್ಮ ಮಕ್ಕಳನ್ನ ನದಿಯ ಮಧ್ಯೆ ಕೈ ಹಿಡಿದು ದಾಟಿಸಿ ಶಾಲೆಗೆ ಬಿಡುತ್ತಿದ್ದಾರೆ.

ಇನ್ನು ಕುಸಿದು ಬಿದ್ದಿರುವ ಸೇತುವೆಯ ಮೇಲೆಯೇ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಹೋಗುತ್ತಿದ್ದರೆ, ಮತ್ತೊಂದೆಡೆ ತಾಯಂದಿರು ತಮ್ಮ ಮಕ್ಕಳನ್ನ ನದಿಯ ಮಧ್ಯೆ ಕೈ ಹಿಡಿದು ದಾಟಿಸಿ ಶಾಲೆಗೆ ಬಿಡುತ್ತಿದ್ದಾರೆ.

3 / 7
ಮಂಚನಬೆಲೆ ಗ್ರಾಮದ ಸೇತುವೆ ಹತ್ತಾರು ಹಳ್ಳಿಗಳ ಗ್ರಾಮಸ್ಥರಿಗೆ ಆಸರೆಯಾಗಿತ್ತು. ರೈತರು ಜಮೀನುಗಳಿಗೆ ತೆರಳಲು, ಹಾಲನ್ನ ಡೈರಿಗೆ ಹಾಕಲು, ಬೆಂಗಳೂರಿಗೆ ತೆರಳಲು ಇದೇ ಸೇತುವೆ ಆಧಾರವಾಗಿತ್ತು. ಆದರೆ ಇದೀಗ ಸೇತುವೆ ಇಲ್ಲದೇ ಇರುವುದರಿಂದ ಹತ್ತಾರು ಕಿಲೋ ಮೀಟರ್ ಸುತ್ತಿಕೊಂಡು ಬರುವ ಪರಿಸ್ಥಿತಿ ಗ್ರಾಮಸ್ಥರಿಗೆ ನಿರ್ಮಾಣವಾಗಿದೆ.

ಮಂಚನಬೆಲೆ ಗ್ರಾಮದ ಸೇತುವೆ ಹತ್ತಾರು ಹಳ್ಳಿಗಳ ಗ್ರಾಮಸ್ಥರಿಗೆ ಆಸರೆಯಾಗಿತ್ತು. ರೈತರು ಜಮೀನುಗಳಿಗೆ ತೆರಳಲು, ಹಾಲನ್ನ ಡೈರಿಗೆ ಹಾಕಲು, ಬೆಂಗಳೂರಿಗೆ ತೆರಳಲು ಇದೇ ಸೇತುವೆ ಆಧಾರವಾಗಿತ್ತು. ಆದರೆ ಇದೀಗ ಸೇತುವೆ ಇಲ್ಲದೇ ಇರುವುದರಿಂದ ಹತ್ತಾರು ಕಿಲೋ ಮೀಟರ್ ಸುತ್ತಿಕೊಂಡು ಬರುವ ಪರಿಸ್ಥಿತಿ ಗ್ರಾಮಸ್ಥರಿಗೆ ನಿರ್ಮಾಣವಾಗಿದೆ.

4 / 7
ಇನ್ನು ಸೇತುವೆ ಕುಸಿದು ಬಿದ್ದ ನಂತರ ಮಾಗಡಿ ಶಾಸಕ ಎ ಮಂಜುನಾಥ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಂಸದ ಡಿ ಕೆ ಸುರೇಶ್ ಸೇರಿದಂತೆ ಹಲವು ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ, ತಾತ್ಕಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಡುತ್ತೇವೆ. ಆನಂತರ ನೂತನ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ಕೊಟ್ಟಿದ್ದರು.

ಇನ್ನು ಸೇತುವೆ ಕುಸಿದು ಬಿದ್ದ ನಂತರ ಮಾಗಡಿ ಶಾಸಕ ಎ ಮಂಜುನಾಥ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಂಸದ ಡಿ ಕೆ ಸುರೇಶ್ ಸೇರಿದಂತೆ ಹಲವು ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ, ತಾತ್ಕಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಡುತ್ತೇವೆ. ಆನಂತರ ನೂತನ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ಕೊಟ್ಟಿದ್ದರು.

5 / 7
ಭರವಸೆ ನೀಡಿ ಎರಡು ತಿಂಗಳುಗಳು ಕಳೆದು ತಾತ್ಕಾಲಿಕ ಸೇತುವೆ ನಿರ್ಮಾಣವಾಗಿಲ್ಲ. ಹೀಗಾಗಿ ಗ್ರಾಮಸ್ಥರು ಸಾಕಷ್ಟು ತೊಂದರೆ ಆನುಭವಿಸುತ್ತಿದ್ದಾರೆ. ಇನ್ನಾದರೂ ತಾತ್ಕಲಿಕ ಸೇತುವೆ ನಿರ್ಮಾಣ ಮಾಡಿ ಎಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂಗಲಾಚುತ್ತಿದ್ದಾರೆ.

ಭರವಸೆ ನೀಡಿ ಎರಡು ತಿಂಗಳುಗಳು ಕಳೆದು ತಾತ್ಕಾಲಿಕ ಸೇತುವೆ ನಿರ್ಮಾಣವಾಗಿಲ್ಲ. ಹೀಗಾಗಿ ಗ್ರಾಮಸ್ಥರು ಸಾಕಷ್ಟು ತೊಂದರೆ ಆನುಭವಿಸುತ್ತಿದ್ದಾರೆ. ಇನ್ನಾದರೂ ತಾತ್ಕಲಿಕ ಸೇತುವೆ ನಿರ್ಮಾಣ ಮಾಡಿ ಎಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂಗಲಾಚುತ್ತಿದ್ದಾರೆ.

6 / 7
ಒಟ್ಟಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಕುಸಿದು ಬಿದ್ದಿರುವ ಸೇತುವೆ ಮೇಲೆ ಶಾಲೆಗಳಿಗೆ ತೆರಳುತ್ತಿದ್ದಾರೆ. ಸ್ವಲ್ಪ ಆಯಾತಪ್ಪಿದರು ಅನಾಹುತ ಕಟ್ಟಿಟ್ಟ ಬುತ್ತಿ, ಆದಷ್ಟು ಬೇಗ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕಾಗಿದೆ.

ಒಟ್ಟಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಕುಸಿದು ಬಿದ್ದಿರುವ ಸೇತುವೆ ಮೇಲೆ ಶಾಲೆಗಳಿಗೆ ತೆರಳುತ್ತಿದ್ದಾರೆ. ಸ್ವಲ್ಪ ಆಯಾತಪ್ಪಿದರು ಅನಾಹುತ ಕಟ್ಟಿಟ್ಟ ಬುತ್ತಿ, ಆದಷ್ಟು ಬೇಗ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕಾಗಿದೆ.

7 / 7
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ