AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಸೇತುವೆ ಕುಸಿದು ಬಿದ್ದು ತಿಂಗಳುಗಳಾದರೂ ಕ್ಯಾರೆ ಎನ್ನದ ಜನಪ್ರತಿನಿಧಿಗಳು; ಉಸಿರು ಬಿಗಿ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಳಿ ಸೇತುವೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಇಲ್ಲದೆ ನದಿಯನ್ನ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 13, 2022 | 11:44 AM

Share
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಳಿ ಸೇತುವೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ
ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಇಲ್ಲದೆ ನದಿಯನ್ನ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಳಿ ಸೇತುವೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಇಲ್ಲದೆ ನದಿಯನ್ನ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

1 / 7
ಕಳೆದ ಎರಡು ತಿಂಗಳ ಹಿಂದೆ ಬಿದ್ದ ರಕ್ಕಸ ಮಳೆಯಿಂದ ಸೇತುವೆ ಕುಸಿದು ಬಿದ್ದಿದ್ದು, ಮಂಚನಬೆಲೆ ಗ್ರಾಮ ಸೇರಿದಂತೆ ಹತ್ತಾರು ಗ್ರಾಮದ ಜನರು ಬದಲಿ ಮಾರ್ಗವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಎರಡು ತಿಂಗಳ ಹಿಂದೆ ಬಿದ್ದ ರಕ್ಕಸ ಮಳೆಯಿಂದ ಸೇತುವೆ ಕುಸಿದು ಬಿದ್ದಿದ್ದು, ಮಂಚನಬೆಲೆ ಗ್ರಾಮ ಸೇರಿದಂತೆ ಹತ್ತಾರು ಗ್ರಾಮದ ಜನರು ಬದಲಿ ಮಾರ್ಗವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

2 / 7
ಇನ್ನು ಕುಸಿದು ಬಿದ್ದಿರುವ ಸೇತುವೆಯ ಮೇಲೆಯೇ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಹೋಗುತ್ತಿದ್ದರೆ, ಮತ್ತೊಂದೆಡೆ ತಾಯಂದಿರು ತಮ್ಮ ಮಕ್ಕಳನ್ನ ನದಿಯ ಮಧ್ಯೆ ಕೈ ಹಿಡಿದು ದಾಟಿಸಿ ಶಾಲೆಗೆ ಬಿಡುತ್ತಿದ್ದಾರೆ.

ಇನ್ನು ಕುಸಿದು ಬಿದ್ದಿರುವ ಸೇತುವೆಯ ಮೇಲೆಯೇ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಹೋಗುತ್ತಿದ್ದರೆ, ಮತ್ತೊಂದೆಡೆ ತಾಯಂದಿರು ತಮ್ಮ ಮಕ್ಕಳನ್ನ ನದಿಯ ಮಧ್ಯೆ ಕೈ ಹಿಡಿದು ದಾಟಿಸಿ ಶಾಲೆಗೆ ಬಿಡುತ್ತಿದ್ದಾರೆ.

3 / 7
ಮಂಚನಬೆಲೆ ಗ್ರಾಮದ ಸೇತುವೆ ಹತ್ತಾರು ಹಳ್ಳಿಗಳ ಗ್ರಾಮಸ್ಥರಿಗೆ ಆಸರೆಯಾಗಿತ್ತು. ರೈತರು ಜಮೀನುಗಳಿಗೆ ತೆರಳಲು, ಹಾಲನ್ನ ಡೈರಿಗೆ ಹಾಕಲು, ಬೆಂಗಳೂರಿಗೆ ತೆರಳಲು ಇದೇ ಸೇತುವೆ ಆಧಾರವಾಗಿತ್ತು. ಆದರೆ ಇದೀಗ ಸೇತುವೆ ಇಲ್ಲದೇ ಇರುವುದರಿಂದ ಹತ್ತಾರು ಕಿಲೋ ಮೀಟರ್ ಸುತ್ತಿಕೊಂಡು ಬರುವ ಪರಿಸ್ಥಿತಿ ಗ್ರಾಮಸ್ಥರಿಗೆ ನಿರ್ಮಾಣವಾಗಿದೆ.

ಮಂಚನಬೆಲೆ ಗ್ರಾಮದ ಸೇತುವೆ ಹತ್ತಾರು ಹಳ್ಳಿಗಳ ಗ್ರಾಮಸ್ಥರಿಗೆ ಆಸರೆಯಾಗಿತ್ತು. ರೈತರು ಜಮೀನುಗಳಿಗೆ ತೆರಳಲು, ಹಾಲನ್ನ ಡೈರಿಗೆ ಹಾಕಲು, ಬೆಂಗಳೂರಿಗೆ ತೆರಳಲು ಇದೇ ಸೇತುವೆ ಆಧಾರವಾಗಿತ್ತು. ಆದರೆ ಇದೀಗ ಸೇತುವೆ ಇಲ್ಲದೇ ಇರುವುದರಿಂದ ಹತ್ತಾರು ಕಿಲೋ ಮೀಟರ್ ಸುತ್ತಿಕೊಂಡು ಬರುವ ಪರಿಸ್ಥಿತಿ ಗ್ರಾಮಸ್ಥರಿಗೆ ನಿರ್ಮಾಣವಾಗಿದೆ.

4 / 7
ಇನ್ನು ಸೇತುವೆ ಕುಸಿದು ಬಿದ್ದ ನಂತರ ಮಾಗಡಿ ಶಾಸಕ ಎ ಮಂಜುನಾಥ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಂಸದ ಡಿ ಕೆ ಸುರೇಶ್ ಸೇರಿದಂತೆ ಹಲವು ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ, ತಾತ್ಕಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಡುತ್ತೇವೆ. ಆನಂತರ ನೂತನ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ಕೊಟ್ಟಿದ್ದರು.

ಇನ್ನು ಸೇತುವೆ ಕುಸಿದು ಬಿದ್ದ ನಂತರ ಮಾಗಡಿ ಶಾಸಕ ಎ ಮಂಜುನಾಥ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಂಸದ ಡಿ ಕೆ ಸುರೇಶ್ ಸೇರಿದಂತೆ ಹಲವು ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ, ತಾತ್ಕಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಡುತ್ತೇವೆ. ಆನಂತರ ನೂತನ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ಕೊಟ್ಟಿದ್ದರು.

5 / 7
ಭರವಸೆ ನೀಡಿ ಎರಡು ತಿಂಗಳುಗಳು ಕಳೆದು ತಾತ್ಕಾಲಿಕ ಸೇತುವೆ ನಿರ್ಮಾಣವಾಗಿಲ್ಲ. ಹೀಗಾಗಿ ಗ್ರಾಮಸ್ಥರು ಸಾಕಷ್ಟು ತೊಂದರೆ ಆನುಭವಿಸುತ್ತಿದ್ದಾರೆ. ಇನ್ನಾದರೂ ತಾತ್ಕಲಿಕ ಸೇತುವೆ ನಿರ್ಮಾಣ ಮಾಡಿ ಎಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂಗಲಾಚುತ್ತಿದ್ದಾರೆ.

ಭರವಸೆ ನೀಡಿ ಎರಡು ತಿಂಗಳುಗಳು ಕಳೆದು ತಾತ್ಕಾಲಿಕ ಸೇತುವೆ ನಿರ್ಮಾಣವಾಗಿಲ್ಲ. ಹೀಗಾಗಿ ಗ್ರಾಮಸ್ಥರು ಸಾಕಷ್ಟು ತೊಂದರೆ ಆನುಭವಿಸುತ್ತಿದ್ದಾರೆ. ಇನ್ನಾದರೂ ತಾತ್ಕಲಿಕ ಸೇತುವೆ ನಿರ್ಮಾಣ ಮಾಡಿ ಎಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂಗಲಾಚುತ್ತಿದ್ದಾರೆ.

6 / 7
ಒಟ್ಟಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಕುಸಿದು ಬಿದ್ದಿರುವ ಸೇತುವೆ ಮೇಲೆ ಶಾಲೆಗಳಿಗೆ ತೆರಳುತ್ತಿದ್ದಾರೆ. ಸ್ವಲ್ಪ ಆಯಾತಪ್ಪಿದರು ಅನಾಹುತ ಕಟ್ಟಿಟ್ಟ ಬುತ್ತಿ, ಆದಷ್ಟು ಬೇಗ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕಾಗಿದೆ.

ಒಟ್ಟಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲಾ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಕುಸಿದು ಬಿದ್ದಿರುವ ಸೇತುವೆ ಮೇಲೆ ಶಾಲೆಗಳಿಗೆ ತೆರಳುತ್ತಿದ್ದಾರೆ. ಸ್ವಲ್ಪ ಆಯಾತಪ್ಪಿದರು ಅನಾಹುತ ಕಟ್ಟಿಟ್ಟ ಬುತ್ತಿ, ಆದಷ್ಟು ಬೇಗ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕಾಗಿದೆ.

7 / 7
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್