AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಸಾಯಿ ಪಲ್ಲವಿ

ಖ್ಯಾತ ನಟಿ ಸಾಯಿ ಪಲ್ಲವಿ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರು ಬಿಡುವು ಮಾಡಿಕೊಂಡು ವಾರಾಣಸಿಗೆ ತೆರಳಿದ್ದಾರೆ. ಅಲ್ಲಿನ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ಅವರ ಈ ಫೋಟೋಗಳು ವೈರಲ್ ಆಗಿವೆ.

ಮದನ್​ ಕುಮಾರ್​
|

Updated on: Dec 23, 2024 | 3:27 PM

Share
Sai Pallavi

ಅನ್ನಪೂರ್ಣ ದೇವಸ್ಥಾನಕ್ಕೆ ಸಾಯಿ ಪಲ್ಲವಿ ಅವರು ಇಂದು (ಡಿ.23) ಭೇಟಿ ನೀಡಿದ್ದಾರೆ. ಅವರ ಸರಳತೆ ಫ್ಯಾನ್ಸ್ ಯಾವಾಗಲೂ ಫಿದಾ ಆಗುತ್ತಾರೆ. ಮೇಕಪ್ ಇಲ್ಲದೇ ಸುಂದರವಾಗಿ ಕಾಣಿಸಿಕೊಳ್ಳುವ ಸಾಯಿ ಪಲ್ಲವಿ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

1 / 5
Sai Pallavi

ಈ ವರ್ಷ ‘ಅಮರನ್’ ಸಿನಿಮಾ ಸೂಪರ್​ ಹಿಟ್ ಆಯಿತು. ಆ ಗೆಲುವಿನ ಖುಷಿಯಲ್ಲಿ ಸಾಯಿ ಪಲ್ಲವಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಸಿಕ್ಕಿದೆ. ‘ಅಮರನ್’ ಯಶಸ್ಸಿನ ಬಳಿಕ ಸಾಯಿ ಪಲ್ಲವಿ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ.

2 / 5
Sai Pallavi

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಾಯಿ ಪಲ್ಲವಿ ಅವರಿಗೆ ಬೇಡಿಕೆ ಇದೆ. ಸಿನಿಮಾದ ಕೆಲಸಗಳ ಬಿಡುವಿನಲ್ಲಿ ಅವರು ಕಾಶಿಯ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಸಿಂಪಲ್ ಆಗಿ ಕಾಣಿಸಿಕೊಂಡ ಸಾಯಿ ಪಲ್ಲವಿ ಅವರ ಫೋಟೋಸ್ ವೈರಲ್ ಆಗಿವೆ.

3 / 5
Sai Pallavi

ಬಾಲಿವುಡ್​ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ರಾಮನಾಗಿ ಕಾಣಿಸಿಕೊಳ್ಳುತ್ತಿರುವ ರಣಬೀರ್​ ಕಪೂರ್​ಗೆ ಸಾಯಿ ಪಲ್ಲವಿ ಜೋಡಿ ಆಗಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

4 / 5
Sai Pallavi

ನಾಗ ಚೈತನ್ಯ ಜೊತೆ ಸಾಯಿ ಪಲ್ಲವಿ ನಟಿಸಿರುವ ‘ತಂಡೇಲ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್​ ತಡವಾಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ