ರಮೇಶ್ ಅರವಿಂದ್ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’; ಗೌರವ ಸ್ವೀಕರಿಸಿದ ನಟ
ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.
Updated on: Mar 18, 2024 | 2:57 PM

ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಕುಮಾರ್, ರಜನಿಕಾಂತ್, ಶಿವರಾಜ್ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




