AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ನಟನೆಯ 106ನೇ ಸಿನಿಮಾ ‘ದೈಜಿ’; ಇಲ್ಲಿದೆ ಮುಹೂರ್ತದ ಫೋಟೋಗಳು

ನಟ ರಮೇಶ್​ ಅರವಿಂದ್​ ಅವರು ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅವರು ‘ದೈಜಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಈ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jan 12, 2025 | 8:50 PM

Share
Ramesh Aravind (8)

‘ದೈಜಿ’ ಸಿನಿಮಾದ ಮುಹೂರ್ತವನ್ನು ಭಾನುವಾರ (ಜನವರಿ 12) ಬೆಳಕ್ಕೆ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನೆರವೇರಿಸಲಾಗಿದೆ. ಈ ಸಿನಿಮಾ ರಮೇಶ ಅರವಿಂದ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ 106ನೇ ಚಿತ್ರ ಎಂಬುದು ವಿಶೇಷ.

1 / 5
Ramesh Aravind (5)

ಈ ಚಿತ್ರಕ್ಕೆ ರವಿಕಶ್ಯಪ್ ಅವರು ಬಂಡವಾಳ ಹೂಡುತ್ತಿದ್ದಾರೆ. ಆಕಾಶ್ ಶ್ರೀವತ್ಸ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಶಿವಾಜಿ ಸುರತ್ಕಲ್ 1’ ಮತ್ತು ‘ಶಿವಾಜಿ ಸುರತ್ಕಲ್ 2’ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು.

2 / 5
Ramesh Aravind (7)

ರಮೇಶ್ ಅರವಿಂದ್ ಹಾಗೂ ಆಕಾಶ್ ಶ್ರೀವತ್ಸ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಮೂರನೇ ಸಿನಿಮಾ. ‘ದೈಜಿ’. ಮುಹೂರ್ತದ ವೇಳೆ ರಮೇಶ್ ಅರವಿಂದ್, ನಟಿ ರಾಧಿಕಾ ನಾರಾಯಣ ಮುಂತಾದವರು ಹಾಜರಿದ್ದರು.

3 / 5
Ramesh Aravind (6)

ಈ ಮೊದಲು ಕೂಡ ರಮೇಶ್​ ಅರವಿಂದ್ ಮತ್ತು ರಾಧಿಕಾ ನಾರಾಯಣ್ ಅವರು ‘ಶಿವಾಜಿ ಸುರತ್ಕಲ್’ ಸರಣಿ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದರು. ಅವರಿಬ್ಬರು ಈಗ ‘ದೈಜಿ’ ಸಿನಿಮಾದಲ್ಲಿಯೂ ತೆರೆ ಹಂಚಿಕೊಳ್ಳುತ್ತಿದ್ದಾರೆ.

4 / 5
Ramesh Aravind (4)

‘ದೈಜಿ’ ಸಿನಿಮಾಗೆ ಶ್ರೀಶ ಕುದುವಳ್ಳಿ ಛಾಯಾಗ್ರಾಹಣ ಮಾಡಲಿದ್ದಾರೆ. ಈ ಹಿಂದೆ ಶ್ರೀಶ ಅವರು ‘ಯಜಮಾನ’, ‘ಯುವ’ ಮುಂತಾದ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ‘ದೈಜಿ’ ಚಿತ್ರೀಕರಣ ಶೀಘ್ರದಲ್ಲಿ ಶುರು ಆಗಲಿದೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್