AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವಾಗ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ

ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣದ ಅಭ್ಯರ್ಥಿ ಹೆಚ್​ ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಅಜ್ಜನಿಂದ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ನಿಖಿಲ್​ ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Apr 17, 2023 | 1:56 PM

Share
ರಾಮನಗರ ಜೆಡಿಎಸ್​ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಬಳಿ ಬಿ ಫಾರ್ಮ್ ಪಡೆದುಕೊಂಡರು.

ರಾಮನಗರ ಜೆಡಿಎಸ್​ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಬಳಿ ಬಿ ಫಾರ್ಮ್ ಪಡೆದುಕೊಂಡರು.

1 / 6
ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

2 / 6
ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.

ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.

3 / 6
ಇದೇ ವೇಳೆ ಅಜ್ಜಿ ಚೆನ್ನಮ್ಮ ಅವರಿಗೆ ಕಾಲು ಮುಗಿದ ಆಶೀರ್ವಾದ ಪಡೆದುಕೊಂಡಿದ್ದು, ಈ ವೇಳೆ ಪತ್ನಿ ರೇವತಿ ಸಹ ಇದ್ದರು.

ಇದೇ ವೇಳೆ ಅಜ್ಜಿ ಚೆನ್ನಮ್ಮ ಅವರಿಗೆ ಕಾಲು ಮುಗಿದ ಆಶೀರ್ವಾದ ಪಡೆದುಕೊಂಡಿದ್ದು, ಈ ವೇಳೆ ಪತ್ನಿ ರೇವತಿ ಸಹ ಇದ್ದರು.

4 / 6
ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ,

ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ,

5 / 6
ಇದೇ ವೇಳೆ ಹೆಚ್​ಡಿ ಕುಮಾರಸ್ವಾಮಿ ಅವರು ಸಹ ಚನ್ನಪಟ್ಟಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ತಂದೆಯಿಂದ ಬಿ ಫಾರ್ಮ್ ಪಡೆದುಕೊಂಡರು.

ಇದೇ ವೇಳೆ ಹೆಚ್​ಡಿ ಕುಮಾರಸ್ವಾಮಿ ಅವರು ಸಹ ಚನ್ನಪಟ್ಟಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ತಂದೆಯಿಂದ ಬಿ ಫಾರ್ಮ್ ಪಡೆದುಕೊಂಡರು.

6 / 6

Published On - 1:54 pm, Mon, 17 April 23

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us