AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಮದುವೆ ಫೋಟೋ ಜೊತೆ ರಶ್ಮಿಕಾ ಮಂದಣ್ಣ ಎಮೋಷನಲ್ ಮಾತು

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ವಿವಾಹದ ಸುಂದರ ಫೋಟೋಗಳು ಲಭ್ಯವಾಗಿವೆ. ಫೋಟೋಗಳ ಜೊತೆಯಲ್ಲಿ ರಶ್ಮಿಕಾ ಮಂದಣ್ಣ ಅವರು ಭಾವುಕವಾದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಬದುಕಿನಲ್ಲಿ ವಿಜಯ್ ದೇವರಕೊಂಡ ಎಷ್ಟು ಮುಖ್ಯವಾದ ವ್ಯಕ್ತಿ ಎಂಬುದನ್ನು ಅವರು ವಿವರಿಸಿದ್ದಾರೆ.

ಮದನ್​ ಕುಮಾರ್​
|

Updated on: Feb 26, 2026 | 7:37 PM

Share
‘ನನ್ನ ಪತಿ, ವಿಸ್ಟರ್ ವಿಜಯ್ ದೇವರಕೊಂಡ ಅವರನ್ನು ನಾನು ನಿಮಗೆ ಪರಿಚಯಿಸುತ್ತಿದ್ದೇನೆ. ನಿಜವಾದ ಪ್ರೀತಿ ಎಂದರೆ ಏನು ಅಂತ ಕಲಿಸಿದ ವ್ಯಕ್ತಿ. ನೆಮ್ಮದಿಯಿಂದ ಇರುವುದು ಅಂದ್ರೆ ಹೇಗಿರುತ್ತದೆ ಎಂಬುದನ್ನು ಕಲಿಸಿದ ವ್ಯಕ್ತಿ. ದೊಡ್ಡ ಕನಸು ಕಾಣುವುದನ್ನು ಕಲಿಸಿದ ವ್ಯಕ್ತಿ’ ಎಂದು ರಶ್ಮಿಕಾ ಅವರು ಪತಿಯ ಗುಣಗಾನ ಮಾಡಿದ್ದಾರೆ.

‘ನನ್ನ ಪತಿ, ವಿಸ್ಟರ್ ವಿಜಯ್ ದೇವರಕೊಂಡ ಅವರನ್ನು ನಾನು ನಿಮಗೆ ಪರಿಚಯಿಸುತ್ತಿದ್ದೇನೆ. ನಿಜವಾದ ಪ್ರೀತಿ ಎಂದರೆ ಏನು ಅಂತ ಕಲಿಸಿದ ವ್ಯಕ್ತಿ. ನೆಮ್ಮದಿಯಿಂದ ಇರುವುದು ಅಂದ್ರೆ ಹೇಗಿರುತ್ತದೆ ಎಂಬುದನ್ನು ಕಲಿಸಿದ ವ್ಯಕ್ತಿ. ದೊಡ್ಡ ಕನಸು ಕಾಣುವುದನ್ನು ಕಲಿಸಿದ ವ್ಯಕ್ತಿ’ ಎಂದು ರಶ್ಮಿಕಾ ಅವರು ಪತಿಯ ಗುಣಗಾನ ಮಾಡಿದ್ದಾರೆ.

1 / 6
‘ಯಾರೂ ನೋಡುತ್ತಿಲ್ಲ ಎಂಬಂತೆ ನಾನು ಕುಣಿಯುವುದನ್ನು ಎಂದಿಗೂ ತಡೆಯದ ವ್ಯಕ್ತಿ. ಸ್ನೇಹಿತರ ಜೊತೆ ಪ್ರಯಾಣ ಮಾಡುವುದು ಎಂದಿಗೂ ಅತ್ಯುತ್ತಮ ಸಂಗತಿ ಎಂಬುದನ್ನು ತೋರಿಸಿದ ವ್ಯಕ್ತಿ. ನಾನು ಈ ವ್ಯಕ್ತಿಯ ಕುರಿತು ಒಂದು ಪುಸ್ತಕವನ್ನೇ ಬರೆಯಬಹುದು’ ಎಂದು ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ವ್ಯಕ್ತಿತ್ವದ ಬಗ್ಗೆ ವಿವರಣೆ ನೀಡಿದ್ದಾರೆ.

‘ಯಾರೂ ನೋಡುತ್ತಿಲ್ಲ ಎಂಬಂತೆ ನಾನು ಕುಣಿಯುವುದನ್ನು ಎಂದಿಗೂ ತಡೆಯದ ವ್ಯಕ್ತಿ. ಸ್ನೇಹಿತರ ಜೊತೆ ಪ್ರಯಾಣ ಮಾಡುವುದು ಎಂದಿಗೂ ಅತ್ಯುತ್ತಮ ಸಂಗತಿ ಎಂಬುದನ್ನು ತೋರಿಸಿದ ವ್ಯಕ್ತಿ. ನಾನು ಈ ವ್ಯಕ್ತಿಯ ಕುರಿತು ಒಂದು ಪುಸ್ತಕವನ್ನೇ ಬರೆಯಬಹುದು’ ಎಂದು ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ವ್ಯಕ್ತಿತ್ವದ ಬಗ್ಗೆ ವಿವರಣೆ ನೀಡಿದ್ದಾರೆ.

2 / 6
‘ನಾನು ಯಾವಾಗಲೂ ಕನಸು ಕಂಡಿದ್ದ ಮಹಿಳೆಯಾಗಿದ್ದೇನೆ, ಏಕೆಂದರೆ ನೀನು ಅವಳನ್ನು ಇಂದಿನ ಸ್ಥಿತಿಗೆ ತಂದಿರುವೆ. ನಾನು ನಿಜವಾಗಿಯೂ ಧನ್ಯಳು. ನಿನ್ನ ಬಗ್ಗೆ ನನಗೆ ಇರುವ ಫೀಲಿಂಗ್ಸ್ ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಅದನ್ನು ನಾನು ನಿನಗೆ ಈಗಾಗಲೇ ಹೇಳಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಭಾವುಕವಾಗಿ ಈ ಸಾಲುಗಳನ್ನು ಪೋಸ್ಟ್ ಮಾಡಿದ್ದಾರೆ.

‘ನಾನು ಯಾವಾಗಲೂ ಕನಸು ಕಂಡಿದ್ದ ಮಹಿಳೆಯಾಗಿದ್ದೇನೆ, ಏಕೆಂದರೆ ನೀನು ಅವಳನ್ನು ಇಂದಿನ ಸ್ಥಿತಿಗೆ ತಂದಿರುವೆ. ನಾನು ನಿಜವಾಗಿಯೂ ಧನ್ಯಳು. ನಿನ್ನ ಬಗ್ಗೆ ನನಗೆ ಇರುವ ಫೀಲಿಂಗ್ಸ್ ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಅದನ್ನು ನಾನು ನಿನಗೆ ಈಗಾಗಲೇ ಹೇಳಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಭಾವುಕವಾಗಿ ಈ ಸಾಲುಗಳನ್ನು ಪೋಸ್ಟ್ ಮಾಡಿದ್ದಾರೆ.

3 / 6
‘ನನ್ನ ಸಾಧನೆ, ಕಷ್ಟಗಳು, ಖುಷಿ, ದುಃಖ, ಬದುಕು ಎಲ್ಲದಕ್ಕೂ ಈಗ ಒಂದು ಅರ್ಥ ಬಂದಿದೆ. ಯಾಕೆಂದರೆ, ಈಗ ನಾನು ನಿನ್ನನ್ನು ಪಡೆದಿರುವೆ. ಇದನ್ನೆಲ್ಲ ನೀನು ನೋಡುತ್ತಿರುವೆ. ಇದರ ಭಾಗವಾಗಿರುವೆ. ನಿನ್ನ ಹೆಂಡತಿಯಾಗಿದ್ದಕ್ಕೆ ನನಗೆ ಬಹಳ ಸಂತೋಷ ಆಗುತ್ತಿದೆ. ಇದು ಪಾರ್ಟಿ ಮಾಡುವ ಸಮಯ’ ಎನ್ನುವ ಮೂಲಕ ರಶ್ಮಿಕಾ ಸಂತಸ ವ್ಯಕ್ತಪಡಿಸಿದ್ದಾರೆ.

‘ನನ್ನ ಸಾಧನೆ, ಕಷ್ಟಗಳು, ಖುಷಿ, ದುಃಖ, ಬದುಕು ಎಲ್ಲದಕ್ಕೂ ಈಗ ಒಂದು ಅರ್ಥ ಬಂದಿದೆ. ಯಾಕೆಂದರೆ, ಈಗ ನಾನು ನಿನ್ನನ್ನು ಪಡೆದಿರುವೆ. ಇದನ್ನೆಲ್ಲ ನೀನು ನೋಡುತ್ತಿರುವೆ. ಇದರ ಭಾಗವಾಗಿರುವೆ. ನಿನ್ನ ಹೆಂಡತಿಯಾಗಿದ್ದಕ್ಕೆ ನನಗೆ ಬಹಳ ಸಂತೋಷ ಆಗುತ್ತಿದೆ. ಇದು ಪಾರ್ಟಿ ಮಾಡುವ ಸಮಯ’ ಎನ್ನುವ ಮೂಲಕ ರಶ್ಮಿಕಾ ಸಂತಸ ವ್ಯಕ್ತಪಡಿಸಿದ್ದಾರೆ.

4 / 6
‘ಅತ್ಯುತ್ತಮವಾದ ಬದುಕನ್ನು ಜೊತೆಯಾಗಿ ನಡೆಸೋಣ. ಐ ಲವ್ ಯೂ’ ಎನ್ನುವ ಮೂಲಕ ರಶ್ಮಿಕಾ ಮಂದಣ್ಣ ಅವರು ಈ ಬರಹ ಪೂರ್ಣಗೊಳಿಸಿದ್ದಾರೆ. ಹಾಗೆಯೇ ವಿಜಯ್ ದೇವರಕೊಂಡ ಕೂಡ ತಮ್ಮ ಬಾಳಿನಲ್ಲಿ ರಶ್ಮಿಕಾ ಮಂದಣ್ಣ ಎಷ್ಟು ಮುಖ್ಯವಾದ ವ್ಯಕ್ತಿ ಎಂಬುದನ್ನು ಅವರ ಪೋಸ್ಟ್ ಮೂಲಕ ವಿವರಿಸಿದ್ದಾರೆ. ಅದು ಸಹ ವೈರಲ್ ಆಗಿದೆ.

‘ಅತ್ಯುತ್ತಮವಾದ ಬದುಕನ್ನು ಜೊತೆಯಾಗಿ ನಡೆಸೋಣ. ಐ ಲವ್ ಯೂ’ ಎನ್ನುವ ಮೂಲಕ ರಶ್ಮಿಕಾ ಮಂದಣ್ಣ ಅವರು ಈ ಬರಹ ಪೂರ್ಣಗೊಳಿಸಿದ್ದಾರೆ. ಹಾಗೆಯೇ ವಿಜಯ್ ದೇವರಕೊಂಡ ಕೂಡ ತಮ್ಮ ಬಾಳಿನಲ್ಲಿ ರಶ್ಮಿಕಾ ಮಂದಣ್ಣ ಎಷ್ಟು ಮುಖ್ಯವಾದ ವ್ಯಕ್ತಿ ಎಂಬುದನ್ನು ಅವರ ಪೋಸ್ಟ್ ಮೂಲಕ ವಿವರಿಸಿದ್ದಾರೆ. ಅದು ಸಹ ವೈರಲ್ ಆಗಿದೆ.

5 / 6
ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ಅವರು ಖ್ಯಾತಿ ಪಡೆದಿದ್ದಾರೆ. ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ನಟಿಯಾಗಿ ಬೆಳೆದಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಮದುವೆಯ ಫೋಟೋಗಳಿಗೆ ಕಮೆಂಟ್ ಮಾಡಿರುವ ಅಭಿಮಾನಿಗಳು, ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ಅವರು ಖ್ಯಾತಿ ಪಡೆದಿದ್ದಾರೆ. ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ನಟಿಯಾಗಿ ಬೆಳೆದಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​ನಲ್ಲಿ ಫೇಮಸ್ ಆಗಿದ್ದಾರೆ. ಮದುವೆಯ ಫೋಟೋಗಳಿಗೆ ಕಮೆಂಟ್ ಮಾಡಿರುವ ಅಭಿಮಾನಿಗಳು, ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

6 / 6
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ