AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raw Mango Benefits: ಬೇಸಿಗೆಯಲ್ಲಿ ಹಸಿ ಮಾವು ತಿನ್ಬೇಕಂತೆ; ಯಾಕೆ ಗೊತ್ತಾ?

ಬೇಸಿಗೆ ಆರಂಭವಾಗುತ್ತಿದ್ದಂತೆ, ಮಾವಿನ ಹಣ್ಣು, ಮಾವಿನ ಕಾಯಿ ಸೀಸನ್‌ ಕೂಡಾ ಪ್ರಾರಂಭವಾಗುತ್ತದೆ. ಇದೀಗ ಮಾವಿನ ಸೀಸನ್‌ ಪ್ರಾರಂಭವಾಗಿದ್ದು, ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದ್ರೂ ಮಾವುಗಳೇ ಕಾಣಸಿಗುತ್ತಿವೆ. ಮಾವಿನ ಹಣ್ಣನ್ನು ತಿನ್ನುವ ಹಾಗೆ ಮಾವಿನಕಾಯಿಯನ್ನು ಕೂಡಾ ಬೇಸಿಗೆಯಲ್ಲಿ ತಿನ್ಬೇಕಂತೆ. ಉಪ್ಪು, ಖಾರ ಹಾಕಿ ತಿನ್ನುವ ಹಸಿ ಮಾವು ನಾಲಿಗೆ ರುಚಿ ಮಾತ್ರವಲ್ಲದೆ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಹಾಗಿದ್ರೆ ಈ ಬೇಸಿಗೆಯಲ್ಲಿ ಮಾವಿನಕಾಯಿ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ.

ಮಾಲಾಶ್ರೀ ಅಂಚನ್​
| Edited By: |

Updated on: Apr 21, 2025 | 5:56 PM

Share
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಜೀವಸತ್ವಗಳು, ಖನಿಜಗಳು, ಫೈಬರ್  ಮತ್ತು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಕೆ ನಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿದ ಹಸಿ ಮಾವು ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ನಿಯಮಿತವಾಗಿ ಹಸಿ ಮಾವು ಸೇವಿಸುವುದರಿಂದ ದೇಹದ ರೋಧನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲದೆ ಇದು ಶೀತ, ಕೆಮ್ಮು ಮತ್ತು ಸೋಂಕಿನಂತಹ ಸಮಸ್ಯೆಗಳಿಂದಲೂ ರಕ್ಷಿಸುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಕೆ ನಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿದ ಹಸಿ ಮಾವು ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ನಿಯಮಿತವಾಗಿ ಹಸಿ ಮಾವು ಸೇವಿಸುವುದರಿಂದ ದೇಹದ ರೋಧನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲದೆ ಇದು ಶೀತ, ಕೆಮ್ಮು ಮತ್ತು ಸೋಂಕಿನಂತಹ ಸಮಸ್ಯೆಗಳಿಂದಲೂ ರಕ್ಷಿಸುತ್ತದೆ.

1 / 5
ಶಾಖದ ಹೊಡೆತದಿಂದ ರಕ್ಷಣೆ: ಬೇಸಿಗೆಯಲ್ಲಿ ಶಾಖದ ಹೊಡೆತ ಕೂಡಾ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಸಾಕಷ್ಟು ನೀರನ್ನು ಕುಡಿಯುವುದರ ಜೊತೆಗೆ ದೇಹವನ್ನು ತಂಪಾಗಿಡಲು ಸಹಾಯ ಮಾಡುವ ಆಹಾರಗಳನ್ನು ಸೇವಿಸಬೇಕು. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದು ದೇಹವನ್ನು ತಂಪಾಗಿಸುವುದರ ಜೊತೆಗೆ ಇದರಲ್ಲಿರುವ ಎಲೆಕ್ಟ್ರೋಲೈಟ್‌ ಅಂಶಗಳು ದೇಹದಲ್ಲಿ ನೀರಿನ ಅಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಶಾಖದ ಹೊಡೆತದಿಂದ ರಕ್ಷಣೆ: ಬೇಸಿಗೆಯಲ್ಲಿ ಶಾಖದ ಹೊಡೆತ ಕೂಡಾ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಸಾಕಷ್ಟು ನೀರನ್ನು ಕುಡಿಯುವುದರ ಜೊತೆಗೆ ದೇಹವನ್ನು ತಂಪಾಗಿಡಲು ಸಹಾಯ ಮಾಡುವ ಆಹಾರಗಳನ್ನು ಸೇವಿಸಬೇಕು. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದು ದೇಹವನ್ನು ತಂಪಾಗಿಸುವುದರ ಜೊತೆಗೆ ಇದರಲ್ಲಿರುವ ಎಲೆಕ್ಟ್ರೋಲೈಟ್‌ ಅಂಶಗಳು ದೇಹದಲ್ಲಿ ನೀರಿನ ಅಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

2 / 5
ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಮಾವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಫೈಬರ್ ಮತ್ತು ಪೆಕ್ಟಿನ್,  ನಾರಿನಾಂಶವನ್ನು ಹೊಂದಿದ್ದು,  ಇದು ಮಲಬದ್ಧತೆ, ಆಮ್ಲೀಯತೆ ಮತ್ತು ಅಜೀರ್ಣ ಸಮಸ್ಯೆಯನ್ನು ನಿವಾರಿಸುತ್ತದೆ.  ಉಪ್ಪು ಮತ್ತು ಮೆಣಸಿನ ಪುಡಿಯೊಂದಿಗೆ ಹಸಿ ಮಾವನ್ನು ಸೇವನೆ ಮಾಡುವ ಮೂಲಕ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ವೇಗಗೊಳಿಸಬಹುದು.

ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಮಾವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಫೈಬರ್ ಮತ್ತು ಪೆಕ್ಟಿನ್, ನಾರಿನಾಂಶವನ್ನು ಹೊಂದಿದ್ದು, ಇದು ಮಲಬದ್ಧತೆ, ಆಮ್ಲೀಯತೆ ಮತ್ತು ಅಜೀರ್ಣ ಸಮಸ್ಯೆಯನ್ನು ನಿವಾರಿಸುತ್ತದೆ. ಉಪ್ಪು ಮತ್ತು ಮೆಣಸಿನ ಪುಡಿಯೊಂದಿಗೆ ಹಸಿ ಮಾವನ್ನು ಸೇವನೆ ಮಾಡುವ ಮೂಲಕ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ವೇಗಗೊಳಿಸಬಹುದು.

3 / 5
ಮೂಳೆಗಳನ್ನು ಬಲಪಡಿಸಲು ಸಹಕಾರಿ: ಹಸಿ ಮಾವು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದ್ದು, ಇದು ಮೂಳೆ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ನೀವು ಹಸಿ ಮಾವು ಸೇವಿಸಿದರೆ, ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಇದರಲ್ಲಿರುವ ಪೊಟ್ಯಾಸಿಯಂ ಹೃದಯದ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಲ್ಲದೆ ಇದು ತೂಕ ಇಳಿಕೆಗೂ ಸಹಕಾರಿಯಾಗಿದೆ.

ಮೂಳೆಗಳನ್ನು ಬಲಪಡಿಸಲು ಸಹಕಾರಿ: ಹಸಿ ಮಾವು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದ್ದು, ಇದು ಮೂಳೆ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ನೀವು ಹಸಿ ಮಾವು ಸೇವಿಸಿದರೆ, ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಇದರಲ್ಲಿರುವ ಪೊಟ್ಯಾಸಿಯಂ ಹೃದಯದ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಲ್ಲದೆ ಇದು ತೂಕ ಇಳಿಕೆಗೂ ಸಹಕಾರಿಯಾಗಿದೆ.

4 / 5
ಜಲಸಂಚಯನ: ಈ ಬೇಸಿಗೆಯ ಸುಡುವ ಶಾಖದಲ್ಲಿ, ದೇಹವನ್ನು ಹೈಡ್ರೇಟ್‌ ಆಗಿರಿಸುವುದು ತುಂಬಾನೇ ಮುಖ್ಯ. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದರಲ್ಲಿ ಸಾಕಷ್ಟು ನೀರಿನಾಂಶವಿದ್ದು, ಇದು ದೇಹವನ್ನು ಉಲ್ಲಾಸಕರ ಮತ್ತು ಹೈಡ್ರೇಟಿಂಗ್‌ ಆಗಿಡಲು ಸಹಾಯ ಮಾಡುತ್ತದೆ. ಹುಳಿ ಇರುವ ಕಾರಣ ಮಾವಿನ ಕಾಯಿಯನ್ನು ಹಾಗೆಯೇ ತಿನ್ನಲು ಇಷ್ಟವಿಲ್ಲದಿದ್ದರೆ, ಆಮ್‌ ಪನ್ನಾ, ಮಾವಿನಕಾಯಿ ಚಟ್ನಿ, ಸ್ಮೂಥಿ, ಸಲಾಡ್‌ ತಯಾರಿಸಿ ಈ ರೂಪದಲ್ಲೂ ಮಾವಿನಕಾಯಿ ಸೇವಿಸಬಹುದು.

ಜಲಸಂಚಯನ: ಈ ಬೇಸಿಗೆಯ ಸುಡುವ ಶಾಖದಲ್ಲಿ, ದೇಹವನ್ನು ಹೈಡ್ರೇಟ್‌ ಆಗಿರಿಸುವುದು ತುಂಬಾನೇ ಮುಖ್ಯ. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದರಲ್ಲಿ ಸಾಕಷ್ಟು ನೀರಿನಾಂಶವಿದ್ದು, ಇದು ದೇಹವನ್ನು ಉಲ್ಲಾಸಕರ ಮತ್ತು ಹೈಡ್ರೇಟಿಂಗ್‌ ಆಗಿಡಲು ಸಹಾಯ ಮಾಡುತ್ತದೆ. ಹುಳಿ ಇರುವ ಕಾರಣ ಮಾವಿನ ಕಾಯಿಯನ್ನು ಹಾಗೆಯೇ ತಿನ್ನಲು ಇಷ್ಟವಿಲ್ಲದಿದ್ದರೆ, ಆಮ್‌ ಪನ್ನಾ, ಮಾವಿನಕಾಯಿ ಚಟ್ನಿ, ಸ್ಮೂಥಿ, ಸಲಾಡ್‌ ತಯಾರಿಸಿ ಈ ರೂಪದಲ್ಲೂ ಮಾವಿನಕಾಯಿ ಸೇವಿಸಬಹುದು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ