AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ನಡೆಯಿತು. ಗೋಪಾಲಕರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರು ತಮ್ಮ ಜಾನುವಾರುಗಳೊಂದಿಗೆ ಭಾಗವಹಿಸಿ, ಲೀಟರ್‌ಗಟ್ಟಲೆ ಹಾಲು ಕರೆಯುವ ಸಾಮರ್ಥ್ಯ ಪ್ರದರ್ಶಿಸಿದರು. ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಜೇತ ರೈತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.

ನವೀನ್ ಕುಮಾರ್ ಟಿ
| Edited By: |

Updated on:Jan 19, 2026 | 9:06 PM

Share
ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ. 

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ. 

1 / 5
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.  

2 / 5
ರಾಜ್ಯದ ಹಲವು ಜಿಲ್ಲೆಗಳಿಂದ ರೈತರು ಸ್ವಯಂ ಪ್ರೇರಿತವಾಗಿ ತಮ್ಮ ಹಸುಗಳೊಂದಿಗೆ ಸ್ಪರ್ಧೆಗೆ ಆಗಮಿಸಿದ್ದರು. ಜೊತೆಗೆ ರೈತರೆಲ್ಲಾ ಮೈದಾನದಲ್ಲೇ ಹಸುಗಳನ್ನ ಮೇಯಿಸುತ್ತಾ ಕಾಲ ಕಳೆದಿದ್ದು, ಸಂಜೆ ವೇಳೆ ಜಡ್ಜ್​ಗಳ ಮುಂದೆಯೇ ಪ್ರತಿ ಹಸುವಿನಿಂದ ಕರೆದ ಲೀಟರ್ ಗಟ್ಟಲೆ ಹಾಲು ಅಳತೆ ಮಾಡಿದರು. 

ರಾಜ್ಯದ ಹಲವು ಜಿಲ್ಲೆಗಳಿಂದ ರೈತರು ಸ್ವಯಂ ಪ್ರೇರಿತವಾಗಿ ತಮ್ಮ ಹಸುಗಳೊಂದಿಗೆ ಸ್ಪರ್ಧೆಗೆ ಆಗಮಿಸಿದ್ದರು. ಜೊತೆಗೆ ರೈತರೆಲ್ಲಾ ಮೈದಾನದಲ್ಲೇ ಹಸುಗಳನ್ನ ಮೇಯಿಸುತ್ತಾ ಕಾಲ ಕಳೆದಿದ್ದು, ಸಂಜೆ ವೇಳೆ ಜಡ್ಜ್​ಗಳ ಮುಂದೆಯೇ ಪ್ರತಿ ಹಸುವಿನಿಂದ ಕರೆದ ಲೀಟರ್ ಗಟ್ಟಲೆ ಹಾಲು ಅಳತೆ ಮಾಡಿದರು. 

3 / 5
ಹಾಲು ಕರೆಯುವ ಸ್ಪರ್ಧೆಗಾಗಿ ವಿವಿಧ ಮೂಲೆಗಳಿಂದ ಬಂದ ರೈತರಿಗೆ ಉಳಿದುಕೊಳ್ಳಲು ಹಾಗೂ ಹಸುವಿಗೆ ಮೇವಿನ ವ್ಯವಸ್ಥೆ ಮಾಡಿದ್ದು, ನೂರಾರು ಜನರು ವಿವಿಧ ತಳಿಗಳ ಹಸುಗಳನ್ನ ನೋಡಿ ಸಂತಸಪಟ್ಟರು. ರೈತರು ಸ್ಥಳೀಯರ ಮುಂದೆಯೇ ಕರೆದ ಹಾಲನ್ನ ಕ್ಯಾನ್​ಗಳಿಗೆ ಹಾಕಿ ಅಳತೆ ಮಾಡಿದ್ದು, ಒಂದೊಂದು ಹಸು 20 ರಿಂದ 25 ಲೀಟರ್​​ವರೆಗೂ ಹಾಲು ಕರೆಯುವ ಮೂಲಕ ನೋಡುಗರು ಬೆರಗಾದರು.

ಹಾಲು ಕರೆಯುವ ಸ್ಪರ್ಧೆಗಾಗಿ ವಿವಿಧ ಮೂಲೆಗಳಿಂದ ಬಂದ ರೈತರಿಗೆ ಉಳಿದುಕೊಳ್ಳಲು ಹಾಗೂ ಹಸುವಿಗೆ ಮೇವಿನ ವ್ಯವಸ್ಥೆ ಮಾಡಿದ್ದು, ನೂರಾರು ಜನರು ವಿವಿಧ ತಳಿಗಳ ಹಸುಗಳನ್ನ ನೋಡಿ ಸಂತಸಪಟ್ಟರು. ರೈತರು ಸ್ಥಳೀಯರ ಮುಂದೆಯೇ ಕರೆದ ಹಾಲನ್ನ ಕ್ಯಾನ್​ಗಳಿಗೆ ಹಾಕಿ ಅಳತೆ ಮಾಡಿದ್ದು, ಒಂದೊಂದು ಹಸು 20 ರಿಂದ 25 ಲೀಟರ್​​ವರೆಗೂ ಹಾಲು ಕರೆಯುವ ಮೂಲಕ ನೋಡುಗರು ಬೆರಗಾದರು.

4 / 5
ಇನ್ನು ಮೊದಲ ಬಹುಮಾನ ಗೆದ್ದ ಹೆಚ್ಚು ಹಾಲು ಕರೆದ ರೈತರಿಗೆ ಒಂದೂವರೆ ಲಕ್ಷ ರೂ ಹಣ ಹಾಗೂ ಟ್ರೋಫಿ, ಎರಡನೇ ಬಹುಮಾನವಾಗಿ ಒಂದು ಲಕ್ಷ ರೂ ಹಣ ಮತ್ತು ಮೂರನೇ ಬಹುಮಾನವಾಗಿ 75 ಸಾವಿರ ರೂ ಹಣವನ್ನ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ನೀಡುವ ಮೂಲಕ ರೈತರನ್ನ ಪ್ರೋತ್ಸಾಹಿಸಿದರು. ವಿನೂತನ ಸ್ಪರ್ಧೆ ಕಂಡು ಜನರು ನಿಬ್ಬೆರಗಾದರು.

ಇನ್ನು ಮೊದಲ ಬಹುಮಾನ ಗೆದ್ದ ಹೆಚ್ಚು ಹಾಲು ಕರೆದ ರೈತರಿಗೆ ಒಂದೂವರೆ ಲಕ್ಷ ರೂ ಹಣ ಹಾಗೂ ಟ್ರೋಫಿ, ಎರಡನೇ ಬಹುಮಾನವಾಗಿ ಒಂದು ಲಕ್ಷ ರೂ ಹಣ ಮತ್ತು ಮೂರನೇ ಬಹುಮಾನವಾಗಿ 75 ಸಾವಿರ ರೂ ಹಣವನ್ನ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ನೀಡುವ ಮೂಲಕ ರೈತರನ್ನ ಪ್ರೋತ್ಸಾಹಿಸಿದರು. ವಿನೂತನ ಸ್ಪರ್ಧೆ ಕಂಡು ಜನರು ನಿಬ್ಬೆರಗಾದರು.

5 / 5

Published On - 9:01 pm, Mon, 19 January 26

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ