AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ನಡೆಯಿತು. ಗೋಪಾಲಕರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರು ತಮ್ಮ ಜಾನುವಾರುಗಳೊಂದಿಗೆ ಭಾಗವಹಿಸಿ, ಲೀಟರ್‌ಗಟ್ಟಲೆ ಹಾಲು ಕರೆಯುವ ಸಾಮರ್ಥ್ಯ ಪ್ರದರ್ಶಿಸಿದರು. ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಜೇತ ರೈತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.

ನವೀನ್ ಕುಮಾರ್ ಟಿ
| Edited By: |

Updated on:Jan 19, 2026 | 9:06 PM

Share
ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ. 

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ. 

1 / 5
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ಹಾಗೂ ಕರುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.  

2 / 5
ರಾಜ್ಯದ ಹಲವು ಜಿಲ್ಲೆಗಳಿಂದ ರೈತರು ಸ್ವಯಂ ಪ್ರೇರಿತವಾಗಿ ತಮ್ಮ ಹಸುಗಳೊಂದಿಗೆ ಸ್ಪರ್ಧೆಗೆ ಆಗಮಿಸಿದ್ದರು. ಜೊತೆಗೆ ರೈತರೆಲ್ಲಾ ಮೈದಾನದಲ್ಲೇ ಹಸುಗಳನ್ನ ಮೇಯಿಸುತ್ತಾ ಕಾಲ ಕಳೆದಿದ್ದು, ಸಂಜೆ ವೇಳೆ ಜಡ್ಜ್​ಗಳ ಮುಂದೆಯೇ ಪ್ರತಿ ಹಸುವಿನಿಂದ ಕರೆದ ಲೀಟರ್ ಗಟ್ಟಲೆ ಹಾಲು ಅಳತೆ ಮಾಡಿದರು. 

ರಾಜ್ಯದ ಹಲವು ಜಿಲ್ಲೆಗಳಿಂದ ರೈತರು ಸ್ವಯಂ ಪ್ರೇರಿತವಾಗಿ ತಮ್ಮ ಹಸುಗಳೊಂದಿಗೆ ಸ್ಪರ್ಧೆಗೆ ಆಗಮಿಸಿದ್ದರು. ಜೊತೆಗೆ ರೈತರೆಲ್ಲಾ ಮೈದಾನದಲ್ಲೇ ಹಸುಗಳನ್ನ ಮೇಯಿಸುತ್ತಾ ಕಾಲ ಕಳೆದಿದ್ದು, ಸಂಜೆ ವೇಳೆ ಜಡ್ಜ್​ಗಳ ಮುಂದೆಯೇ ಪ್ರತಿ ಹಸುವಿನಿಂದ ಕರೆದ ಲೀಟರ್ ಗಟ್ಟಲೆ ಹಾಲು ಅಳತೆ ಮಾಡಿದರು. 

3 / 5
ಹಾಲು ಕರೆಯುವ ಸ್ಪರ್ಧೆಗಾಗಿ ವಿವಿಧ ಮೂಲೆಗಳಿಂದ ಬಂದ ರೈತರಿಗೆ ಉಳಿದುಕೊಳ್ಳಲು ಹಾಗೂ ಹಸುವಿಗೆ ಮೇವಿನ ವ್ಯವಸ್ಥೆ ಮಾಡಿದ್ದು, ನೂರಾರು ಜನರು ವಿವಿಧ ತಳಿಗಳ ಹಸುಗಳನ್ನ ನೋಡಿ ಸಂತಸಪಟ್ಟರು. ರೈತರು ಸ್ಥಳೀಯರ ಮುಂದೆಯೇ ಕರೆದ ಹಾಲನ್ನ ಕ್ಯಾನ್​ಗಳಿಗೆ ಹಾಕಿ ಅಳತೆ ಮಾಡಿದ್ದು, ಒಂದೊಂದು ಹಸು 20 ರಿಂದ 25 ಲೀಟರ್​​ವರೆಗೂ ಹಾಲು ಕರೆಯುವ ಮೂಲಕ ನೋಡುಗರು ಬೆರಗಾದರು.

ಹಾಲು ಕರೆಯುವ ಸ್ಪರ್ಧೆಗಾಗಿ ವಿವಿಧ ಮೂಲೆಗಳಿಂದ ಬಂದ ರೈತರಿಗೆ ಉಳಿದುಕೊಳ್ಳಲು ಹಾಗೂ ಹಸುವಿಗೆ ಮೇವಿನ ವ್ಯವಸ್ಥೆ ಮಾಡಿದ್ದು, ನೂರಾರು ಜನರು ವಿವಿಧ ತಳಿಗಳ ಹಸುಗಳನ್ನ ನೋಡಿ ಸಂತಸಪಟ್ಟರು. ರೈತರು ಸ್ಥಳೀಯರ ಮುಂದೆಯೇ ಕರೆದ ಹಾಲನ್ನ ಕ್ಯಾನ್​ಗಳಿಗೆ ಹಾಕಿ ಅಳತೆ ಮಾಡಿದ್ದು, ಒಂದೊಂದು ಹಸು 20 ರಿಂದ 25 ಲೀಟರ್​​ವರೆಗೂ ಹಾಲು ಕರೆಯುವ ಮೂಲಕ ನೋಡುಗರು ಬೆರಗಾದರು.

4 / 5
ಇನ್ನು ಮೊದಲ ಬಹುಮಾನ ಗೆದ್ದ ಹೆಚ್ಚು ಹಾಲು ಕರೆದ ರೈತರಿಗೆ ಒಂದೂವರೆ ಲಕ್ಷ ರೂ ಹಣ ಹಾಗೂ ಟ್ರೋಫಿ, ಎರಡನೇ ಬಹುಮಾನವಾಗಿ ಒಂದು ಲಕ್ಷ ರೂ ಹಣ ಮತ್ತು ಮೂರನೇ ಬಹುಮಾನವಾಗಿ 75 ಸಾವಿರ ರೂ ಹಣವನ್ನ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ನೀಡುವ ಮೂಲಕ ರೈತರನ್ನ ಪ್ರೋತ್ಸಾಹಿಸಿದರು. ವಿನೂತನ ಸ್ಪರ್ಧೆ ಕಂಡು ಜನರು ನಿಬ್ಬೆರಗಾದರು.

ಇನ್ನು ಮೊದಲ ಬಹುಮಾನ ಗೆದ್ದ ಹೆಚ್ಚು ಹಾಲು ಕರೆದ ರೈತರಿಗೆ ಒಂದೂವರೆ ಲಕ್ಷ ರೂ ಹಣ ಹಾಗೂ ಟ್ರೋಫಿ, ಎರಡನೇ ಬಹುಮಾನವಾಗಿ ಒಂದು ಲಕ್ಷ ರೂ ಹಣ ಮತ್ತು ಮೂರನೇ ಬಹುಮಾನವಾಗಿ 75 ಸಾವಿರ ರೂ ಹಣವನ್ನ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ನೀಡುವ ಮೂಲಕ ರೈತರನ್ನ ಪ್ರೋತ್ಸಾಹಿಸಿದರು. ವಿನೂತನ ಸ್ಪರ್ಧೆ ಕಂಡು ಜನರು ನಿಬ್ಬೆರಗಾದರು.

5 / 5

Published On - 9:01 pm, Mon, 19 January 26

Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us