ದೆಹಲಿ ಸಿಎಂ ಭೇಟಿ ಮಾಡಿದ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡ

Updated on: Oct 07, 2025 | 7:14 PM

ಸೂಪರ್ ಹಿಟ್ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ದೇಶಾದ್ಯಂತ ಜನರು ಮಾತನಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿ, ನಿರ್ದೇಶನ ಮಾಡಿರುವ ರಿಷಬ್ ಶೆಟ್ಟಿ ಅವರಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡವನ್ನು ಭೇಟಿ ಮಾಡಿದ್ದಾರೆ.

1 / 5
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಇಂದು ಮುಖ್ಯಮಂತ್ರಿ ಜನಸೇವಾ ಸದನದಲ್ಲಿ ಕಾಂತಾರ: ಚಾಪ್ಟರ್ 1 ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಅವರ ತಂಡವನ್ನು ಭೇಟಿ ಮಾಡಲಾಯಿತು’ ಎಂದು ಪೋಸ್ಟ ಮಾಡಲಾಗಿದೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಇಂದು ಮುಖ್ಯಮಂತ್ರಿ ಜನಸೇವಾ ಸದನದಲ್ಲಿ ಕಾಂತಾರ: ಚಾಪ್ಟರ್ 1 ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಅವರ ತಂಡವನ್ನು ಭೇಟಿ ಮಾಡಲಾಯಿತು’ ಎಂದು ಪೋಸ್ಟ ಮಾಡಲಾಗಿದೆ.

2 / 5
‘ಕಾಂತಾರ: ಚಾಪ್ಟರ್ 1 ಚಿತ್ರವು ಭಾರತದ ಆಧ್ಯಾತ್ಮಿಕ ಆಳ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸುಂದರವಾಗಿ ಪ್ರತಿಬಿಂಬಿಸುತ್ತದೆ. ನಮ್ಮ ಸಂಪ್ರದಾಯಗಳ ಸಾರವನ್ನು ಜೀವಂತಗೊಳಿಸುತ್ತದೆ’ ಎಂದು ರೇಖಾ ಗುಪ್ತಾ ಅವರು ಹೊಗಳಿದ್ದಾರೆ.

‘ಕಾಂತಾರ: ಚಾಪ್ಟರ್ 1 ಚಿತ್ರವು ಭಾರತದ ಆಧ್ಯಾತ್ಮಿಕ ಆಳ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸುಂದರವಾಗಿ ಪ್ರತಿಬಿಂಬಿಸುತ್ತದೆ. ನಮ್ಮ ಸಂಪ್ರದಾಯಗಳ ಸಾರವನ್ನು ಜೀವಂತಗೊಳಿಸುತ್ತದೆ’ ಎಂದು ರೇಖಾ ಗುಪ್ತಾ ಅವರು ಹೊಗಳಿದ್ದಾರೆ.

3 / 5
‘ಕಾಂತಾರ ರೀತಿಯ ಕೃತಿಗಳು ನಮ್ಮ ಪರಂಪರೆಯ ಚೈತನ್ಯವನ್ನು ಜಾಗತಿಕ ವೇದಿಕೆಗೆ ಹೆಮ್ಮೆಯಿಂದ ಕೊಂಡೊಯ್ಯುತ್ತವೆ’ ಎಂದು ರೇಖಾ ಗುಪ್ತಾ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿನಿಮಾ ತಂಡಕ್ಕೆ ಸಂತಸ ಆಗಿದೆ.

‘ಕಾಂತಾರ ರೀತಿಯ ಕೃತಿಗಳು ನಮ್ಮ ಪರಂಪರೆಯ ಚೈತನ್ಯವನ್ನು ಜಾಗತಿಕ ವೇದಿಕೆಗೆ ಹೆಮ್ಮೆಯಿಂದ ಕೊಂಡೊಯ್ಯುತ್ತವೆ’ ಎಂದು ರೇಖಾ ಗುಪ್ತಾ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿನಿಮಾ ತಂಡಕ್ಕೆ ಸಂತಸ ಆಗಿದೆ.

4 / 5
‘ಈ ಗಮನಾರ್ಹ ಸಿನಿಮೀಯ ಪ್ರಯಾಣದಲ್ಲಿ ಇಡೀ ತಂಡಕ್ಕೆ ಯಶಸ್ಸು ಸಿಗಲಿ’ ಎಂದು ರೇಖಾ ಗುಪ್ತಾ ಅವರು ಹಾರೈಸಿದ್ದಾರೆ. ರಿಷಬ್ ಶೆಟ್ಟಿ ಜೊತೆ ಪ್ರಗತಿ ಶೆಟ್ಟಿ, ರುಕ್ಮಿಣಿ ವಸಂತ್ ಮುಂತಾದವರು ಈ ವೇಳೆ ಹಾಜರಿದ್ದರು.

‘ಈ ಗಮನಾರ್ಹ ಸಿನಿಮೀಯ ಪ್ರಯಾಣದಲ್ಲಿ ಇಡೀ ತಂಡಕ್ಕೆ ಯಶಸ್ಸು ಸಿಗಲಿ’ ಎಂದು ರೇಖಾ ಗುಪ್ತಾ ಅವರು ಹಾರೈಸಿದ್ದಾರೆ. ರಿಷಬ್ ಶೆಟ್ಟಿ ಜೊತೆ ಪ್ರಗತಿ ಶೆಟ್ಟಿ, ರುಕ್ಮಿಣಿ ವಸಂತ್ ಮುಂತಾದವರು ಈ ವೇಳೆ ಹಾಜರಿದ್ದರು.

5 / 5
ಎಲ್ಲ ಕಡೆಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿವೆ. ಕನ್ನಡ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಈಗಾಗಲೇ 273 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ.

ಎಲ್ಲ ಕಡೆಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿವೆ. ಕನ್ನಡ ಸೇರಿದಂತೆ ಒಟ್ಟು 7 ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಈಗಾಗಲೇ 273 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us