ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿಗೆ ದೇವರ ಮೇಲೆ ಅಪಾರ ಭಕ್ತಿ. ‘ಕಾಂತಾರ’ ಸಿನಿಮಾ ಮಾಡಿದ ಬಳಿಕ ದೇವರ ಮೇಲೆ ಇರುವ ಭಕ್ತಿ ಹೆಚ್ಚಾಗಿದೆ.
1 / 5
ರಿಷಬ್ ಶೆಟ್ಟಿ ಅವರು ಆಗಾಗ ಪತ್ನಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡುತ್ತಾ ಇರುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
2 / 5
ಆ ಬಳಿಕ ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಿಷಬ್ ಶೆಟ್ಟಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
3 / 5
ವೀರೇಂದ್ರ ಹೆಗ್ಗಡೆ ಹಾಗೂ ರಿಷಬ್ ಶೆಟ್ಟಿ ಇಬ್ಬರು ಕುಳಿತು ಸ್ವಲ್ಪ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳನ್ನು ರಿಷಬ್ ಹಂಚಿಕೊಂಡಿದ್ದಾರೆ.
4 / 5
‘ಇತ್ತೀಚೆಗೆ ಕುಟುಂಬ ಸಮೇತರಾಗಿ ಧರ್ಮಸ್ಥಳ ಹಾಗು ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನದ ಜೊತೆ ಧರ್ಮಾಧಿಕಾರಿಗಳಿಂದ ಆಶೀರ್ವಾದವನ್ನು ಪಡೆದೆವು’ ಎಂದು ಫೋಟೋಗೆ ರಿಷಬ್ ಕ್ಯಾಪ್ಶನ್ ನೀಡಿದ್ದಾರೆ.