ಒಂದೇ ತಿಂಗಳಲ್ಲಿ ಮಲೆ ಮಹದೇಶ್ವರ ಹುಂಡಿಗೆ ಹದಿದುಬಂತು ಕೋಟಿಗಟ್ಟಲೇ ಹಣದ ಜತೆಗೆ ಚಿನ್ನ, ಬೆಳ್ಳಿ
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ದೇಣಿಗೆ ಹರಿದು ಬಂದಿದೆ. ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.
Updated on:Jul 07, 2023 | 10:02 AM

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ದೇಣಿಗೆ ಹರಿದು ಬಂದಿದೆ. ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.

ಕಳೆದ 36 ದಿನಗಳಲ್ಲಿ ಮಲೆಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ 2.47 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ.

ಹಣ ಮಾತ್ರವಲ್ಲದೇ ಭಕ್ತರು ಮಾದಪ್ಪನಿಗೆ 77 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ ಸಮರ್ಪಿಸಿದ್ದಾರೆ.

ನಗದು ಹಣದ ಪೈಕಿ 12 ಲಕ್ಷ ರೂಪಾಯಿ ನಾಣ್ಯದ ರೂಪದಲ್ಲೇ ಸಂಗ್ರಹವಾಗಿರೋದು ವಿಶೇಷ

ಕಾಣಿಕೆಯಾಗಿ ಬಂದ ಹಣವನ್ನು ಚೀಲದಲ್ಲಿ ಸಂಗ್ಇರಹಿಸಿ ಇಟ್ಟಿರುವುದು.

ಮೇ ತಿಂಗಳಲ್ಲಿ ಅವಧಿಯಲ್ಲಿ ಮಲೆಮಹದೇಶ್ವರನ ಹುಂಡಿಯಲ್ಲಿ 2,53,58,519 ರೂಪಾಯಿ ಕಾಣಿಕೆ ಸಂಗ್ರಹವಾಗಿತ್ತು.

ಕಳೆದ ತಿಂಗಳು 2.53 ಕೋಟಿ ರೂ. ಜೊತೆಗೆ 65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದರು.

ಮಲೆಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ಕಾರ್ಯನಿರತರಾಗಿರುವ ಸಿಬ್ಬಂದಿ

ಮೇ ತಿಂಗಳಲ್ಲಿ 2.53 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದರೆ, ಜೂನ್ ತಿಂಗಳಲ್ಲಿ 2.47 ಕೋಟಿ ರೂ ಹರಿದು ಬಂದಿದೆ.

ಇನ್ನು ಕಳೆದು ತಿಂಗಳು 65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದರು. ಅಲ್ಲೇ 14 ಲಕ್ಷಕ್ಕೂ ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಸಲ್ಲಿಕೆಯಾಗಿತ್ತು.
Published On - 10:00 am, Fri, 7 July 23

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
Read More