ಆರ್ಎಸ್ಎಸ್ ಶತಮಾನೋತ್ಸವದ ಸಂಭ್ರಮ: ಹಲವೆಡೆ ಆಕರ್ಷಕ ಪಥಸಂಚಲನ; ಇಲ್ಲಿವೆ ಫೋಟೋಸ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಮತ್ತು ವಿಜಯದಶಮಿ ಅಂಗವಾಗಿ ಕರ್ನಾಟಕದಾದ್ಯಂತ ಭವ್ಯ ಪಥಸಂಚಲನ ನಡೆಯಿತು. ನೂರು ವರ್ಷ ಪೂರೈಸಿದ ಸಂಘದ ಸಂಭ್ರಮ ಹಿನ್ನೆಲೆ ಬೆಂಗಳೂರಿ ಸೇರಿದಂತೆ ಹಲವು ನಗರಗಳಲ್ಲಿ ಸಾವಿರಾರು ಸ್ವಯಂಸೇವಕರು ಭಾಗಿಯಾಗಿದ್ದರು. ಗಣವೇಷಧಾರಿಗಳ ಆಕರ್ಷಕ ಪಥಸಂಚಲನದ ಫೋಟೋಸ್ ಇಲ್ಲಿವೆ ನೋಡಿ.
Updated on:Oct 12, 2025 | 7:24 PM

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ರಾಜ್ಯದೆಲ್ಲೆಡೆ ಆಕರ್ಷಕ ಪಥಸಂಚಲನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಬೆಂಗಳೂರಿನಲ್ಲಿ ಒಂದೇ ದಿನ ನೂರು ಸ್ಥಳದಲ್ಲಿ ಆರ್ಎಸ್ಎಸ್ ಪಥ ಸಂಚಲನ ಆಯೋಜನೆ ಮಾಡಲಾಗಿತ್ತು. ಅದರಂತೆ ಪದ್ಮನಾಭ ನಗರ, ಜಯ ನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ಸೇರಿ ಬೆಂಗಳೂರಿನ 100 ಸ್ಥಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತರು ಪಥಸಂಚಲನ ಮಾಡಿದರು.

ಇನ್ನು ಪಥಸಂಚಲನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಕೆ.ಗೋಪಾಲಯ್ಯ, ಅಶ್ವಥ್ ನಾರಾಯಣ್ ಸೇರಿ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದರು.

ಚಿತ್ರದುರ್ಗದ ರಂಗಯ್ಯನ ಬಾಗಿಲು ಬಳಿಯಿಂದ ಪಥಸಂಚಲನ ಆರಂಭಗೊಂಡು ನಗರದ ಮುಖ್ಯರಸ್ತೆಗಳಲ್ಲಿ ಪಥಸಂಚಲನ ಸಾಗಿತು. ನೂರಾರು ಸ್ವಯಂಸೇವಕರು ಭಾಗಿಯಾಗಿದ್ದರು.

ಶಿವಮೊಗ್ಗದಲ್ಲಿ ಸಂಘಕ್ಕೆ ಶತಮಾನೋತ್ಸವದ ಜೊತೆಗೆ ವಿಜಯದಶಮಿ ಪ್ರಯುಕ್ತ ಪಥಸಂಚಲನ ನಡೆಯಿತು. ನಗರದ ವಿವಿಧ 38 ಶಾಖೆಗಳಿಂದ ಸ್ವಯಂ ಸೇವಕರು ಭಾಗವಹಿಸಿದ್ದರು.

ಗದಗಿನಲ್ಲೂ ಸಂಘಕ್ಕೆ 100 ವರ್ಷ ಮತ್ತು ವಿಜಯದಶಮಿ ಅಂಗವಾಗಿ ಆರ್ಎಸ್ಎಸ್ ಪಥಸಂಚಲನ ನಡೆಯಿತು. 1500 ಹೆಚ್ಚು ಗಣವೇಷಧಾರಿಗಳು ಭಾಗಿಯಾಗಿದ್ದರು. ಈ ವೇಳೆ ಆರ್ಎಸ್ಎಸ್ ವೇಷಭೂಷಣ ತೊಟ್ಟು ಪುಟಾಣಿಗಳು ಗಮನ ಸೆಳೆದರು.

ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಬಾಲಕ ಗಣವೇಷಧಾರಿಗಳ ಪಥಸಂಚಲನ ನಡೆಯಿತು. ಇಂಜಿನಿಯರಿಂಗ್ ಕಾಲೇಜು ವೃತ್ತದಿಂದ ಆರಂಭಗೊಂಡ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಧಾರವಾಡದಲ್ಲಿ ನಡೆದ ಪಥಸಂಚಲನದಲ್ಲಿ 6 ಸಾವಿರಕ್ಕೂ ಹೆಚ್ಚು ಗಣವೇಷಧಾರಿಗಳು ಭಾಗಿಯಾಗಿದ್ದರು.

ಆರ್ಎಸ್ಎಸ್ ಪಥಸಂಚಲನ ಹಿನ್ನೆಲೆ ಮಾರ್ಗದುದ್ದಕ್ಕೂ ಬಣ್ಣಬಣ್ಣದ ರಂಗೋಲಿಯಿಂದ ಅಲಂಕಾರ ಮಾಡಲಾಗಿತ್ತು. ಪುಷ್ಪವೃಷ್ಠಿ ಮಾಡಿ ಭವ್ಯ ಸ್ವಾಗತ ಕೋರಿದರು.

ಇನ್ನು ಈ ವೇಳೆ ಪಥಸಂಚಲನಕ್ಕೆ ಎಲ್ಲೆಡೆ ಭಾರೀ ಪೊಲೀಸ್ ಬಂದೋ ಬಸ್ತ್ಗೆ ವ್ಯವಸ್ಥೆ ಮಾಡಲಾಗಿತ್ತು.
Published On - 7:24 pm, Sun, 12 October 25




