AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಕ್ಷಿಪಣಿ ದಾಳಿ ನಡೆಸಿದ ರಷ್ಯಾ ಭಯೋತ್ಪಾದಕ ದೇಶ; ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಖಂಡನೆ

ಉಕ್ರೇನ್ ಸೋಮವಾರ ನಡೆದ ವಿಶ್ವಸಂಸ್ಥೆಯ ತುರ್ತು ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿದೆ.

TV9 Web
| Edited By: |

Updated on: Oct 11, 2022 | 3:28 PM

Share
ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸುವ ಮೂಲಕ ಮತ್ತೆ ಸಾಕಷ್ಟು ಜೀವಗಳನ್ನು ಬಲಿ ಪಡೆದಿದೆ.

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸುವ ಮೂಲಕ ಮತ್ತೆ ಸಾಕಷ್ಟು ಜೀವಗಳನ್ನು ಬಲಿ ಪಡೆದಿದೆ.

1 / 11
ಕ್ರೈಮಿಯಾವನ್ನು ಸಂಪರ್ಕಿಸುವ ಸೇತುವೆಯ ಮೇಲೆ ನಡೆದ ದಾಳಿಯ ಬಳಿಕ ರಷ್ಯಾ ಉಕ್ರೇನ್ ಮೇಲೆ ಇದುವರೆಗಿನ ಅತ್ಯಂತ ಭೀಕರ ದಾಳಿಯನ್ನು ನಡೆಸಿದೆ.

ಕ್ರೈಮಿಯಾವನ್ನು ಸಂಪರ್ಕಿಸುವ ಸೇತುವೆಯ ಮೇಲೆ ನಡೆದ ದಾಳಿಯ ಬಳಿಕ ರಷ್ಯಾ ಉಕ್ರೇನ್ ಮೇಲೆ ಇದುವರೆಗಿನ ಅತ್ಯಂತ ಭೀಕರ ದಾಳಿಯನ್ನು ನಡೆಸಿದೆ.

2 / 11
ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾವನ್ನು ರಷ್ಯಾ ಸಂಪರ್ಕಿಸುವ ಸೇತುವೆಯನ್ನು ಉಕ್ರೇನ್ ಸ್ಫೋಟಿಸಿತ್ತು.

ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾವನ್ನು ರಷ್ಯಾ ಸಂಪರ್ಕಿಸುವ ಸೇತುವೆಯನ್ನು ಉಕ್ರೇನ್ ಸ್ಫೋಟಿಸಿತ್ತು.

3 / 11
. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಆ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಆ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

4 / 11
ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

5 / 11
ಉಕ್ರೇನ್ ರಾಜಧಾನಿ ಕೈವ್ ಸೇರಿದಂತೆ ಇಡೀ ದೇಶದ ಹಲವು ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ರಷ್ಯಾ ಕನಿಷ್ಠ 75 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಉಕ್ರೇನ್ ಹೇಳಿದೆ.

ಉಕ್ರೇನ್ ರಾಜಧಾನಿ ಕೈವ್ ಸೇರಿದಂತೆ ಇಡೀ ದೇಶದ ಹಲವು ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ರಷ್ಯಾ ಕನಿಷ್ಠ 75 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಉಕ್ರೇನ್ ಹೇಳಿದೆ.

6 / 11
ಈ ಮೂಲಕ 2 ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ರಾಕೆಟ್ ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

ಈ ಮೂಲಕ 2 ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ರಾಕೆಟ್ ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

7 / 11
ರಷ್ಯಾದ ದಾಳಿಗಳು ಉಕ್ರೇನ್​ನ ಅನೇಕ ಸ್ಥಳಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿವೆ. ಕೈವ್ ಹೊರತುಪಡಿಸಿ, ಖ್ಮೆಲ್ನಿಟ್ಸ್ಕಿ, ಝೈಟೊಮಿರ್ ಮತ್ತು ಎಲ್ವಿವ್ ಕೂಡ ರಷ್ಯಾದ ದಾಳಿಗೆ ಒಳಗಾಗಿವೆ. ಸೆಂಟ್ರಲ್ ಕೈವ್ ನಲ್ಲಿ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ ಎಂದು ಕೈವ್ ಮೇಯರ್ ಹೇಳಿದ್ದಾರೆ.

ರಷ್ಯಾದ ದಾಳಿಗಳು ಉಕ್ರೇನ್​ನ ಅನೇಕ ಸ್ಥಳಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿವೆ.

8 / 11
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯ ಕಚೇರಿ ಬಳಿಯೂ ವೈಮಾನಿಕ ದಾಳಿ ನಡೆದಿದೆ. ಈ ದಾಳಿಗಳನ್ನು ಭಯೋತ್ಪಾದಕರ ಸಂಚು ಎಂದು ಅವರು ಕರೆದಿದ್ದಾರೆ.

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯ ಕಚೇರಿ ಬಳಿಯೂ ವೈಮಾನಿಕ ದಾಳಿ ನಡೆದಿದೆ. ಈ ದಾಳಿಗಳನ್ನು ಭಯೋತ್ಪಾದಕರ ಸಂಚು ಎಂದು ಅವರು ಕರೆದಿದ್ದಾರೆ.

9 / 11
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ರಷ್ಯಾ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿದೆ, ಆದ್ದರಿಂದ ಮನೆಯೊಳಗೆ ಇರಿ ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ರಷ್ಯಾ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿದೆ, ಆದ್ದರಿಂದ ಮನೆಯೊಳಗೆ ಇರಿ ಎಂದು ಅವರು ಹೇಳಿದ್ದಾರೆ.

10 / 11
ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾವನ್ನು ಪ್ರತ್ಯೇಕವಾಗಿಡಬೇಕೆಂದು ಹೇಳುತ್ತಿರುವಾಗ, ಉಕ್ರೇನ್ ಸೋಮವಾರ ನಡೆದ ತುರ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿದೆ. ರಷ್ಯಾ ಮತ್ತೆ ಭಯೋತ್ಪಾದಕ ದೇಶ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಅದನ್ನು ಪ್ರಬಲವಾದ ರೀತಿಯಲ್ಲಿ ತಡೆಯಬೇಕು ಎಂದು ವಿಶ್ವಸಂಸ್ಥೆಗೆ ಉಕ್ರೇನ್‌ನ ರಾಯಭಾರಿ ಸರ್ಗಿ ಕಿಸ್ಲಿತ್ಸ್ಯ ಒತ್ತಾಯಿಸಿದ್ದಾರೆ.

ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾವನ್ನು ಪ್ರತ್ಯೇಕವಾಗಿಡಬೇಕೆಂದು ಹೇಳುತ್ತಿರುವಾಗ, ಉಕ್ರೇನ್ ಸೋಮವಾರ ನಡೆದ ತುರ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿದೆ. ರಷ್ಯಾ ಮತ್ತೆ ಭಯೋತ್ಪಾದಕ ದೇಶ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಅದನ್ನು ಪ್ರಬಲವಾದ ರೀತಿಯಲ್ಲಿ ತಡೆಯಬೇಕು ಎಂದು ವಿಶ್ವಸಂಸ್ಥೆಗೆ ಉಕ್ರೇನ್‌ನ ರಾಯಭಾರಿ ಸರ್ಗಿ ಕಿಸ್ಲಿತ್ಸ್ಯ ಒತ್ತಾಯಿಸಿದ್ದಾರೆ.

11 / 11
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​