AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಕ್ಷಿಪಣಿ ದಾಳಿ ನಡೆಸಿದ ರಷ್ಯಾ ಭಯೋತ್ಪಾದಕ ದೇಶ; ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಖಂಡನೆ

ಉಕ್ರೇನ್ ಸೋಮವಾರ ನಡೆದ ವಿಶ್ವಸಂಸ್ಥೆಯ ತುರ್ತು ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿದೆ.

TV9 Web
| Edited By: |

Updated on: Oct 11, 2022 | 3:28 PM

Share
ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸುವ ಮೂಲಕ ಮತ್ತೆ ಸಾಕಷ್ಟು ಜೀವಗಳನ್ನು ಬಲಿ ಪಡೆದಿದೆ.

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸುವ ಮೂಲಕ ಮತ್ತೆ ಸಾಕಷ್ಟು ಜೀವಗಳನ್ನು ಬಲಿ ಪಡೆದಿದೆ.

1 / 11
ಕ್ರೈಮಿಯಾವನ್ನು ಸಂಪರ್ಕಿಸುವ ಸೇತುವೆಯ ಮೇಲೆ ನಡೆದ ದಾಳಿಯ ಬಳಿಕ ರಷ್ಯಾ ಉಕ್ರೇನ್ ಮೇಲೆ ಇದುವರೆಗಿನ ಅತ್ಯಂತ ಭೀಕರ ದಾಳಿಯನ್ನು ನಡೆಸಿದೆ.

ಕ್ರೈಮಿಯಾವನ್ನು ಸಂಪರ್ಕಿಸುವ ಸೇತುವೆಯ ಮೇಲೆ ನಡೆದ ದಾಳಿಯ ಬಳಿಕ ರಷ್ಯಾ ಉಕ್ರೇನ್ ಮೇಲೆ ಇದುವರೆಗಿನ ಅತ್ಯಂತ ಭೀಕರ ದಾಳಿಯನ್ನು ನಡೆಸಿದೆ.

2 / 11
ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾವನ್ನು ರಷ್ಯಾ ಸಂಪರ್ಕಿಸುವ ಸೇತುವೆಯನ್ನು ಉಕ್ರೇನ್ ಸ್ಫೋಟಿಸಿತ್ತು.

ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾವನ್ನು ರಷ್ಯಾ ಸಂಪರ್ಕಿಸುವ ಸೇತುವೆಯನ್ನು ಉಕ್ರೇನ್ ಸ್ಫೋಟಿಸಿತ್ತು.

3 / 11
. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಆ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಆ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

4 / 11
ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

5 / 11
ಉಕ್ರೇನ್ ರಾಜಧಾನಿ ಕೈವ್ ಸೇರಿದಂತೆ ಇಡೀ ದೇಶದ ಹಲವು ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ರಷ್ಯಾ ಕನಿಷ್ಠ 75 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಉಕ್ರೇನ್ ಹೇಳಿದೆ.

ಉಕ್ರೇನ್ ರಾಜಧಾನಿ ಕೈವ್ ಸೇರಿದಂತೆ ಇಡೀ ದೇಶದ ಹಲವು ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ರಷ್ಯಾ ಕನಿಷ್ಠ 75 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಉಕ್ರೇನ್ ಹೇಳಿದೆ.

6 / 11
ಈ ಮೂಲಕ 2 ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ರಾಕೆಟ್ ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

ಈ ಮೂಲಕ 2 ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ರಾಕೆಟ್ ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

7 / 11
ರಷ್ಯಾದ ದಾಳಿಗಳು ಉಕ್ರೇನ್​ನ ಅನೇಕ ಸ್ಥಳಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿವೆ. ಕೈವ್ ಹೊರತುಪಡಿಸಿ, ಖ್ಮೆಲ್ನಿಟ್ಸ್ಕಿ, ಝೈಟೊಮಿರ್ ಮತ್ತು ಎಲ್ವಿವ್ ಕೂಡ ರಷ್ಯಾದ ದಾಳಿಗೆ ಒಳಗಾಗಿವೆ. ಸೆಂಟ್ರಲ್ ಕೈವ್ ನಲ್ಲಿ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ ಎಂದು ಕೈವ್ ಮೇಯರ್ ಹೇಳಿದ್ದಾರೆ.

ರಷ್ಯಾದ ದಾಳಿಗಳು ಉಕ್ರೇನ್​ನ ಅನೇಕ ಸ್ಥಳಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿವೆ.

8 / 11
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯ ಕಚೇರಿ ಬಳಿಯೂ ವೈಮಾನಿಕ ದಾಳಿ ನಡೆದಿದೆ. ಈ ದಾಳಿಗಳನ್ನು ಭಯೋತ್ಪಾದಕರ ಸಂಚು ಎಂದು ಅವರು ಕರೆದಿದ್ದಾರೆ.

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯ ಕಚೇರಿ ಬಳಿಯೂ ವೈಮಾನಿಕ ದಾಳಿ ನಡೆದಿದೆ. ಈ ದಾಳಿಗಳನ್ನು ಭಯೋತ್ಪಾದಕರ ಸಂಚು ಎಂದು ಅವರು ಕರೆದಿದ್ದಾರೆ.

9 / 11
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ರಷ್ಯಾ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿದೆ, ಆದ್ದರಿಂದ ಮನೆಯೊಳಗೆ ಇರಿ ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ರಷ್ಯಾ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಿದೆ, ಆದ್ದರಿಂದ ಮನೆಯೊಳಗೆ ಇರಿ ಎಂದು ಅವರು ಹೇಳಿದ್ದಾರೆ.

10 / 11
ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾವನ್ನು ಪ್ರತ್ಯೇಕವಾಗಿಡಬೇಕೆಂದು ಹೇಳುತ್ತಿರುವಾಗ, ಉಕ್ರೇನ್ ಸೋಮವಾರ ನಡೆದ ತುರ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿದೆ. ರಷ್ಯಾ ಮತ್ತೆ ಭಯೋತ್ಪಾದಕ ದೇಶ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಅದನ್ನು ಪ್ರಬಲವಾದ ರೀತಿಯಲ್ಲಿ ತಡೆಯಬೇಕು ಎಂದು ವಿಶ್ವಸಂಸ್ಥೆಗೆ ಉಕ್ರೇನ್‌ನ ರಾಯಭಾರಿ ಸರ್ಗಿ ಕಿಸ್ಲಿತ್ಸ್ಯ ಒತ್ತಾಯಿಸಿದ್ದಾರೆ.

ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾವನ್ನು ಪ್ರತ್ಯೇಕವಾಗಿಡಬೇಕೆಂದು ಹೇಳುತ್ತಿರುವಾಗ, ಉಕ್ರೇನ್ ಸೋಮವಾರ ನಡೆದ ತುರ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ರಷ್ಯಾವನ್ನು "ಭಯೋತ್ಪಾದಕ ದೇಶ" ಎಂದು ಖಂಡಿಸಿದೆ. ರಷ್ಯಾ ಮತ್ತೆ ಭಯೋತ್ಪಾದಕ ದೇಶ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಅದನ್ನು ಪ್ರಬಲವಾದ ರೀತಿಯಲ್ಲಿ ತಡೆಯಬೇಕು ಎಂದು ವಿಶ್ವಸಂಸ್ಥೆಗೆ ಉಕ್ರೇನ್‌ನ ರಾಯಭಾರಿ ಸರ್ಗಿ ಕಿಸ್ಲಿತ್ಸ್ಯ ಒತ್ತಾಯಿಸಿದ್ದಾರೆ.

11 / 11
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!