
ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್ ಬ್ಯಾಕ್ಗ್ರೌಂಡ್ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.