- Kannada News Photo gallery Sculptor Arun Yogiraj carved Ekashila Hanuman statue Installation in front of Sri Rama Temple at Chunchanakatte mysuru
ಏಕಾಶಿಲಾ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ
ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅಂದೇ ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಇದೀಗ, ಅರುಣ್ ಯೋಗಿರಾಜ್ ಅವರಏ ಕೆತ್ತನೆ ಮಾಡಿದ ಏಕಶಿಲಾ ಹನುಮಂತನ ವಿಗ್ರಹ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲಿ ಗೊತ್ತಾ?
Updated on: Jan 19, 2024 | 2:59 PM

ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಚಳಕದಿಂದಲೇ ಮೂಡಿ ಬಂದ ಪ್ರಭು ಶ್ರೀರಾಮನ ಭಕ್ತ ಹನುಮಂತನ ಮೂರ್ತಿ ಮೈಸೂರಿನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ಇರುವ ಶ್ರೀರಾಮ ದೇವಾಲಯದ ಮುಂದೆ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

70 ಟನ್ ತೂಕದ ಏಕಾಶಿಲೆಯಲ್ಲಿ ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡಲಾಗಿದೆ. ಇದನ್ನು ಒಂದು ವರ್ಷದ ಹಿಂದೆ ಕೆತ್ತನೆ ಮಾಡಿಗಿತ್ತು.

ಹೊಯ್ಸಳ ಶೈಲಿಯ ಚಿನ್ನಾಭರಣ, ಎದೆಯ ಮಧ್ಯಭಾಗದಲ್ಲಿ ಶ್ರೀ ರಾಮನ ಪದಕ ಅಲಂಕಾರದಲ್ಲಿ ಕೆತ್ತಲಾಗಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಏಕಶಿಲಾ ಹನುಮಂತನ ಪ್ರತಿಮೆ

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
Read More



