Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಟ್ಟ ಕಾನನದ ನಡುವೆ ಮೈದುಂಬಿ ಹರಿಯುತಿದೆ ಅರ್ಬಿ ಜಲಪಾತ; ಜಲಧಾರೆ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

ಮಳೆಗಾಲ ಬಂತೆಂದರೆ, ಸಾಮಾನ್ಯ ನೀರಿನ ಹರಿವಿಗೂ ಕೂಡ ಮೈದುಂಬಿ ಹರಿಯುವ ಜಲಪಾತದ ರೂಪ ಬರುತ್ತದೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಇಂತಹ ಸಣ್ಣಪುಟ್ಟ ಕಿರು ಜಲಪಾತಗಳು ಅನೇಕ ಇವೆ. ಅಪಾಯವಿಲ್ಲದೆ ಭೂಮಿಯ ಮೇಲೆ ಹರಿಯುವ ಈ ಜಲಪಾತಗಳಲ್ಲಿ ಮೋಜು ಮಸ್ತಿ ಮಾಡುವುದೇ ಒಂದು ಅದ್ಭುತ ಅನುಭವ. ಮಳೆ ಬಂದಾಗ ಮಾತ್ರ ಮೂಡಿಕೊಳ್ಳುವ ಮಣಿಪಾಲದ ಅರ್ಬಿ ಜಲಪಾತ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಈ ಜಲಪಾತ ನೋಡಲು ಭೇಟಿ ಕೊಡುತ್ತಿದ್ದಾರೆ.

TV9 Web
| Updated By: ಆಯೇಷಾ ಬಾನು

Updated on:Jul 17, 2022 | 4:18 PM

ದಟ್ಟ ಕಾನನದ ನಡುವೆ ಇಳಿಜಾರಿನಲ್ಲಿ ಮೈದುಂಬಿ ಹರಿಯುತ್ತಿರುವ ಅರ್ಬಿ ಜಲಪಾತವನ್ನು ನೋಡುವುದೇ ಕಣ್ಣುಗಳಿಗೆ ಸೊಗಸು ಅದರಲ್ಲೂ ತಳುಕುತ್ತಾ ಬಳುಕುತ್ತಾ ಕಲ್ಲಿನಿಂದ ಕಲ್ಲಿಗೆ ಹಂತ ಹಂತವಾಗಿ ಹರಿಯುವಾಗ ಕ್ಷೀರಧಾರೆಯೇ ಹರಿದು ಬಂದಂತಹ ಅನುಭವ. ಹಲವಾರು ಕವಲುಗಳಾಗಿ ಶುಭ್ರ ನೀರಿನಿಂದ ಹರಿಯುವ ಅರ್ಬಿ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ.

ದಟ್ಟ ಕಾನನದ ನಡುವೆ ಇಳಿಜಾರಿನಲ್ಲಿ ಮೈದುಂಬಿ ಹರಿಯುತ್ತಿರುವ ಅರ್ಬಿ ಜಲಪಾತವನ್ನು ನೋಡುವುದೇ ಕಣ್ಣುಗಳಿಗೆ ಸೊಗಸು ಅದರಲ್ಲೂ ತಳುಕುತ್ತಾ ಬಳುಕುತ್ತಾ ಕಲ್ಲಿನಿಂದ ಕಲ್ಲಿಗೆ ಹಂತ ಹಂತವಾಗಿ ಹರಿಯುವಾಗ ಕ್ಷೀರಧಾರೆಯೇ ಹರಿದು ಬಂದಂತಹ ಅನುಭವ. ಹಲವಾರು ಕವಲುಗಳಾಗಿ ಶುಭ್ರ ನೀರಿನಿಂದ ಹರಿಯುವ ಅರ್ಬಿ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ.

1 / 6
ಸತತ ಮಳೆ ಹಿನ್ನಲೆಯಲ್ಲಿ ಜಲಪಾತ ಮೈದುಂಬಿ ಹರಿಯುತ್ತಿದೆ. ಸಣ್ಣ ತೊರೆಗಳಿಂದ ಸೃಷ್ಠಿಯಾಗಿರುವ ಈ ಜಲಪಾತವು ಅಪಾಯಕಾರಿಯಲ್ಲದಿದ್ದರೂ ಜಾರುವ ಕಲ್ಲುಗಳ ಮೇಲೆ ನಡೆದಾಡುವಾಗ ಜಾಗ್ರತೆ ವಹಿಸುವುದು ಒಳಿತು.

ಸತತ ಮಳೆ ಹಿನ್ನಲೆಯಲ್ಲಿ ಜಲಪಾತ ಮೈದುಂಬಿ ಹರಿಯುತ್ತಿದೆ. ಸಣ್ಣ ತೊರೆಗಳಿಂದ ಸೃಷ್ಠಿಯಾಗಿರುವ ಈ ಜಲಪಾತವು ಅಪಾಯಕಾರಿಯಲ್ಲದಿದ್ದರೂ ಜಾರುವ ಕಲ್ಲುಗಳ ಮೇಲೆ ನಡೆದಾಡುವಾಗ ಜಾಗ್ರತೆ ವಹಿಸುವುದು ಒಳಿತು.

2 / 6
ಅರ್ಬಿ ಜಲಪಾತ ಇರುವುದು ಉಡುಪಿ ಜಿಲ್ಲೆಯ 80ನೇ ಬಡಗಬೆಟ್ಟು ಗ್ರಾಮದ ಅರ್ಬಿ ಕೋಡಿ ಎಂಬಲ್ಲಿ ಮಣಿಪಾಲದಿಂದ ಅಲೆವೂರು ಮಾರ್ಗವಾಗಿ 3 ಕಿಮೀ ಸಾಗಿದರೆ ದಶರಥ ಎಂಬ ಊರು ಸಿಗುತ್ತದೆ. ಅಲ್ಲಿಂದ ಪೂರ್ವಾಭಿಮುಖವಾಗಿ ವೈಷ್ಣವಿ ದುರ್ಗಾ ದೇವಸ್ಥಾನದ ಮಾರ್ಗವಾಗಿ ಒಂದು ಕಿಲೋ ಮೀಟರ್ ಸಾಗಿದರೆ ದೇವಸ್ಥಾನದ ಪಕ್ಕದಲ್ಲೇ ಅರ್ಬಿ ಜಲಪಾತ ನಮ್ಮನ್ನು ಕೈಬೀಸಿ ಕರೆಯುತ್ತದೆ.

ಅರ್ಬಿ ಜಲಪಾತ ಇರುವುದು ಉಡುಪಿ ಜಿಲ್ಲೆಯ 80ನೇ ಬಡಗಬೆಟ್ಟು ಗ್ರಾಮದ ಅರ್ಬಿ ಕೋಡಿ ಎಂಬಲ್ಲಿ ಮಣಿಪಾಲದಿಂದ ಅಲೆವೂರು ಮಾರ್ಗವಾಗಿ 3 ಕಿಮೀ ಸಾಗಿದರೆ ದಶರಥ ಎಂಬ ಊರು ಸಿಗುತ್ತದೆ. ಅಲ್ಲಿಂದ ಪೂರ್ವಾಭಿಮುಖವಾಗಿ ವೈಷ್ಣವಿ ದುರ್ಗಾ ದೇವಸ್ಥಾನದ ಮಾರ್ಗವಾಗಿ ಒಂದು ಕಿಲೋ ಮೀಟರ್ ಸಾಗಿದರೆ ದೇವಸ್ಥಾನದ ಪಕ್ಕದಲ್ಲೇ ಅರ್ಬಿ ಜಲಪಾತ ನಮ್ಮನ್ನು ಕೈಬೀಸಿ ಕರೆಯುತ್ತದೆ.

3 / 6
ಮಣಿಪಾಲ ಮಹಾನಗರದಲ್ಲಿ ಜನಸಂಚಾರದಿಂದ ದೂರವಾಗಿ ಪ್ರಕೃತಿಯ ಮಡಿಲಲ್ಲಿ ಕೆಲಕಾಲ ಕಳೆಯುವುದಕ್ಕೆ ಈ ಜಲಪಾತ ಯೋಗ್ಯ ಸ್ಥಳ. ಸದಾ ಕೆಲಸದ ಜಂಜಾಟದಿಂದ ಕೂಡಿರುವ ಮನಸ್ಸುಗಳಿಗೆ ನಿಸರ್ಗದ ನಡುವಿರುವ ಜಲಧಾರೆ ಮನಸ್ಸಿಗೆ ಮುದ ನೀಡುವುದರಲ್ಲಿ ಎರಡು ಮಾತಿಲ್ಲ.

ಮಣಿಪಾಲ ಮಹಾನಗರದಲ್ಲಿ ಜನಸಂಚಾರದಿಂದ ದೂರವಾಗಿ ಪ್ರಕೃತಿಯ ಮಡಿಲಲ್ಲಿ ಕೆಲಕಾಲ ಕಳೆಯುವುದಕ್ಕೆ ಈ ಜಲಪಾತ ಯೋಗ್ಯ ಸ್ಥಳ. ಸದಾ ಕೆಲಸದ ಜಂಜಾಟದಿಂದ ಕೂಡಿರುವ ಮನಸ್ಸುಗಳಿಗೆ ನಿಸರ್ಗದ ನಡುವಿರುವ ಜಲಧಾರೆ ಮನಸ್ಸಿಗೆ ಮುದ ನೀಡುವುದರಲ್ಲಿ ಎರಡು ಮಾತಿಲ್ಲ.

4 / 6
ಮಳೆ ಬಂದಾಗ ಮಾತ್ರ ಮೂಡಿಕೊಳ್ಳುವ ಮಣಿಪಾಲದ ಅರ್ಬಿ ಜಲಪಾತ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಈ ಜಲಪಾತ ನೋಡಲು ಭೇಟಿ ಕೊಡುತ್ತಿದ್ದಾರೆ.

ಮಳೆ ಬಂದಾಗ ಮಾತ್ರ ಮೂಡಿಕೊಳ್ಳುವ ಮಣಿಪಾಲದ ಅರ್ಬಿ ಜಲಪಾತ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಈ ಜಲಪಾತ ನೋಡಲು ಭೇಟಿ ಕೊಡುತ್ತಿದ್ದಾರೆ.

5 / 6
ಕಲ್ಲಿನಿಂದ ಕಲ್ಲಿಗೆ ಹಂತ ಹಂತವಾಗಿ ನೀರು ಹರಿಯುವಾಗ ಕ್ಷೀರಧಾರೆಯೇ ಹರಿದು ಬಂದಂತಹ ಅನುಭವವಾಗುತ್ತದೆ.

ಕಲ್ಲಿನಿಂದ ಕಲ್ಲಿಗೆ ಹಂತ ಹಂತವಾಗಿ ನೀರು ಹರಿಯುವಾಗ ಕ್ಷೀರಧಾರೆಯೇ ಹರಿದು ಬಂದಂತಹ ಅನುಭವವಾಗುತ್ತದೆ.

6 / 6

Published On - 4:14 pm, Sun, 17 July 22

Follow us
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ