AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರಾಬಾದ್​ಗೆ ಏರ್​ಪೋರ್ಟ್ ಮಾದರಿಯ ಅತ್ಯಾಧುನಿಕ ರೈಲು ನಿಲ್ದಾಣ; ಶನಿವಾರ ಪ್ರಧಾನಿ ಮೋದಿ ಶಂಕುಸ್ಥಾಪನೆ

ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣವನ್ನು 720 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಏರ್​​ಪೋರ್ಟ್ ಮಾದರಿಯ ಭವ್ಯ ನಿಲ್ದಾಣ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಏಪ್ರಿಲ್ 8) ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ರೈಲು ನಿಲ್ದಾಣದ ಮಾದರಿಯ ಚಿತ್ರಗಳು ಇಲ್ಲಿವೆ.

ಗಣಪತಿ ಶರ್ಮಾ
|

Updated on: Apr 06, 2023 | 7:17 PM

Share
Secunderabad railway station to get airport like facelift PM Narendra Modi will lay the foundation stone on April 8

720 ಕೋಟಿ ರೂ. ವೆಚ್ಚದಲ್ಲಿ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ವಿಶ್ವ ದರ್ಜೆಯ ಸೌಕರ್ಯಗಳು ಮತ್ತು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಐಕಾನಿಕ್ ಕಟ್ಟಡದೊಂದಿಗೆ ಬೃಹತ್ ಬದಲಾವಣೆಯೊಂದಿಗೆ ನೂತನ ರೈಲು ನಿಲ್ದಾಣ ನಿರ್ಮಾಣವಾಗಲಿದೆ.

1 / 7
Secunderabad railway station to get airport like facelift PM Narendra Modi will lay the foundation stone on April 8

ಏಪ್ರಿಲ್ 8 ರಂದು ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

2 / 7
Secunderabad railway station to get airport like facelift PM Narendra Modi will lay the foundation stone on April 8

ಪ್ರಯಾಣಿಕರ ಅನುಕೂಲಕ್ಕಾಗಿ ಸಾಕಷ್ಟು ಪಾರ್ಕಿಂಗ್ ಪ್ರದೇಶ, ಅನುಕೂಲಕರ ಪಿಕಪ್ ಮತ್ತು ಡ್ರಾಪ್-ಆಫ್ ಪ್ರದೇಶಗಳು ನೂತನ ರೈಲು ನಿಲ್ದಾಣದಲ್ಲಿ ಇರಲಿದ್ದು, ವ್ಯಾಪಾರ ಅವಕಾಶಗಳನ್ನೂ ಹೆಚ್ಚಿಸಲಿದೆ ಎಂದು ಸಚಿವರು ಹೇಳಿದ್ದಾರೆ.

3 / 7
Secunderabad railway station to get airport like facelift PM Narendra Modi will lay the foundation stone on April 8

ಪುನರಾಭಿವೃದ್ಧಿ ಯೋಜನೆಯಡಿ ಅಸ್ತಿತ್ವದಲ್ಲಿರುವ ನಿಲ್ದಾಣದ ಉತ್ತರ ಭಾಗದಲ್ಲಿ ಗ್ರೌಂಡ್+3 ಮಹಡಿಗಳೊಂದಿಗೆ (22,516 ಚದರ ಮೀಟರ್) ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತದೆ ಮತ್ತು ದಕ್ಷಿಣ ಭಾಗದ ಕಟ್ಟಡವನ್ನು ಗ್ರೌಂಡ್+3 ಮಹಡಿಗಳೊಂದಿಗೆ (14,792 ಚದರ ಮೀಟರ್) ವಿಸ್ತರಣೆ ಮಾಡಲಾಗುತ್ತದೆ.

4 / 7
Secunderabad railway station to get airport like facelift PM Narendra Modi will lay the foundation stone on April 8

108 ಮೀಟರ್ ಅಗಲದ ಎರಡು ಅಂತಸ್ತಿನ ಸ್ಕೈ ಕಾನ್ಕೋರ್ಸ್ ಕೂಡ ನಿಲ್ದಾಣದಲ್ಲಿ ಇರಲಿವೆ. ಮೊದಲ ಅಂತಸ್ತಿನಲ್ಲಿ ಪ್ರಯಾಣಿಕರಿಗೆ ಸೇವೆ ಮತ್ತು ಎರಡನೇ ಹಂತವು ಮೇಲ್ಛಾವಣಿಯ ಪ್ಲಾಜಾವಾಗಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ.

5 / 7
Secunderabad railway station to get airport like facelift PM Narendra Modi will lay the foundation stone on April 8

ರೈಲು ನಿಲ್ದಾಣದ ಉತ್ತರ ಭಾಗದಲ್ಲಿ ಐದು ಹಂತದ ಪಾರ್ಕಿಂಗ್ ಮತ್ತು ದಕ್ಷಿಣ ಭಾಗದಲ್ಲಿ ಪ್ರತ್ಯೇಕ ಅಂಡರ್​ಗ್ರೌಂಡ್ ಪಾರ್ಕಿಂಗ್‌ ವ್ಯವಸ್ಥೆ ದೊರೆಯಲಿದೆ.

6 / 7
Secunderabad railway station to get airport like facelift PM Narendra Modi will lay the foundation stone on April 8

ಅಸ್ತಿತ್ವದಲ್ಲಿರುವ ಪ್ಲಾಟ್​ಫಾರ್ಮ್​ಗಳನ್ನು ಹೊಸ ನಿಲ್ದಾಣದ ಆಧುನಿಕತೆಗೆ ತಕ್ಕುದಾಗಿ ನವೀಕರಿಸಲಾಗುತ್ತದೆ. 5000 ಕೆವಿಪಿ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವನ್ನೂ ನಿಲ್ದಾಣ ಹೊಂದಿರಲಿದೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ