AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರಾಬಾದ್​ಗೆ ಏರ್​ಪೋರ್ಟ್ ಮಾದರಿಯ ಅತ್ಯಾಧುನಿಕ ರೈಲು ನಿಲ್ದಾಣ; ಶನಿವಾರ ಪ್ರಧಾನಿ ಮೋದಿ ಶಂಕುಸ್ಥಾಪನೆ

ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣವನ್ನು 720 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಏರ್​​ಪೋರ್ಟ್ ಮಾದರಿಯ ಭವ್ಯ ನಿಲ್ದಾಣ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಏಪ್ರಿಲ್ 8) ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ರೈಲು ನಿಲ್ದಾಣದ ಮಾದರಿಯ ಚಿತ್ರಗಳು ಇಲ್ಲಿವೆ.

Ganapathi Sharma
|

Updated on: Apr 06, 2023 | 7:17 PM

Secunderabad railway station to get airport like facelift PM Narendra Modi will lay the foundation stone on April 8

720 ಕೋಟಿ ರೂ. ವೆಚ್ಚದಲ್ಲಿ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ವಿಶ್ವ ದರ್ಜೆಯ ಸೌಕರ್ಯಗಳು ಮತ್ತು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಐಕಾನಿಕ್ ಕಟ್ಟಡದೊಂದಿಗೆ ಬೃಹತ್ ಬದಲಾವಣೆಯೊಂದಿಗೆ ನೂತನ ರೈಲು ನಿಲ್ದಾಣ ನಿರ್ಮಾಣವಾಗಲಿದೆ.

1 / 7
Secunderabad railway station to get airport like facelift PM Narendra Modi will lay the foundation stone on April 8

ಏಪ್ರಿಲ್ 8 ರಂದು ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

2 / 7
Secunderabad railway station to get airport like facelift PM Narendra Modi will lay the foundation stone on April 8

ಪ್ರಯಾಣಿಕರ ಅನುಕೂಲಕ್ಕಾಗಿ ಸಾಕಷ್ಟು ಪಾರ್ಕಿಂಗ್ ಪ್ರದೇಶ, ಅನುಕೂಲಕರ ಪಿಕಪ್ ಮತ್ತು ಡ್ರಾಪ್-ಆಫ್ ಪ್ರದೇಶಗಳು ನೂತನ ರೈಲು ನಿಲ್ದಾಣದಲ್ಲಿ ಇರಲಿದ್ದು, ವ್ಯಾಪಾರ ಅವಕಾಶಗಳನ್ನೂ ಹೆಚ್ಚಿಸಲಿದೆ ಎಂದು ಸಚಿವರು ಹೇಳಿದ್ದಾರೆ.

3 / 7
Secunderabad railway station to get airport like facelift PM Narendra Modi will lay the foundation stone on April 8

ಪುನರಾಭಿವೃದ್ಧಿ ಯೋಜನೆಯಡಿ ಅಸ್ತಿತ್ವದಲ್ಲಿರುವ ನಿಲ್ದಾಣದ ಉತ್ತರ ಭಾಗದಲ್ಲಿ ಗ್ರೌಂಡ್+3 ಮಹಡಿಗಳೊಂದಿಗೆ (22,516 ಚದರ ಮೀಟರ್) ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತದೆ ಮತ್ತು ದಕ್ಷಿಣ ಭಾಗದ ಕಟ್ಟಡವನ್ನು ಗ್ರೌಂಡ್+3 ಮಹಡಿಗಳೊಂದಿಗೆ (14,792 ಚದರ ಮೀಟರ್) ವಿಸ್ತರಣೆ ಮಾಡಲಾಗುತ್ತದೆ.

4 / 7
Secunderabad railway station to get airport like facelift PM Narendra Modi will lay the foundation stone on April 8

108 ಮೀಟರ್ ಅಗಲದ ಎರಡು ಅಂತಸ್ತಿನ ಸ್ಕೈ ಕಾನ್ಕೋರ್ಸ್ ಕೂಡ ನಿಲ್ದಾಣದಲ್ಲಿ ಇರಲಿವೆ. ಮೊದಲ ಅಂತಸ್ತಿನಲ್ಲಿ ಪ್ರಯಾಣಿಕರಿಗೆ ಸೇವೆ ಮತ್ತು ಎರಡನೇ ಹಂತವು ಮೇಲ್ಛಾವಣಿಯ ಪ್ಲಾಜಾವಾಗಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ.

5 / 7
Secunderabad railway station to get airport like facelift PM Narendra Modi will lay the foundation stone on April 8

ರೈಲು ನಿಲ್ದಾಣದ ಉತ್ತರ ಭಾಗದಲ್ಲಿ ಐದು ಹಂತದ ಪಾರ್ಕಿಂಗ್ ಮತ್ತು ದಕ್ಷಿಣ ಭಾಗದಲ್ಲಿ ಪ್ರತ್ಯೇಕ ಅಂಡರ್​ಗ್ರೌಂಡ್ ಪಾರ್ಕಿಂಗ್‌ ವ್ಯವಸ್ಥೆ ದೊರೆಯಲಿದೆ.

6 / 7
Secunderabad railway station to get airport like facelift PM Narendra Modi will lay the foundation stone on April 8

ಅಸ್ತಿತ್ವದಲ್ಲಿರುವ ಪ್ಲಾಟ್​ಫಾರ್ಮ್​ಗಳನ್ನು ಹೊಸ ನಿಲ್ದಾಣದ ಆಧುನಿಕತೆಗೆ ತಕ್ಕುದಾಗಿ ನವೀಕರಿಸಲಾಗುತ್ತದೆ. 5000 ಕೆವಿಪಿ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವನ್ನೂ ನಿಲ್ದಾಣ ಹೊಂದಿರಲಿದೆ.

7 / 7
Follow us
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ