AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ, ಶೋಧಕಾರ್ಯ ಮುಂದುವರಿಕೆ

ಕಾರವಾರ, ಆಗಸ್ಟ್ 7: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದು ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 07, 2024 | 9:10 AM

Share
ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್​ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಬಂದ ಮಾಹಿತಿ ಪ್ರಕಾರ ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಬೇರೆ ಮಾಹಿತಿ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್​ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಬಂದ ಮಾಹಿತಿ ಪ್ರಕಾರ ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಬೇರೆ ಮಾಹಿತಿ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.

1 / 5
ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯ ಸವಾಲಿನ ಮಧ್ಯೆಯೂ ಕರವಾಳಿ ಕಾವಲು ಪಡೆ, ಎಸ್​​ಡಿಆರ್​​ಎಫ್ ಮತ್ತು ಎನ್​ಡಿಆರ್​ಎಫ್ ಕಾರ್ಯಾಚರಣೆ ಮುಂದುವರೆದಿದೆ ಎಂದು ನಾರಾಯಣ ತಿಳಿಸಿದ್ದಾರೆ. ಅಬ್ಬರದ ಮಳೆಯಿಂದಾಗಿ ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯ ಸವಾಲಿನ ಮಧ್ಯೆಯೂ ಕರವಾಳಿ ಕಾವಲು ಪಡೆ, ಎಸ್​​ಡಿಆರ್​​ಎಫ್ ಮತ್ತು ಎನ್​ಡಿಆರ್​ಎಫ್ ಕಾರ್ಯಾಚರಣೆ ಮುಂದುವರೆದಿದೆ ಎಂದು ನಾರಾಯಣ ತಿಳಿಸಿದ್ದಾರೆ. ಅಬ್ಬರದ ಮಳೆಯಿಂದಾಗಿ ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

2 / 5
ಲಾರಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಮಧ್ಯರಾತ್ರಿ ಏಕಾಏಕಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿತು. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಲಾರಿ ಚಾಲಕ ಬಾಲಮುರುಗನ್​ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್​ಪಿ ನಾರಾಯಣ ತಿಳಿಸಿದ್ದಾರೆ.

ಲಾರಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಮಧ್ಯರಾತ್ರಿ ಏಕಾಏಕಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿತು. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಲಾರಿ ಚಾಲಕ ಬಾಲಮುರುಗನ್​ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್​ಪಿ ನಾರಾಯಣ ತಿಳಿಸಿದ್ದಾರೆ.

3 / 5
ಸೇತುವೆಯಿಂದ ಕಾಳಿ ನದಿಗೆ ಇನ್ನಷ್ಟು ವಾಹನಗಳು ಏನಾದರೂ ಬಿದ್ದಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದು ‘ಟಿವಿ9’ಗೆ ಉತ್ತರ ಕನ್ನಡ ಎಸ್​ಪಿ ನಾರಾಯಣ ತಿಳಿಸಿದರು.

ಸೇತುವೆಯಿಂದ ಕಾಳಿ ನದಿಗೆ ಇನ್ನಷ್ಟು ವಾಹನಗಳು ಏನಾದರೂ ಬಿದ್ದಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದು ‘ಟಿವಿ9’ಗೆ ಉತ್ತರ ಕನ್ನಡ ಎಸ್​ಪಿ ನಾರಾಯಣ ತಿಳಿಸಿದರು.

4 / 5
41 ವರ್ಷಗಳ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್​ಬಿ ಕಂಪನಿ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

41 ವರ್ಷಗಳ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್​ಬಿ ಕಂಪನಿ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ