AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shardul Thakur: ಮುಂಬೈ ಲೋಕಲ್ ಟ್ರೈನ್ ಹುಡುಗ ಇದೀಗ ಟೀಮ್ ಇಂಡಿಯಾ ಸೆನ್ಸೇಷನ್

Team India: ಶಾರ್ದೂಲ್ ಇದುವರೆಗೆ ಭಾರತದ ಪರ 5 ಟೆಸ್ಟ್ , 15 ಏಕದಿನ ಮತ್ತು 21 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Sep 06, 2021 | 9:02 PM

ಶಾರ್ದೂಲ್ ಠಾಕೂರ್...ಈ ಹೆಸರು ಇದೀಗ ಎಲ್ಲರಿಗೂ ಚಿರಪರಿಚಿತ. ಅದರಲ್ಲೂ ಇಂಗ್ಲೆಂಡ್ ಪ್ರೇಮಿಗಳೂ ಕೂಡ ಈತನ ಆಲ್​ರೌಂಡರ್ ಪ್ರದರ್ಶನಕ್ಕೆ ಫಿದಾ ಆಗಿದ್ದಾರೆ. ಆದರೆ ನೆನಪಿರಲಿ..ಶಾರ್ದುಲ್ ಎಂಬ ಚಿರ ಯುವಕ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದು 2017 ರಲ್ಲಿ ಎಂಬುದು ಅನೇಕರಿಗೆ ಗೊತ್ತಿಲ್ಲ. ಅಂದರೆ ನಾಲ್ಕು ವರ್ಷಗಳ ಬಳಿಕ ಶಾರ್ದೂಲ್ ಹೆಸರು ಚರ್ಚೆಯಾಗುತ್ತಿದೆ.

ಶಾರ್ದೂಲ್ ಠಾಕೂರ್...ಈ ಹೆಸರು ಇದೀಗ ಎಲ್ಲರಿಗೂ ಚಿರಪರಿಚಿತ. ಅದರಲ್ಲೂ ಇಂಗ್ಲೆಂಡ್ ಪ್ರೇಮಿಗಳೂ ಕೂಡ ಈತನ ಆಲ್​ರೌಂಡರ್ ಪ್ರದರ್ಶನಕ್ಕೆ ಫಿದಾ ಆಗಿದ್ದಾರೆ. ಆದರೆ ನೆನಪಿರಲಿ..ಶಾರ್ದುಲ್ ಎಂಬ ಚಿರ ಯುವಕ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದು 2017 ರಲ್ಲಿ ಎಂಬುದು ಅನೇಕರಿಗೆ ಗೊತ್ತಿಲ್ಲ. ಅಂದರೆ ನಾಲ್ಕು ವರ್ಷಗಳ ಬಳಿಕ ಶಾರ್ದೂಲ್ ಹೆಸರು ಚರ್ಚೆಯಾಗುತ್ತಿದೆ.

1 / 7
2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಶಾರ್ದೂಲ್ ಇದುವರೆಗೆ ಆಡಿದ್ದು ಕೇವಲ 5 ಟೆಸ್ಟ್ ಪಂದ್ಯಗಳನ್ನು ಎಂದರೆ ನಂಬಲೇಬೇಕು. ಹಲವು ಬಾರಿ ತಂಡದಲ್ಲಿ ಸ್ಥಾನ ಲಭಿಸಿದರೂ ಈ ಯುವ ಕ್ರಿಕೆಟಿಗನಿಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ. ಇನ್ನು ಕೆಲ ಬಾರಿ ಅವಕಾಶ ಲಭಿಸಿದರೂ ಗಾಯದ ಕಾರಣದಿಂದ ಹೊರಗುಳಿಯಬೇಕಾಗಿ ಬಂತು.

2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಶಾರ್ದೂಲ್ ಇದುವರೆಗೆ ಆಡಿದ್ದು ಕೇವಲ 5 ಟೆಸ್ಟ್ ಪಂದ್ಯಗಳನ್ನು ಎಂದರೆ ನಂಬಲೇಬೇಕು. ಹಲವು ಬಾರಿ ತಂಡದಲ್ಲಿ ಸ್ಥಾನ ಲಭಿಸಿದರೂ ಈ ಯುವ ಕ್ರಿಕೆಟಿಗನಿಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ. ಇನ್ನು ಕೆಲ ಬಾರಿ ಅವಕಾಶ ಲಭಿಸಿದರೂ ಗಾಯದ ಕಾರಣದಿಂದ ಹೊರಗುಳಿಯಬೇಕಾಗಿ ಬಂತು.

2 / 7
ಆದರೆ ಕಳೆದೊಂದು ವರ್ಷದಿಂದ ಸಿಕ್ಕ ಅವಕಾಶದಲ್ಲಿ ಮಿಂಚುವಲ್ಲಿ ಶಾರ್ದೂಲ್ ಯಶಸ್ವಿಯಾಗುತ್ತಿದ್ದಾರೆ. ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರ್ದೂಲ್ ಇದೀಗ ಒಂದಾರ್ಥದಲ್ಲಿ ಟೀಮ್ ಇಂಡಿಯಾದ ಖಾಯಂ ಸದಸ್ಯ ಎನ್ನಬಹುದು. ಇದೀಗ ಓವಲ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ ನಾಲ್ಕನೇ ಟೆಸ್ಟ್‌ನಲ್ಲೂ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

ಆದರೆ ಕಳೆದೊಂದು ವರ್ಷದಿಂದ ಸಿಕ್ಕ ಅವಕಾಶದಲ್ಲಿ ಮಿಂಚುವಲ್ಲಿ ಶಾರ್ದೂಲ್ ಯಶಸ್ವಿಯಾಗುತ್ತಿದ್ದಾರೆ. ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರ್ದೂಲ್ ಇದೀಗ ಒಂದಾರ್ಥದಲ್ಲಿ ಟೀಮ್ ಇಂಡಿಯಾದ ಖಾಯಂ ಸದಸ್ಯ ಎನ್ನಬಹುದು. ಇದೀಗ ಓವಲ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ ನಾಲ್ಕನೇ ಟೆಸ್ಟ್‌ನಲ್ಲೂ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

3 / 7
 ಕೇವಲ 31 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಶಾರ್ದೂಲ್ ಟೀಮ್ ಇಂಡಿಯಾ ಪಾಲಿನ ಆಪತ್ಭಾಂಧವ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ ಕಪಿಲ್ ದೇವ್ ನಂತರ ಅತಿ ವೇಗದ ಅರ್ಧಶತಕ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇನ್ನು ಎರಡನೇ ಇನಿಂಗ್ಸ್​ನಲ್ಲೂ ಅರ್ಧಶತಕ ಬಾರಿಸಿ ಬ್ಯಾಕ್ ಟು ಬ್ಯಾಕ್ ಹಾಫ್ ಸೆಂಚುರಿ ಸಿಡಿಸಿದ ಆಟಗಾರ ಎಂಬ ದಾಖಲೆಯ ಪಟ್ಟಿಗೆ ಸೇರ್ಪಡೆಯಾದರು.

ಕೇವಲ 31 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಶಾರ್ದೂಲ್ ಟೀಮ್ ಇಂಡಿಯಾ ಪಾಲಿನ ಆಪತ್ಭಾಂಧವ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಟೆಸ್ಟ್​ನಲ್ಲಿ ಕಪಿಲ್ ದೇವ್ ನಂತರ ಅತಿ ವೇಗದ ಅರ್ಧಶತಕ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇನ್ನು ಎರಡನೇ ಇನಿಂಗ್ಸ್​ನಲ್ಲೂ ಅರ್ಧಶತಕ ಬಾರಿಸಿ ಬ್ಯಾಕ್ ಟು ಬ್ಯಾಕ್ ಹಾಫ್ ಸೆಂಚುರಿ ಸಿಡಿಸಿದ ಆಟಗಾರ ಎಂಬ ದಾಖಲೆಯ ಪಟ್ಟಿಗೆ ಸೇರ್ಪಡೆಯಾದರು.

4 / 7
ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿರುವ ಶಾರ್ದೂಲ್ ಒಂದು ಕಾಲದಲ್ಲಿ ಓಡಾಡಲು ವಾಹನವಿಲ್ಲದೆ ಪರದಾಡಿದ್ದರು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ತನ್ನ ಅಭ್ಯಾಸಕ್ಕಾಗಿ ಪ್ರತಿ ದಿನ ಜನಜಂಗುಳಿಯಿಂದ ಕೂಡಿರುವ ಮುಂಬೈ ಲೋಕಲ್ ಟ್ರೈನ್​ನಲ್ಲೇ ಪ್ರಯಾಣಿಸುತ್ತಿದ್ದರು. ಹಲವು ಕಷ್ಟ ಕಾರ್ಪಣ್ಯಗಳನ್ನು ದಾಟಿ ಕ್ರಿಕೆಟ್ ಕೆರಿಯರ್ ಕಟ್ಟಿಕೊಂಡಿದ್ದ ಶಾರ್ದೂಲ್ ಟೀಮ್ ಇಂಡಿಯಾ ಪರ ಆಡಿದ ಬಳಿಕ ಕೂಡ ರೈಲಿನಲ್ಲೇ ಪ್ರಯಾಣಿಸಿದ್ದರು ಎಂಬುದು ವಿಶೇಷ.

ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿರುವ ಶಾರ್ದೂಲ್ ಒಂದು ಕಾಲದಲ್ಲಿ ಓಡಾಡಲು ವಾಹನವಿಲ್ಲದೆ ಪರದಾಡಿದ್ದರು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ತನ್ನ ಅಭ್ಯಾಸಕ್ಕಾಗಿ ಪ್ರತಿ ದಿನ ಜನಜಂಗುಳಿಯಿಂದ ಕೂಡಿರುವ ಮುಂಬೈ ಲೋಕಲ್ ಟ್ರೈನ್​ನಲ್ಲೇ ಪ್ರಯಾಣಿಸುತ್ತಿದ್ದರು. ಹಲವು ಕಷ್ಟ ಕಾರ್ಪಣ್ಯಗಳನ್ನು ದಾಟಿ ಕ್ರಿಕೆಟ್ ಕೆರಿಯರ್ ಕಟ್ಟಿಕೊಂಡಿದ್ದ ಶಾರ್ದೂಲ್ ಟೀಮ್ ಇಂಡಿಯಾ ಪರ ಆಡಿದ ಬಳಿಕ ಕೂಡ ರೈಲಿನಲ್ಲೇ ಪ್ರಯಾಣಿಸಿದ್ದರು ಎಂಬುದು ವಿಶೇಷ.

5 / 7
ಹೌದು, 2018 ರಲ್ಲಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹಿಂತಿರುಗಿದ ಬಳಿಕ ಶಾರ್ದೂಲ್ ಠಾಕೂರ್ ಮತ್ತೆ ಮುಂಬೈ ಟ್ರೈನ್​ನಲ್ಲಿ ಕಾಣಿಸಿಕೊಂಡಿದ್ದರು. ಅಂಧೇರಿ ನಿಲ್ದಾಣದಿಂದ ಮುಂಬೈ ಲೋಕಲ್ ರೈಲು ಹತ್ತಿದ್ದ ಶಾರ್ದೂಲ್​ನನ್ನು ನೋಡಿ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದರು. ಆದರೆ ಅದಕ್ಕೂ ಮುನ್ನವೇ ಯುವ ಕ್ರಿಕೆಟಿಗ ಅದೇ ರೈಲಿನಲ್ಲಿ ದಿನ ನಿತ್ಯ ಪ್ರಯಾಣಿಸುತ್ತಿದ್ದನ್ನು ಯಾರು ಗಮನಿಸಿರಲಿಲ್ಲ ಅಷ್ಟೇ.

ಹೌದು, 2018 ರಲ್ಲಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹಿಂತಿರುಗಿದ ಬಳಿಕ ಶಾರ್ದೂಲ್ ಠಾಕೂರ್ ಮತ್ತೆ ಮುಂಬೈ ಟ್ರೈನ್​ನಲ್ಲಿ ಕಾಣಿಸಿಕೊಂಡಿದ್ದರು. ಅಂಧೇರಿ ನಿಲ್ದಾಣದಿಂದ ಮುಂಬೈ ಲೋಕಲ್ ರೈಲು ಹತ್ತಿದ್ದ ಶಾರ್ದೂಲ್​ನನ್ನು ನೋಡಿ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದರು. ಆದರೆ ಅದಕ್ಕೂ ಮುನ್ನವೇ ಯುವ ಕ್ರಿಕೆಟಿಗ ಅದೇ ರೈಲಿನಲ್ಲಿ ದಿನ ನಿತ್ಯ ಪ್ರಯಾಣಿಸುತ್ತಿದ್ದನ್ನು ಯಾರು ಗಮನಿಸಿರಲಿಲ್ಲ ಅಷ್ಟೇ.

6 / 7
ಶಾರ್ದೂಲ್ ಇದುವರೆಗೆ ಭಾರತದ ಪರ 5 ಟೆಸ್ಟ್ , 15 ಏಕದಿನ ಮತ್ತು 21 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಟೆಸ್ಟ್​ನಲ್ಲಿ 16 ವಿಕೆಟ್ ಉರುಳಿಸಿರುವ ಶಾರ್ದುಲ್ ಏಕದಿನದಲ್ಲಿ 22 ಹಾಗೂ ಟಿ20 ಕ್ರಿಕೆಟ್​ನಲ್ಲಿ 31 ವಿಕೆಟ್ ಪಡೆದಿದ್ದಾರೆ. ಹಾಗೆಯೇ  ಐಪಿಎಲ್ ನಲ್ಲಿ 51 ವಿಕೆಟ್ ಕಬಳಿಸಿದ್ದಾರೆ. ಸದ್ಯ ಉತ್ತಮ ಫಾರ್ಮ್​ನಲ್ಲಿರುವ ಶಾರ್ದೂಲ್ ಬ್ಯಾಟಿಂಗ್-ಬೌಲಿಂಗ್​ ಮೂಲಕ ಮಿಂಚುತ್ತಿದ್ದು,  ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ಶಾರ್ದೂಲ್ ಇದುವರೆಗೆ ಭಾರತದ ಪರ 5 ಟೆಸ್ಟ್ , 15 ಏಕದಿನ ಮತ್ತು 21 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಟೆಸ್ಟ್​ನಲ್ಲಿ 16 ವಿಕೆಟ್ ಉರುಳಿಸಿರುವ ಶಾರ್ದುಲ್ ಏಕದಿನದಲ್ಲಿ 22 ಹಾಗೂ ಟಿ20 ಕ್ರಿಕೆಟ್​ನಲ್ಲಿ 31 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಐಪಿಎಲ್ ನಲ್ಲಿ 51 ವಿಕೆಟ್ ಕಬಳಿಸಿದ್ದಾರೆ. ಸದ್ಯ ಉತ್ತಮ ಫಾರ್ಮ್​ನಲ್ಲಿರುವ ಶಾರ್ದೂಲ್ ಬ್ಯಾಟಿಂಗ್-ಬೌಲಿಂಗ್​ ಮೂಲಕ ಮಿಂಚುತ್ತಿದ್ದು, ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

7 / 7
Follow us
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ