AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜರಿಗಾಗಿ ಅಮೆರಿಕಕ್ಕೆ ಹೊರಟ ಶಿವಣ್ಣನಿಗೆ ಸುದೀಪ್ ಪ್ರೀತಿಯ ಅಪ್ಪುಗೆ; ಇಲ್ಲಿವೆ ಫೋಟೋಸ್

ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಕೈಕೊಟ್ಟ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇತ್ತೀಚೆಗೆ ಅವರೇ ಈ ವಿಚಾರವನ್ನು ಖಚಿಪಡಿಸಿದ್ದರು. ತಮಗೆ ಅನಾರೋಗ್ಯ ಆಗಿದೆ ಎಂಬುದನ್ನು ಹೇಳಿದ್ದರು ಶಿವಣ್ಣ. ಆದರೆ, ಏನಾಗಿದೆ ಎಂಬ ವಿಚಾರವನ್ನು ರಿವೀಲ್ ಮಾಡಿರಲಿಲ್ಲ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕ ಹೊರಟಿದ್ದಾರೆ. ಅವರಿಗೆ ಕಿಚ್ಚ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 18, 2024 | 2:55 PM

Share
ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

2 / 5
ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

3 / 5
ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

4 / 5
ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ