AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ಶಿವಣ್ಣನ ‘ಭಜರಂಗಿ 2’ ಚಿತ್ರಕ್ಕೆ ಗ್ರ್ಯಾಂಡ್​ ಓಪನಿಂಗ್​; ಇಲ್ಲಿದೆ ಫೋಟೋ ಗ್ಯಾಲರಿ

Shivarajkumar: ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನ ‘ಭಜರಂಗಿ 2’ ಚಿತ್ರವನ್ನು ಸಿನಿಪ್ರಿಯರು​ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಮುಂಜಾನೆ 5 ಗಂಟೆಗೆ ಶೋ ಆರಂಭ ಆಗಿದೆ.

TV9 Web
| Edited By: |

Updated on: Oct 29, 2021 | 8:29 AM

Share
‘ಭಜರಂಗಿ 2’ ಸಿನಿಮಾವನ್ನು ಬರಮಾಡಿಕೊಳ್ಳಲು ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಥಿಯೇಟರ್​ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು. ಕಟೌಟ್​ಗೆ ಹಾಲಿನ ಅಭಿಷೇಕ ಮಾಡಲಾಯಿತು.

Shivarajkumar starrer Bhajarangi 2 Kannada movie gets grand opening with fans celebration

1 / 7
ಮುಂಜಾನೆಯೇ ಶುರುವಾದ ಫ್ಯಾನ್ಸ್​ ಶೋನಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಚಿತ್ರ ಪ್ರದರ್ಶನ ಆರಂಭ ಆಗುತ್ತಿದ್ದಂತೆಯೇ ಥಿಯೇಟರ್​ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಯಿತು. ಒಟ್ಟಿನಲ್ಲಿ ಮೊದಲ ದಿನವೇ ‘ಭಜರಂಗಿ 2’ ಧೂಳೆಬ್ಬಿಸಿದೆ.

Shivarajkumar starrer Bhajarangi 2 Kannada movie gets grand opening with fans celebration

2 / 7
ಅಭಿಮಾನಿಗಳ ಜೊತೆ ಸಿನಿಮಾ ನೋಡಲು ಶಿವರಾಜ್​ಕುಮಾರ್​ ಕೂಡ ಚಿತ್ರಮಂದಿರಕ್ಕೆ ಮುಂಜಾನೆಯೇ ಆಗಮಿಸಿದರು. ಅಭಿಮಾನಿಗಳ ಉತ್ಸಾಹ ಕಂಡು ಅವರು ಖುಷಿಪಟ್ಟರು. ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ಇಡೀ ತಂಡದ ಸಂತಸಕ್ಕೆ ಕಾರಣ ಆಗಿದೆ.

ಅಭಿಮಾನಿಗಳ ಜೊತೆ ಸಿನಿಮಾ ನೋಡಲು ಶಿವರಾಜ್​ಕುಮಾರ್​ ಕೂಡ ಚಿತ್ರಮಂದಿರಕ್ಕೆ ಮುಂಜಾನೆಯೇ ಆಗಮಿಸಿದರು. ಅಭಿಮಾನಿಗಳ ಉತ್ಸಾಹ ಕಂಡು ಅವರು ಖುಷಿಪಟ್ಟರು. ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ಇಡೀ ತಂಡದ ಸಂತಸಕ್ಕೆ ಕಾರಣ ಆಗಿದೆ.

3 / 7
ಚಿತ್ರಮಂದಿರಕ್ಕೆ ಬಂದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ಸ್ಟಾರ್​ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಶಿವಣ್ಣನಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

ಚಿತ್ರಮಂದಿರಕ್ಕೆ ಬಂದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ಸ್ಟಾರ್​ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಶಿವಣ್ಣನಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

4 / 7
ಜಾನಪದ ತಂಡಗಳನ್ನು ಕರೆಸಿ ನೃತ್ಯ ಮಾಡಿಸಲಾಗಿದೆ. ಈ ಎಲ್ಲ ದೃಶ್ಯಗಳನ್ನು ನೋಡುತ್ತಿದ್ದರೆ ಇದು ಯಾವುದೇ ಹಬ್ಬಕ್ಕೂ ಕಡಿಮೆ ಇಲ್ಲ ಎಂಬುದು ಖಚಿತ. ಹಾಗಾಗಿ ಶಿವಣ್ಣನ ಫ್ಯಾನ್ಸ್​ ಪಾಲಿಗೆ ಇಂದೇ ದೀಪಾವಳಿ ಬಂದಿದೆ.

ಜಾನಪದ ತಂಡಗಳನ್ನು ಕರೆಸಿ ನೃತ್ಯ ಮಾಡಿಸಲಾಗಿದೆ. ಈ ಎಲ್ಲ ದೃಶ್ಯಗಳನ್ನು ನೋಡುತ್ತಿದ್ದರೆ ಇದು ಯಾವುದೇ ಹಬ್ಬಕ್ಕೂ ಕಡಿಮೆ ಇಲ್ಲ ಎಂಬುದು ಖಚಿತ. ಹಾಗಾಗಿ ಶಿವಣ್ಣನ ಫ್ಯಾನ್ಸ್​ ಪಾಲಿಗೆ ಇಂದೇ ದೀಪಾವಳಿ ಬಂದಿದೆ.

5 / 7
ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಚಿತ್ರದುರ್ಗದ ಪ್ರಸನ್ನ ಥಿಯೇಟರ್​, ದಾವಣಗೆರೆಯ ವಸಂತಾ ಟಾಕೀಸ್​ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಚಿತ್ರದುರ್ಗದ ಪ್ರಸನ್ನ ಥಿಯೇಟರ್​, ದಾವಣಗೆರೆಯ ವಸಂತಾ ಟಾಕೀಸ್​ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

6 / 7
ಸೂರ್ಯೋದಯಕ್ಕೂ ಮುನ್ನವೇ ಕೆಲವು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಆರಂಭ ಆಗಿದೆ. ಮುಂಜಾನೆ 5 ಗಂಟೆಗೆ ಫಸ್ಟ್​ ಡೇ ಫಸ್ಟ್​ ಶೋ ಕಣ್ತುಂಬಿಕೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಧರ್ಮಣ್ಣ, ವಸಿಷ್ಠ ಸಿಂಹ ಮುಂತಾದ ಸೆಲೆಬ್ರಿಟಿಗಳು ಬಂದ ಸಿನಿಮಾ ವೀಕ್ಷಿಸಿದ್ದಾರೆ.

ಸೂರ್ಯೋದಯಕ್ಕೂ ಮುನ್ನವೇ ಕೆಲವು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಆರಂಭ ಆಗಿದೆ. ಮುಂಜಾನೆ 5 ಗಂಟೆಗೆ ಫಸ್ಟ್​ ಡೇ ಫಸ್ಟ್​ ಶೋ ಕಣ್ತುಂಬಿಕೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಧರ್ಮಣ್ಣ, ವಸಿಷ್ಠ ಸಿಂಹ ಮುಂತಾದ ಸೆಲೆಬ್ರಿಟಿಗಳು ಬಂದ ಸಿನಿಮಾ ವೀಕ್ಷಿಸಿದ್ದಾರೆ.

7 / 7
Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?