29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಇಲ್ಲಿವೆ ಫೋಟೋಸ್

Updated on: Feb 02, 2025 | 5:56 PM

ಬರೋಬ್ಬರಿ 29 ವರ್ಷಗಳ ನಂತರ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ ಅವರು ಯಾಣಗೆ ಭೇಟಿ ನೀಡಿ ಖುಷಿಪಟ್ಟಿದ್ದಾರೆ. ಅಲ್ಲಿಂದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಯಾಣಗೆ ತೆರಳಿದ್ದಾರೆ. ಕ್ಯಾನ್ಸರ್​ಗೆ ಅಮೆರಿಕದಲ್ಲಿ ಟ್ರೀಟ್​ಮೆಂಟ್ ಪಡೆದು ಬಂದ ಅವರು ಸಿನಿಮಾ ಕೆಲಸಗಳಿಂದ ಬಿಡುವು ಪಡೆದಿದ್ದಾರೆ.

1 / 5
ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

2 / 5
ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

3 / 5
ಆ ದಿನಗಳನ್ನು ಶಿವರಾಜ್​ಕುಮಾರ್​ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

ಆ ದಿನಗಳನ್ನು ಶಿವರಾಜ್​ಕುಮಾರ್​ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

4 / 5
ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕೂಡ ಸಾಥ್ ನೀಡಿದ್ದಾರೆ. ಜನರು ಈ ಫೋಟೋ ನೋಡಿ ಕಮೆಂಟ್ ಮಾಡಿದ್ದಾರೆ. ‘ನೀವು ಕೂಡ ಈ ಬಂಡೆಯಂತೆ ಗಟ್ಟಿ’ ಎಂದು ಶಿವಣ್ಣನಿಗೆ ಅಭಿಮಾನಿಗಳು ಹೇಳಿದ್ದಾರೆ.

ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕೂಡ ಸಾಥ್ ನೀಡಿದ್ದಾರೆ. ಜನರು ಈ ಫೋಟೋ ನೋಡಿ ಕಮೆಂಟ್ ಮಾಡಿದ್ದಾರೆ. ‘ನೀವು ಕೂಡ ಈ ಬಂಡೆಯಂತೆ ಗಟ್ಟಿ’ ಎಂದು ಶಿವಣ್ಣನಿಗೆ ಅಭಿಮಾನಿಗಳು ಹೇಳಿದ್ದಾರೆ.

5 / 5
‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್​ಕುಮಾರ್​ ಅವರು ಬಣ್ಣಿಸಿದ್ದಾರೆ.

‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್​ಕುಮಾರ್​ ಅವರು ಬಣ್ಣಿಸಿದ್ದಾರೆ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us