ಕರ್ನಾಟಕದಲ್ಲೊಂದು ಅಪರೂಪದ ಘಟನೆ: ಸಿಬ್ಬಂದಿಗೆ ಬಂದೂಕು ಹೊತ್ತು ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ

Edited By:

Updated on: Apr 07, 2026 | 6:39 PM

ಶಾಲೆಗೆ ತಡವಾಗಿ ಹೋಗಿದ್ದಕ್ಕೆ ಅಥವಾ ಹೋಂ ವರ್ಕ್ ಮಾಡಿಕೊಂಡು ಹೋಗದಿದ್ದಕ್ಕೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಬಿಸಿನಲ್ಲಿ ನಿಲ್ಲಿಸಿದ ಉದಾಹರಣೆಗಳಿವೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಪಿಎಸ್​​ಐ, ತಮ್ಮ ಠಾಣೆಯ ಸಿಬ್ಬಂದಿಗೆ ಬಂದೂಕು ಹೊತ್ತು ಬಿಸಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪಿಎಸ್​​ಐ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ಶುರುವಾಗಿವೆ.

1 / 6
ಶಾಲಾ ಮಕ್ಕಳಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಘಟನೆ ಬೆಳಕಿಗೆ ಬಂದಿದೆ.  ಕರ್ತವ್ಯ ನಿರ್ಲಕ್ಷ್ಯ ಕಾರಣಕ್ಕೆ ಈ ಅಪರೂಪದ ಶಿಕ್ಷೆ ವಿಧಿಸಲಾಗಿದೆ.

ಶಾಲಾ ಮಕ್ಕಳಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಘಟನೆ ಬೆಳಕಿಗೆ ಬಂದಿದೆ. ಕರ್ತವ್ಯ ನಿರ್ಲಕ್ಷ್ಯ ಕಾರಣಕ್ಕೆ ಈ ಅಪರೂಪದ ಶಿಕ್ಷೆ ವಿಧಿಸಲಾಗಿದೆ.

2 / 6
ಅಚ್ಚರಿ ಅನ್ನಿಸಿದರೂ ಸತ್ಯ. PSI ನೇತ್ರಾವತಿ ಅವರು ತಮ್ಮ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ನಿನ್ನೆ (ಏಪ್ರಿಲ್ 06) ಮಧ್ಯಾಹ್ನ 2ರಿಂದ 5ರವರೆಗೆ ರಣಬಿಸಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ.

ಅಚ್ಚರಿ ಅನ್ನಿಸಿದರೂ ಸತ್ಯ. PSI ನೇತ್ರಾವತಿ ಅವರು ತಮ್ಮ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ ನಿನ್ನೆ (ಏಪ್ರಿಲ್ 06) ಮಧ್ಯಾಹ್ನ 2ರಿಂದ 5ರವರೆಗೆ ರಣಬಿಸಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ.

3 / 6
ಅರ್ಧದಿನ ರಣಬಿಸಿಲಿನಲ್ಲಿ ನಿಲ್ಲಿಸಿದ್ದಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅರ್ಧದಿನ ರಣಬಿಸಿಲಿನಲ್ಲಿ ನಿಲ್ಲಿಸಿದ್ದಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

4 / 6
ಈ ಸಂಬಂಧ ಪಿಎಸ್​​ಐ ನೇತ್ರಾವತಿ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆದಿದ್ದು, ಕೆಲ ಸಿಬ್ಬಂದಿ, ಪಿಎಸ್​ಐ ನೇತ್ರಾವಳಿ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಪಿಎಸ್​​ಐ ನೇತ್ರಾವತಿ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆದಿದ್ದು, ಕೆಲ ಸಿಬ್ಬಂದಿ, ಪಿಎಸ್​ಐ ನೇತ್ರಾವಳಿ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.

5 / 6
ಇದನ್ನು ಗಂಭೀರವಾಗಿ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಅವರು
ಡಿವೈಎಸ್ಪಿ ಅರುಣ್ ಗೌಡ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ  ನೀಡುವಂತೆ ಸೂಚನೆ ನೀಡಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಅವರು ಡಿವೈಎಸ್ಪಿ ಅರುಣ್ ಗೌಡ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

6 / 6
ಪೊಲೀಸ್ ಸಿಬ್ಬಂದಿಗೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷಿ ವಿಧಿಸಿರುವುದು ನಿನ್ನೆ (ಏಪ್ರಿಲ್ 06). ಆದ್ರೆ, ಇಂದು ಫೋಟೋಗಳು ವೈರಲ್ ಆಗುತ್ತಿದ್ದು, ಈ ಸಂಬಂಧ ಪರ ವಿರೋಧಕ್ಕೆ ಕಾರಣವಾಗಿದೆ.

ಪೊಲೀಸ್ ಸಿಬ್ಬಂದಿಗೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷಿ ವಿಧಿಸಿರುವುದು ನಿನ್ನೆ (ಏಪ್ರಿಲ್ 06). ಆದ್ರೆ, ಇಂದು ಫೋಟೋಗಳು ವೈರಲ್ ಆಗುತ್ತಿದ್ದು, ಈ ಸಂಬಂಧ ಪರ ವಿರೋಧಕ್ಕೆ ಕಾರಣವಾಗಿದೆ.

Published On - 5:54 pm, Tue, 7 April 26

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us