AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 200 ಸ್ಟ್ರೈಕ್ ರೇಟ್‌, 25 ಎಸೆತಗಳಲ್ಲಿ ಅರ್ಧಶತಕ; ಲಂಕಾ ವಿರುದ್ಧ ಶ್ರೇಯಸ್ ಆರ್ಭಟ

Shreyas Iyer: ಟೀಂ ಇಂಡಿಯಾ ಕೊನೆಯ 3 ಓವರ್‌ಗಳಲ್ಲಿ 44 ರನ್ ಗಳಿಸಿತು, ಅದರಲ್ಲಿ ಕೇವಲ 14 ಎಸೆತಗಳಲ್ಲಿ 40 ರನ್ ಗಳಿಸಿದ ಈ ಬ್ಯಾಟ್ಸ್‌ಮನ್ ತಂಡವನ್ನು 199 ಸ್ಕೋರ್‌ಗೆ ಕೊಂಡೊಯ್ದರು.

ಪೃಥ್ವಿಶಂಕರ
|

Updated on: Feb 25, 2022 | 3:15 PM

Share
ಇಶಾನ್ ಕಿಶನ್ ವಿಕೆಟ್ ಪತನವಾದ ಬಳಿಕ ಶ್ರೇಯಸ್ ಏಕಾಂಗಿಯಾಗಿ ದಾಳಿಯ ಹೊಣೆ ಹೊತ್ತುಕೊಂಡರು. ಭಾರತದ ಬಲಗೈ ಬ್ಯಾಟ್ಸ್‌ಮನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಶ್ರೇಯಸ್ ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಅವರು ಕೇವಲ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 57 ರನ್ ಗಳಿಸಿದರು.

1 / 4
ಲಕ್ನೋದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗಿತ್ತು. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಅದ್ಭುತ ಆರಂಭದ ನಂತರ, ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಮಾಡಿದರು. ಅಯ್ಯರ್ ಎರಡನೇ ವಿಕೆಟ್‌ಗೆ ಇಶಾನ್ ಜೊತೆ 5 ಓವರ್‌ಗಳಲ್ಲಿ 44 ರನ್ ಸೇರಿಸಿದರು.

2 / 4
ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳು ತಮಗೆ ಸಿಗುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಪ್ರತಿ ಪಂದ್ಯವೂ ಪ್ರಮುಖವಾಗಿರುವ ಬ್ಯಾಟ್ಸ್‌ಮನ್‌ಗಳಲ್ಲಿ ಶ್ರೇಯಸ್ ಅಯ್ಯರ್ ಕೂಡ ಒಬ್ಬರು. ಶ್ರೀಲಂಕಾ ವಿರುದ್ಧದ T20 ಸರಣಿಯಲ್ಲಿ ಅಯ್ಯರ್ ಅಂತಹ ಒಂದು ಅವಕಾಶವನ್ನು ಪಡೆದರು ಮತ್ತು ಸರಣಿಯ ಮೊದಲ ಪಂದ್ಯದಲ್ಲಿ, ಈ ಬ್ಯಾಟ್ಸ್‌ಮನ್ ಅದ್ಭುತ ಅರ್ಧಶತಕವನ್ನು ಬಾರಿಸುವ ಮೂಲಕ ತಮ್ಮ ಹಕ್ಕು ಸಾಧಿಸಿದರು.

3 / 4
200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಅಯ್ಯರ್ ರವೀಂದ್ರ ಜಡೇಜಾ ಅವರೊಂದಿಗೆ ಕೇವಲ 18 ಎಸೆತಗಳಲ್ಲಿ 44 ರನ್‌ಗಳ ಅಜೇಯ ಪಾಲುದಾರಿಕೆಯನ್ನು ನೀಡಿದರು. ವಿಶೇಷವೆಂದರೆ ಈ ಜೊತೆಯಾಟದಲ್ಲಿ ಜಡೇಜಾ ಕೇವಲ 3 ರನ್ ಗಳಿಸಿದರೆ, ಅಯ್ಯರ್ 14 ಎಸೆತಗಳಲ್ಲಿ 40 ರನ್ ಗಳಿಸಿದರು.

4 / 4
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!