AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 200 ಸ್ಟ್ರೈಕ್ ರೇಟ್‌, 25 ಎಸೆತಗಳಲ್ಲಿ ಅರ್ಧಶತಕ; ಲಂಕಾ ವಿರುದ್ಧ ಶ್ರೇಯಸ್ ಆರ್ಭಟ

Shreyas Iyer: ಟೀಂ ಇಂಡಿಯಾ ಕೊನೆಯ 3 ಓವರ್‌ಗಳಲ್ಲಿ 44 ರನ್ ಗಳಿಸಿತು, ಅದರಲ್ಲಿ ಕೇವಲ 14 ಎಸೆತಗಳಲ್ಲಿ 40 ರನ್ ಗಳಿಸಿದ ಈ ಬ್ಯಾಟ್ಸ್‌ಮನ್ ತಂಡವನ್ನು 199 ಸ್ಕೋರ್‌ಗೆ ಕೊಂಡೊಯ್ದರು.

ಪೃಥ್ವಿಶಂಕರ
|

Updated on: Feb 25, 2022 | 3:15 PM

Share
ಇಶಾನ್ ಕಿಶನ್ ವಿಕೆಟ್ ಪತನವಾದ ಬಳಿಕ ಶ್ರೇಯಸ್ ಏಕಾಂಗಿಯಾಗಿ ದಾಳಿಯ ಹೊಣೆ ಹೊತ್ತುಕೊಂಡರು. ಭಾರತದ ಬಲಗೈ ಬ್ಯಾಟ್ಸ್‌ಮನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಶ್ರೇಯಸ್ ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಅವರು ಕೇವಲ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 57 ರನ್ ಗಳಿಸಿದರು.

1 / 4
ಲಕ್ನೋದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗಿತ್ತು. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಅದ್ಭುತ ಆರಂಭದ ನಂತರ, ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಮಾಡಿದರು. ಅಯ್ಯರ್ ಎರಡನೇ ವಿಕೆಟ್‌ಗೆ ಇಶಾನ್ ಜೊತೆ 5 ಓವರ್‌ಗಳಲ್ಲಿ 44 ರನ್ ಸೇರಿಸಿದರು.

2 / 4
ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳು ತಮಗೆ ಸಿಗುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಪ್ರತಿ ಪಂದ್ಯವೂ ಪ್ರಮುಖವಾಗಿರುವ ಬ್ಯಾಟ್ಸ್‌ಮನ್‌ಗಳಲ್ಲಿ ಶ್ರೇಯಸ್ ಅಯ್ಯರ್ ಕೂಡ ಒಬ್ಬರು. ಶ್ರೀಲಂಕಾ ವಿರುದ್ಧದ T20 ಸರಣಿಯಲ್ಲಿ ಅಯ್ಯರ್ ಅಂತಹ ಒಂದು ಅವಕಾಶವನ್ನು ಪಡೆದರು ಮತ್ತು ಸರಣಿಯ ಮೊದಲ ಪಂದ್ಯದಲ್ಲಿ, ಈ ಬ್ಯಾಟ್ಸ್‌ಮನ್ ಅದ್ಭುತ ಅರ್ಧಶತಕವನ್ನು ಬಾರಿಸುವ ಮೂಲಕ ತಮ್ಮ ಹಕ್ಕು ಸಾಧಿಸಿದರು.

3 / 4
200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಅಯ್ಯರ್ ರವೀಂದ್ರ ಜಡೇಜಾ ಅವರೊಂದಿಗೆ ಕೇವಲ 18 ಎಸೆತಗಳಲ್ಲಿ 44 ರನ್‌ಗಳ ಅಜೇಯ ಪಾಲುದಾರಿಕೆಯನ್ನು ನೀಡಿದರು. ವಿಶೇಷವೆಂದರೆ ಈ ಜೊತೆಯಾಟದಲ್ಲಿ ಜಡೇಜಾ ಕೇವಲ 3 ರನ್ ಗಳಿಸಿದರೆ, ಅಯ್ಯರ್ 14 ಎಸೆತಗಳಲ್ಲಿ 40 ರನ್ ಗಳಿಸಿದರು.

4 / 4
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ