AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 200 ಸ್ಟ್ರೈಕ್ ರೇಟ್‌, 25 ಎಸೆತಗಳಲ್ಲಿ ಅರ್ಧಶತಕ; ಲಂಕಾ ವಿರುದ್ಧ ಶ್ರೇಯಸ್ ಆರ್ಭಟ

Shreyas Iyer: ಟೀಂ ಇಂಡಿಯಾ ಕೊನೆಯ 3 ಓವರ್‌ಗಳಲ್ಲಿ 44 ರನ್ ಗಳಿಸಿತು, ಅದರಲ್ಲಿ ಕೇವಲ 14 ಎಸೆತಗಳಲ್ಲಿ 40 ರನ್ ಗಳಿಸಿದ ಈ ಬ್ಯಾಟ್ಸ್‌ಮನ್ ತಂಡವನ್ನು 199 ಸ್ಕೋರ್‌ಗೆ ಕೊಂಡೊಯ್ದರು.

ಪೃಥ್ವಿಶಂಕರ
|

Updated on: Feb 25, 2022 | 3:15 PM

ಇಶಾನ್ ಕಿಶನ್ ವಿಕೆಟ್ ಪತನವಾದ ಬಳಿಕ ಶ್ರೇಯಸ್ ಏಕಾಂಗಿಯಾಗಿ ದಾಳಿಯ ಹೊಣೆ ಹೊತ್ತುಕೊಂಡರು. ಭಾರತದ ಬಲಗೈ ಬ್ಯಾಟ್ಸ್‌ಮನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಶ್ರೇಯಸ್ ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಅವರು ಕೇವಲ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 57 ರನ್ ಗಳಿಸಿದರು.

1 / 4
ಲಕ್ನೋದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗಿತ್ತು. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಅದ್ಭುತ ಆರಂಭದ ನಂತರ, ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಮಾಡಿದರು. ಅಯ್ಯರ್ ಎರಡನೇ ವಿಕೆಟ್‌ಗೆ ಇಶಾನ್ ಜೊತೆ 5 ಓವರ್‌ಗಳಲ್ಲಿ 44 ರನ್ ಸೇರಿಸಿದರು.

2 / 4
ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳು ತಮಗೆ ಸಿಗುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಪ್ರತಿ ಪಂದ್ಯವೂ ಪ್ರಮುಖವಾಗಿರುವ ಬ್ಯಾಟ್ಸ್‌ಮನ್‌ಗಳಲ್ಲಿ ಶ್ರೇಯಸ್ ಅಯ್ಯರ್ ಕೂಡ ಒಬ್ಬರು. ಶ್ರೀಲಂಕಾ ವಿರುದ್ಧದ T20 ಸರಣಿಯಲ್ಲಿ ಅಯ್ಯರ್ ಅಂತಹ ಒಂದು ಅವಕಾಶವನ್ನು ಪಡೆದರು ಮತ್ತು ಸರಣಿಯ ಮೊದಲ ಪಂದ್ಯದಲ್ಲಿ, ಈ ಬ್ಯಾಟ್ಸ್‌ಮನ್ ಅದ್ಭುತ ಅರ್ಧಶತಕವನ್ನು ಬಾರಿಸುವ ಮೂಲಕ ತಮ್ಮ ಹಕ್ಕು ಸಾಧಿಸಿದರು.

3 / 4
200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಅಯ್ಯರ್ ರವೀಂದ್ರ ಜಡೇಜಾ ಅವರೊಂದಿಗೆ ಕೇವಲ 18 ಎಸೆತಗಳಲ್ಲಿ 44 ರನ್‌ಗಳ ಅಜೇಯ ಪಾಲುದಾರಿಕೆಯನ್ನು ನೀಡಿದರು. ವಿಶೇಷವೆಂದರೆ ಈ ಜೊತೆಯಾಟದಲ್ಲಿ ಜಡೇಜಾ ಕೇವಲ 3 ರನ್ ಗಳಿಸಿದರೆ, ಅಯ್ಯರ್ 14 ಎಸೆತಗಳಲ್ಲಿ 40 ರನ್ ಗಳಿಸಿದರು.

4 / 4
Follow us
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ