AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಅನುಭವಿಗಳ ವೈಫಲ್ಯ: ಅಬ್ಬರಿಸಿದ್ದು ಮಾತ್ರ 4ನೇ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಅಯ್ಯರ್

IND vs SL: ಶ್ರೇಯಸ್ ಅಯ್ಯರ್ ಕ್ರೀಸ್ಗೆ ಬಂದ ಮೊದಲ ಸೆಷನ್ನಲ್ಲಿ ಟೀಮ್ ಇಂಡಿಯಾ ಕೇವಲ 86 ರನ್ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಸ್ವಲ್ಪ ಸಮಯದ ನಂತರ ಅಯ್ಯರ್ ಕ್ರೀಸ್ನಲ್ಲಿ ಇರುವಾಗಲೇ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಕೂಡ ಪೆವಿಲಿಯನ್ ಸೇರಿಕೊಂಡರು.

Vinay Bhat
|

Updated on:Mar 13, 2022 | 8:23 AM

Share
Shreyas Iyer: ಅನುಭವಿಗಳ ವೈಫಲ್ಯ: ಅಬ್ಬರಿಸಿದ್ದು ಮಾತ್ರ 4ನೇ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಅಯ್ಯರ್

1 / 4
ಶ್ರೇಯಸ್ ಅಯ್ಯರ್ ಕ್ರೀಸ್ಗೆ ಬಂದ ಮೊದಲ ಸೆಷನ್ನಲ್ಲಿ ಟೀಮ್ ಇಂಡಿಯಾ ಕೇವಲ 86 ರನ್ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಸ್ವಲ್ಪ ಸಮಯದ ನಂತರ ಅಯ್ಯರ್ ಕ್ರೀಸ್ನಲ್ಲಿ ಇರುವಾಗಲೇ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಕೂಡ ಪೆವಿಲಿಯನ್ ಸೇರಿಕೊಂಡರು. 148ಕ್ಕೆ 6 ವಿಕೆಟ್ಗಳ ಪತನದ ನಂತರ, ಶ್ರೇಯಸ್ ಸ್ವತಃ ಮುನ್ನಡೆ ಸಾಧಿಸಿ ರನ್ ಮಳೆ ಸುರಿಸಿದರು. ಭಾರತೀಯ ಬ್ಯಾಟರ್ಗಳನ್ನು ಪೆವಿಲಿಯನ್ಗೆ ಅಟ್ಟುತ್ತಿದ್ದ ಲಂಕಾ ಬೌಲರ್ಗಳು ಅಯ್ಯರ್ ಆಟಕ್ಕೆ ಸುಸ್ತಾದರು.

2 / 4
ಅದರಲ್ಲೂ ಧನಂಜಯ ಡಿ ಸಿಲ್ವಾ ಅವರ ಒಂದೇ ಓವರ್ನಲ್ಲಿ ಎರಡು ದೊಡ್ಡ ಸಿಕ್ಸರ್ಗಳನ್ನು ಹೊಡೆಯುವ ಮೂಲಕ ಶ್ರೇಯಸ್ ಕೇವಲ 54 ಎಸೆತಗಳಲ್ಲಿ ತಮ್ಮ ಎರಡನೇ ಟೆಸ್ಟ್ ಅರ್ಧಶತಕವನ್ನು ಗಳಿಸಿದರು. ಒಂದು ಕಡೆಯಿಂದ ವಿಕೆಟ್ಗಳು ಉರುಳುತ್ತಿದ್ದರೆ ಅತ್ತ ಬದಿಯಿಂದ ಶ್ರೇಯಸ್ನ ಬ್ಯಾಟ್ನಿಂದ ಬೌಂಡರಿಗಳು ಸಿಡಿಯುತ್ತಿದ್ದವು. ಟೆಸ್ಟ್ ಪಂದ್ಯದಲ್ಲಿ ODI ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದ ಶ್ರೇಯಸ್ ತಮ್ಮ ಎರಡನೇ ಶತಕದ ಹಾದಿಯಲ್ಲಿದ್ದರು, ಆದರೆ ಪ್ರವೀಣ್ ಜಯವಿಕ್ರಮ ಅವರು ಸಿಕ್ಸರ್ ಹೊಡೆಯಲು ಪ್ರಯತ್ನಿಸುತ್ತಿರುವಾಗ ಸ್ಟಂಪ್ ಔಟ್ ಆದರು. ಇದರ ಜೊತೆಗೆ ಭಾರತದ ಇನ್ನಿಂಗ್ಸ್ ಕೂಡ ಕೊನೆಗೊಂಡಿತು. ಅಯ್ಯರ್ ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 98 ಎಸೆತಗಳಲ್ಲಿ 92 ರನ್ ಗಳಿಸಿದರು, ಅವರ ಬ್ಯಾಟ್ನಿಂದ 10 ಬೌಂಡರಿ ಮತ್ತು 4 ಸಿಕ್ಸರ್ಗಳು ಬಂದಿದ್ದವು.

3 / 4
ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ 59.1 ಓವರ್ಗೆ 252 ರನ್ಗಳಿಗೆ ಸರ್ವಪತನ ಕಂಡಿತು. ಇತ್ತ ಶ್ರೀಲಂಕಾ ಬ್ಯಾಟರ್ಗಳದ್ದು ಕೂಡ ಇದೇ ಪರಿಸ್ಥಿತಿ. ಭಾರತೀಯ ಬೌಲಿಂಗ್ ಬಿರುಗಾಳಿಗೆ ತತ್ತರಿಸಿರುವ ಸಿಂಹಳೀಯರು ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡಿದ್ದು ಗಳಿಸಿರುವುದು ಮಾತ್ರ 86 ರನ್ಗಳನ್ನಷ್ಟೆ. ಇನ್ನೂ 166 ರನ್ಗಳ ಹಿನ್ನಡೆಯಲ್ಲಿದೆ. ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತು ಮಿಂಚಿದ್ದಾರೆ.

4 / 4

Published On - 7:31 am, Sun, 13 March 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು